AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ
ಸಹ ಪ್ರಯಾಣಿಕರೊಂದಿಗೆ ರಿಚರ್ಡ್​ ಬ್ರಾನ್​ಸನ್
TV9 Web
| Edited By: |

Updated on: Jul 03, 2021 | 12:44 PM

Share

ವಾಷಿಂಗ್ಟನ್: ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಭಾರತ ಮೂಲದ ಅಮೆರಿಕಾ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಜಿಗಿಯಲು ಸಿದ್ಧರಾಗಿದ್ದಾರೆ. ಕಲ್ಪನಾ ಚಾವ್ಲಾ ನಂತರ ಅಂತರಿಕ್ಷಯಾನ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಮಹಿಳೆ ಇವರಾಗಿದ್ದು, ಒಟ್ಟಾರೆಯಾಗಿ ಈ ಸಾಧನೆ ಮಾಡುತ್ತಿರುವ ನಾಲ್ಕನೇ ಭಾರತೀಯ ವ್ಯಕ್ತಿ ಎಂಬ ಪ್ರಶಂಸೆಗೂ ಪಾತ್ರರಾಗಿದ್ದಾರೆ. ಜುಲೈ 11ರಂದು ನ್ಯೂ ಮೆಕ್ಸಿಕೋದಿಂದ ವಿಎಸ್​ಎಸ್​ ಯುನಿಟಿ ಆಫ್ ವರ್ಜಿನ್ ಗೆಲಾಕ್ಟಿಕ್ ಎಂಬ ಹೆಸರಿನ ಬಾಹ್ಯಾಕಾಶ ನೌಕೆ ಪ್ರಯಾಣ ಕೈಗೊಳ್ಳುತ್ತಿದ್ದು, ಒಟ್ಟು ಆರು ಮಂದಿಯನ್ನೊಳಗೊಂಡ ಈ ನೌಕೆಯಲ್ಲಿ ಸಿರಿಶಾ ಅವರೊಂದಿಗೆ ಇನ್ನೋರ್ವ ಮಹಿಳೆ ಬೆತ್​ ಮೊಸೆಸ್ ಇರಲಿದ್ದಾರೆ.

ಈ ಬಗ್ಗೆ ಮಾತನಾಡಿರುವ 34 ವರ್ಷದ ಭಾರತ ಮೂಲದ ಸಿರಿಶಾ ಬಾಂಡ್ಲಾ, ನನಗೆ ಈ ಯೋಜನೆಯ ಭಾಗವಾಗಿರುವುದು ಬಹಳ ಸಂತಸದಾಯಕವಾಗಿದೆ. ಯನಿಟಿ22 ಪಯಣದಲ್ಲಿ ಆರು ಜನರೊಟ್ಟಿಗೆ ನಾನೂ ಒಬ್ಬಳಾಗಿರುತ್ತೇನೆ. ಎಲ್ಲ ಜನರಿಗೂ ಬಾಹ್ಯಾಕಾಶ ಕೈಗೆಟಕುವಂತಾಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ ಎಂದು ಸಿರಿಶಾ ಟ್ವೀಟ್​ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಸದರಿ ಯೋಜನೆಯ ಬಗ್ಗೆ ಸ್ಪೇಸ್​.ಕಾಂ ಜತೆ ಮಾತನಾಡಿರುವ ಸಿರಿಶಾ ಬಾಂಡ್ಲಾ, ವರ್ಜಿನ್​ ಗೆಲಾಕ್ಟಿಕ್​ ನೌಕೆಯು ಅಂತರಿಕ್ಷದಲ್ಲಿ ಸುಮಾರು 60ರಿಂದ 75 ನಿಮಿಷಗಳ ಕಾಲ ಇರಲಿದೆ. ನಂತರ ನ್ಯೂ ಮೆಕ್ಸಿಕೋದಲ್ಲಿ ನಿಗದಿಪಡಿಸಿದ ಪ್ರದೇಶಕ್ಕೆ ಬಂದಿಳಿಯಲಿದೆ ಎಂದು ತಿಳಿಸಿದ್ದಾರೆ.

ಸಿರಿಶಾ ಬಾಂಡ್ಲಾ ಮೂಲತಃ ಆಂಧ್ರಪ್ರದೇಶ ರಾಜ್ಯದ ಗುಂಟೂರಿನವರಾಗಿದ್ದು, ಟೆಕ್ಸಾಸ್​ನಲ್ಲಿ ತಮ್ಮ ಬಾಲ್ಯ ಕಳೆದಿದ್ದಾರೆ. ಸಿರಿಶಾಳ ತಂದೆ ಡಾ.ಮುರಳೀಧರ ಬಾಂಡ್ಲಾ ವಿಜ್ಞಾನಿಯಾಗಿದ್ದು ಅಮೆರಿಕಾದಲ್ಲಿ ಸರ್ಕಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಕೆಯ ತಾತ ಬಾಂಡ್ಲಾ ರಾಘಯ್ಯಾ ಕೃಷಿ ವಿಜ್ಞಾನಿಯಾಗಿದ್ದು, ಗುಂಟೂರು ಜಿಲ್ಲೆಯ ಜನಪ್ದು ಹಳ್ಳಿಯಲ್ಲಿ ವಾಸವಿದ್ದಾರೆ. ಮೊಮ್ಮಗಳ ಈ ಸಾಧನೆಯನ್ನು ನೋಡಿದ ಅವರು ಅದರ ಬಗ್ಗೆ ಬಹಳ ಹೆಮ್ಮೆ ವ್ಯಕ್ತಪಡಿಸಿದ್ದು, ಸಿರಿಶಾ ಮೊದಲಿನಿಂದಲೂ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಳು ಈಗ ಅವಳ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಸೂರ್ಯನ ಅತಿಸನಿಹದ ಚಿತ್ರ ತೆಗೆದ ಬಾಹ್ಯಾಕಾಶ ನೌಕೆ: ಸೂರ್ಯನ ಅಧ್ಯಯನಕ್ಕೆ ಸಿಕ್ಕಿದೆ ಹೊಸ ವೇಗ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ