AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಬಳಿಕ, ಆಂಧ್ರದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್​! ಕರ್ನಾಟಕದಲ್ಲಿ ಯಾವಾಗ?

ತಮಿಳುನಾಡು ಬಳಿಕ ಇದೀಗ ಆಂಧ್ರದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020 ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

ತಮಿಳುನಾಡು ಬಳಿಕ, ಆಂಧ್ರದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್​! ಕರ್ನಾಟಕದಲ್ಲಿ ಯಾವಾಗ?
ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
Follow us
TV9 Web
| Updated By: ganapathi bhat

Updated on:Apr 07, 2022 | 5:44 PM

ತಮಿಳುನಾಡು ಸರ್ಕಾರದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

ಇದನ್ನೂ ಓದಿ: ಆನ್​ಲೈನ್​ ಗ್ಯಾಂಬ್ಲಿಂಗ್​ ಚಟದಿಂದ ಹೊರಬರಲು ಇದು ಸಕಾಲ..

ಸರ್ಕಾರ ಪಾರದರ್ಶಿಕವಾಗಿ ವ್ಯವಹರಿಸಲಿದೆ ಮಸೂದೆಯ ಬಗ್ಗೆ ಮಾತನಾಡಿದ ಆಂಧ್ರ ಸಿಎಂ ವೈ.ಎಸ್. ಜಗನ್​ಮೋಹನ್ ರೆಡ್ಡಿ, ಆನ್​ಲೈನ್ ಜೂಜಿನಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಸಾಮಾಜಿಕ ಸ್ಥಾನಮಾನಗಳನ್ನು ಬದಿಗಿರಿಸಿ ವ್ಯವಹರಿಸಲಾಗುವುದು. ಈ ವಿಚಾರದಲ್ಲಿ ಸರ್ಕಾರ ಪಾರದರ್ಶಿಕವಾಗಿ ವ್ಯವಹರಿಸಲಿದೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಮಂತ್ರಿಯೊಬ್ಬರ ದೂರ ಸಂಬಂಧಿ ಆನ್​ಲೈನ್ ಜೂಜಿನಲ್ಲಿ ತೊಡಗಿಕೊಂಡಿದ್ದು ತಿಳಿದುಬಂದಿತ್ತು. ಅವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಆನ್​ಲೈನ್ ಆಟಗಳಿಂದಾಗಿ ವಂಚನೆ, ಕಳ್ಳತನ ಮುಂತಾದ ಅಪರಾಧ ಕೃತ್ಯಗಳೂ ಹೆಚ್ಚುತ್ತವೆ ಎಂದು ಆಂಧ್ರ ಗೃಹ ಸಚಿವೆ ಎಮ್. ಸುಚರಿತಾ ಅಭಿಪ್ರಾಯಪಟ್ಟಿದ್ದಾರೆ.

ಅಪರಾಧಿಗಳಿಗೆ ಏನು ಶಿಕ್ಷೆ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು ಒಂದು ವರ್ಷದ ಜೈಲು ಶಿಕ್ಷೆಯನ್ನು ನಿಗಧಿಪಡಿಸಲಾಗಿದ್ದು, ಅಪರಾಧ ಮರುಕಳಿಸಿದರೆ ಅಂಥವರಿಗೆ 10 ಸಾವಿರ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಜಾಮೀನು ರಹಿತ ಶಿಕ್ಷೆ ಇದಾಗಿದೆ.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಇದನ್ನೂ ಓದಿ: OTT Platforms ‘ಮುಚ್ಚುಮರೆ ಇಲ್ಲದ’ ಆನ್​ಲೈನ್ ವೇದಿಕೆಗಳಿಗೆ ಮೂಗುದಾರ ಹಾಕಬೇಕಾ?!

Published On - 11:14 am, Wed, 2 December 20

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್