AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ
ಸಹ ಪ್ರಯಾಣಿಕರೊಂದಿಗೆ ರಿಚರ್ಡ್​ ಬ್ರಾನ್​ಸನ್
TV9 Web
| Edited By: |

Updated on: Jul 03, 2021 | 12:44 PM

Share

ವಾಷಿಂಗ್ಟನ್: ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಭಾರತ ಮೂಲದ ಅಮೆರಿಕಾ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಜಿಗಿಯಲು ಸಿದ್ಧರಾಗಿದ್ದಾರೆ. ಕಲ್ಪನಾ ಚಾವ್ಲಾ ನಂತರ ಅಂತರಿಕ್ಷಯಾನ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಮಹಿಳೆ ಇವರಾಗಿದ್ದು, ಒಟ್ಟಾರೆಯಾಗಿ ಈ ಸಾಧನೆ ಮಾಡುತ್ತಿರುವ ನಾಲ್ಕನೇ ಭಾರತೀಯ ವ್ಯಕ್ತಿ ಎಂಬ ಪ್ರಶಂಸೆಗೂ ಪಾತ್ರರಾಗಿದ್ದಾರೆ. ಜುಲೈ 11ರಂದು ನ್ಯೂ ಮೆಕ್ಸಿಕೋದಿಂದ ವಿಎಸ್​ಎಸ್​ ಯುನಿಟಿ ಆಫ್ ವರ್ಜಿನ್ ಗೆಲಾಕ್ಟಿಕ್ ಎಂಬ ಹೆಸರಿನ ಬಾಹ್ಯಾಕಾಶ ನೌಕೆ ಪ್ರಯಾಣ ಕೈಗೊಳ್ಳುತ್ತಿದ್ದು, ಒಟ್ಟು ಆರು ಮಂದಿಯನ್ನೊಳಗೊಂಡ ಈ ನೌಕೆಯಲ್ಲಿ ಸಿರಿಶಾ ಅವರೊಂದಿಗೆ ಇನ್ನೋರ್ವ ಮಹಿಳೆ ಬೆತ್​ ಮೊಸೆಸ್ ಇರಲಿದ್ದಾರೆ.

ಈ ಬಗ್ಗೆ ಮಾತನಾಡಿರುವ 34 ವರ್ಷದ ಭಾರತ ಮೂಲದ ಸಿರಿಶಾ ಬಾಂಡ್ಲಾ, ನನಗೆ ಈ ಯೋಜನೆಯ ಭಾಗವಾಗಿರುವುದು ಬಹಳ ಸಂತಸದಾಯಕವಾಗಿದೆ. ಯನಿಟಿ22 ಪಯಣದಲ್ಲಿ ಆರು ಜನರೊಟ್ಟಿಗೆ ನಾನೂ ಒಬ್ಬಳಾಗಿರುತ್ತೇನೆ. ಎಲ್ಲ ಜನರಿಗೂ ಬಾಹ್ಯಾಕಾಶ ಕೈಗೆಟಕುವಂತಾಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ ಎಂದು ಸಿರಿಶಾ ಟ್ವೀಟ್​ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಸಿರಿಶಾ ಬಾಂಡ್ಲಾ ಮೂಲತಃ ಆಂಧ್ರಪ್ರದೇಶ ರಾಜ್ಯದ ಗುಂಟೂರಿನವರಾಗಿದ್ದು, ಟೆಕ್ಸಾಸ್​ನಲ್ಲಿ ತಮ್ಮ ಬಾಲ್ಯ ಕಳೆದಿದ್ದಾರೆ. ಸಿರಿಶಾಳ ತಂದೆ ಡಾ.ಮುರಳೀಧರ ಬಾಂಡ್ಲಾ ವಿಜ್ಞಾನಿಯಾಗಿದ್ದು ಅಮೆರಿಕಾದಲ್ಲಿ ಸರ್ಕಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಕೆಯ ತಾತ ಬಾಂಡ್ಲಾ ರಾಘಯ್ಯಾ ಕೃಷಿ ವಿಜ್ಞಾನಿಯಾಗಿದ್ದು, ಗುಂಟೂರು ಜಿಲ್ಲೆಯ ಜನಪ್ದು ಹಳ್ಳಿಯಲ್ಲಿ ವಾಸವಿದ್ದಾರೆ. ಮೊಮ್ಮಗಳ ಈ ಸಾಧನೆಯನ್ನು ನೋಡಿದ ಅವರು ಅದರ ಬಗ್ಗೆ ಬಹಳ ಹೆಮ್ಮೆ ವ್ಯಕ್ತಪಡಿಸಿದ್ದು, ಸಿರಿಶಾ ಮೊದಲಿನಿಂದಲೂ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಳು ಈಗ ಅವಳ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಸೂರ್ಯನ ಅತಿಸನಿಹದ ಚಿತ್ರ ತೆಗೆದ ಬಾಹ್ಯಾಕಾಶ ನೌಕೆ: ಸೂರ್ಯನ ಅಧ್ಯಯನಕ್ಕೆ ಸಿಕ್ಕಿದೆ ಹೊಸ ವೇಗ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು