AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ
ಸಹ ಪ್ರಯಾಣಿಕರೊಂದಿಗೆ ರಿಚರ್ಡ್​ ಬ್ರಾನ್​ಸನ್
TV9 Web
| Edited By: |

Updated on: Jul 03, 2021 | 12:44 PM

Share

ವಾಷಿಂಗ್ಟನ್: ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಭಾರತ ಮೂಲದ ಅಮೆರಿಕಾ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಜಿಗಿಯಲು ಸಿದ್ಧರಾಗಿದ್ದಾರೆ. ಕಲ್ಪನಾ ಚಾವ್ಲಾ ನಂತರ ಅಂತರಿಕ್ಷಯಾನ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಮಹಿಳೆ ಇವರಾಗಿದ್ದು, ಒಟ್ಟಾರೆಯಾಗಿ ಈ ಸಾಧನೆ ಮಾಡುತ್ತಿರುವ ನಾಲ್ಕನೇ ಭಾರತೀಯ ವ್ಯಕ್ತಿ ಎಂಬ ಪ್ರಶಂಸೆಗೂ ಪಾತ್ರರಾಗಿದ್ದಾರೆ. ಜುಲೈ 11ರಂದು ನ್ಯೂ ಮೆಕ್ಸಿಕೋದಿಂದ ವಿಎಸ್​ಎಸ್​ ಯುನಿಟಿ ಆಫ್ ವರ್ಜಿನ್ ಗೆಲಾಕ್ಟಿಕ್ ಎಂಬ ಹೆಸರಿನ ಬಾಹ್ಯಾಕಾಶ ನೌಕೆ ಪ್ರಯಾಣ ಕೈಗೊಳ್ಳುತ್ತಿದ್ದು, ಒಟ್ಟು ಆರು ಮಂದಿಯನ್ನೊಳಗೊಂಡ ಈ ನೌಕೆಯಲ್ಲಿ ಸಿರಿಶಾ ಅವರೊಂದಿಗೆ ಇನ್ನೋರ್ವ ಮಹಿಳೆ ಬೆತ್​ ಮೊಸೆಸ್ ಇರಲಿದ್ದಾರೆ.

ಈ ಬಗ್ಗೆ ಮಾತನಾಡಿರುವ 34 ವರ್ಷದ ಭಾರತ ಮೂಲದ ಸಿರಿಶಾ ಬಾಂಡ್ಲಾ, ನನಗೆ ಈ ಯೋಜನೆಯ ಭಾಗವಾಗಿರುವುದು ಬಹಳ ಸಂತಸದಾಯಕವಾಗಿದೆ. ಯನಿಟಿ22 ಪಯಣದಲ್ಲಿ ಆರು ಜನರೊಟ್ಟಿಗೆ ನಾನೂ ಒಬ್ಬಳಾಗಿರುತ್ತೇನೆ. ಎಲ್ಲ ಜನರಿಗೂ ಬಾಹ್ಯಾಕಾಶ ಕೈಗೆಟಕುವಂತಾಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ ಎಂದು ಸಿರಿಶಾ ಟ್ವೀಟ್​ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಸಿರಿಶಾ ಬಾಂಡ್ಲಾ ಮೂಲತಃ ಆಂಧ್ರಪ್ರದೇಶ ರಾಜ್ಯದ ಗುಂಟೂರಿನವರಾಗಿದ್ದು, ಟೆಕ್ಸಾಸ್​ನಲ್ಲಿ ತಮ್ಮ ಬಾಲ್ಯ ಕಳೆದಿದ್ದಾರೆ. ಸಿರಿಶಾಳ ತಂದೆ ಡಾ.ಮುರಳೀಧರ ಬಾಂಡ್ಲಾ ವಿಜ್ಞಾನಿಯಾಗಿದ್ದು ಅಮೆರಿಕಾದಲ್ಲಿ ಸರ್ಕಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಕೆಯ ತಾತ ಬಾಂಡ್ಲಾ ರಾಘಯ್ಯಾ ಕೃಷಿ ವಿಜ್ಞಾನಿಯಾಗಿದ್ದು, ಗುಂಟೂರು ಜಿಲ್ಲೆಯ ಜನಪ್ದು ಹಳ್ಳಿಯಲ್ಲಿ ವಾಸವಿದ್ದಾರೆ. ಮೊಮ್ಮಗಳ ಈ ಸಾಧನೆಯನ್ನು ನೋಡಿದ ಅವರು ಅದರ ಬಗ್ಗೆ ಬಹಳ ಹೆಮ್ಮೆ ವ್ಯಕ್ತಪಡಿಸಿದ್ದು, ಸಿರಿಶಾ ಮೊದಲಿನಿಂದಲೂ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಳು ಈಗ ಅವಳ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಸೂರ್ಯನ ಅತಿಸನಿಹದ ಚಿತ್ರ ತೆಗೆದ ಬಾಹ್ಯಾಕಾಶ ನೌಕೆ: ಸೂರ್ಯನ ಅಧ್ಯಯನಕ್ಕೆ ಸಿಕ್ಕಿದೆ ಹೊಸ ವೇಗ

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK