AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು

ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ.

ಆಂಧ್ರದಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ಕ್ರಮ; ಶೀಘ್ರದಲ್ಲೇ 14 ಮೆಡಿಕಲ್​ ಕಾಲೇಜುಗಳ ನಿರ್ಮಾಣ, 7880 ಕೋಟಿ ರೂ. ಮೀಸಲು
ಜಗನ್ ಮೋಹನ್ ರೆಡ್ಡಿ
Lakshmi Hegde
|

Updated on:Jun 01, 2021 | 9:24 AM

Share

ದೆಹಲಿ: ಆಂಧ್ರಪ್ರದೇಶದಾದ್ಯಂತ ಒಟ್ಟು 14 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅಲ್ಲಿನ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಸೋಮವಾರ ಅಡಿಗಲ್ಲು ಸ್ಥಾಪನೆ ಮಾಡಿದರು. ಈ ಮೂಲಕ ಅಲ್ಲಿನ ರಾಜಸರ್ಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಶೇ.150ಕ್ಕೆ ಹೆಚ್ಚಿಸಲು ಮುಂದಾಗಿದೆ.

ಆಂಧ್ರಪ್ರದೇಶದ ಪುಲಿವೆಂಡುಲ, ಪಡೇರು, ಮಚಿಲಿಪಟ್ನಂ, ವಿಜಯನಗರಂ, ಅನಕಪಲ್ಲಿ, ರಾಜಮಂಡ್ರಿ, ಅಮಲಾಪುರಂ, ಪಾಲಕೊಲ್ಲು, ಎಲೂರು, ಬಾಪಟ್ಲಾ, ಮಾರ್ಕಪುರಂ, ಮದನಪಲ್ಲಿ, ಪೆನುಕೋನಾ, ನಂದ್ಯಾಲ್ ಮತ್ತು ಅಡೋನಿಗಳಲ್ಲಿ ಈ ಹೊಸ ಕಾಲೇಜುಗಳು ನಿರ್ಮಾಣವಾಗಲಿದ್ದು, ಈ ಕಾರ್ಯಕ್ಕಾಗಿ ಒಟ್ಟು 7880 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದರೊಂದಿಗೆ ರಾಜ್ಯದಲ್ಲಿರುವ ಆರೋಗ್ಯ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು 16,000 ಕೋಟಿ ರೂಪಾಯಿಯನ್ನು ಸಿಎಂ ಜಗನ್​ ರೆಡ್ಡಿ ಬಿಡುಗಡೆ ಮಾಡಿದ್ದಾರೆ. ಇನ್ನು ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ವಲಯವನ್ನೂ ಪ್ರೋತ್ಸಾಹಿಸಲು ನಿರ್ಧರಿಸಿರಿವು ಜಗನ್​ ರೆಡ್ಡಿ, ಯಾರೇ ಸ್ಪೆಶಾಲಿಟಿ, ಸೂಪರ್​ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದರೂ ಅವರಿಗೆ ಉಚಿತ ಭೂಮಿ ನೀಡಿ ಪ್ರೋತ್ಸಾಹಿಸಲಾಗುವುದು. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ.ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Petrol Price Today: ಜೂನ್​ ತಿಂಗಳ ಆರಂಭದಿಂದಲೇ ಪೆಟ್ರೋಲ್​, ಡೀಸೆಲ್​ ದರ ಹೆಚ್ಚಳ; ಮುಂಬೈ ನಗರದಲ್ಲಿ ಶತಕದ ಗಡಿ ದಾಟಿ ಮುನ್ನುಗ್ಗಿದ​ ಪೆಟ್ರೋಲ್​ ಬೆಲೆ

Published On - 9:23 am, Tue, 1 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್