AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಬೆಟ್ಟ ಹತ್ತುತ್ತಿರುವಾಗ ಅಸ್ವಸ್ಥರಾದ ಭಕ್ತರು; 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು ಆಸ್ಪತ್ರೆಗೆ ಸೇರಿಸಿದ ಕಾನ್​ಸ್ಟೆಬಲ್

ಶೇಖ್​ ಅರ್ಶದ್​ ಎಂಬ ಕಾನ್​ಸ್ಟೆಬಲ್​ ನಾಗೇಶ್ವರಮ್ಮನನ್ನು ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಸುಮಾರು 6 ಕಿ.ಮೀ.ದೂರ ಹೊತ್ತು ಸಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ತಿರುಮಲ ಬೆಟ್ಟ ಹತ್ತುತ್ತಿರುವಾಗ ಅಸ್ವಸ್ಥರಾದ ಭಕ್ತರು; 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು ಆಸ್ಪತ್ರೆಗೆ ಸೇರಿಸಿದ ಕಾನ್​ಸ್ಟೆಬಲ್
ಹಿರಿಯರನ್ನು ಹೆಗಲಮೇಲೆ ಹೊತ್ತು ಸಾಗುತ್ತಿರುವ ಪೊಲೀಸ್ ಕಾನ್​ಸ್ಟೆಬಲ್​
Lakshmi Hegde
|

Updated on:Dec 24, 2020 | 6:24 PM

Share

ತಿರುಮಲ: ದೇವರ ದರ್ಶನಕ್ಕೆಂದು ತಿರುಪತಿ ಬೆಟ್ಟ ಹತ್ತುತ್ತಿದ್ದಂತೆ ದಾರಿ ಮಧ್ಯೆಯೇ ಅನಾರೋಗ್ಯಕ್ಕೀಡಾದ ಮಹಿಳೆಯನ್ನು ಹಾಗೂ ಜತೆಗಿದ್ದ ಇನ್ನೋರ್ವ ವಯಸ್ಸಾದ ವ್ಯಕ್ತಿಯನ್ನು ಮುಸ್ಲಿಂ ಪೊಲೀಸ್ ಕಾನ್​ಸ್ಟೆಬಲ್ ಒಬ್ಬರು ಹೆಗಲ ಮೇಲೆ ಹೊತ್ತು ಸಾಗಿದ ಮಾನವೀಯ ಘಟನೆ ನಡೆದಿದೆ.

ನಂದಲೂರ್ ಮಂಡಲ್​ ನಿವಾಸಿಯಾಗಿರುವ ಮಂಗಿ ನಾಗೇಶ್ವರಮ್ಮ (58) ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಿದ್ದರು. ಆದರೆ ಮಾರ್ಗಮಧ್ಯದಲ್ಲಿ ಅವರಿಗೆ ರಕ್ತದ ಒತ್ತಡ ಅಧಿಕವಾಗಿ ಅಸ್ವಸ್ಥರಾದರು. ಮುಂದೆ ನಡೆಯಲು ಆಕೆಗೆ ಸಾಧ್ಯವಾಗಲೇ ಇಲ್ಲ. ಈ ಹೊತ್ತಲ್ಲಿ ಭಕ್ತರೊಂದಿಗೇ ನಡೆದು ಬರುತ್ತಿದ್ದ ಕಡಪಾ ಜಿಲ್ಲೆಯ ವಿಶೇಷ ಪೊಲೀಸ್ ದಳದ ಸಿಬ್ಬಂದಿ ಇದನ್ನು ಗಮನಿಸಿದರು.

ಅವರಲ್ಲಿ ಶೇಖ್​ ಅರ್ಶದ್​ ಎಂಬ ಕಾನ್​ಸ್ಟೆಬಲ್​ ನಾಗೇಶ್ವರಮ್ಮನವರನ್ನು ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಸುಮಾರು 6 ಕಿ.ಮೀ.ದೂರ ಹೊತ್ತು ಸಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಹಾಗೇ, ನಾಗೇಶ್ವರ್​ ರಾವ್ ಎಂಬ ಹಿರಿಯ ವ್ಯಕ್ತಿಯ ಆರೋಗ್ಯದಲ್ಲೂ ಏರುಪೇರಾಗಿ, ಅವರನ್ನೂ ಭುಜದ ಮೇಲೆ ಹೊತ್ತು, ವಾಹನ ಸಂಚಾರ ಇರುವ ರಸ್ತೆಗೆ ಕರೆದೊಯ್ದಿದ್ದಾರೆ. ಅರ್ಶದ್​ರ ಈ ಕಾರ್ಯವನ್ನು ಮೇಲಧಿಕಾರಿಗಳು, ಉಳಿದ ಭಕ್ತರು ಶ್ಲಾಘಿಸಿದ್ದಾರೆ.

ಮಗುವಿಗೆ ವಾಹನ ಡಿಕ್ಕಿ: ಮಾನವೀಯತೆಯೇ ಶ್ರೇಷ್ಠ ಧರ್ಮ ಎಂದು ನೆರವು ನೀಡಿದ ಶಾ ಬಜಾರ್ ವ್ಯಾಪಾರಿಗಳು

Published On - 6:19 pm, Thu, 24 December 20

Follow Us
Lakshmi Hegde
Lakshmi Hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ