AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ

ಈದ್-ಉಲ್-ಫಿತರ್ ದಿನ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ. ಹಾಗೂ ಈದ್ಗಾ, ಬಹಿರಂಗ ಪ್ರದೇಶಗಳಲ್ಲಿ‌ ಪ್ರಾರ್ಥನೆ‌ ಮಾಡುವುದಕ್ಕೆ‌ ನಿಷೇಧ ಹೇರಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ‌ ಸಲ್ಲಿಸಲು ಸೂಚನೆ ನೀಡಲಾಗಿದೆ.

ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ
ರಂಜಾನ್
ಆಯೇಷಾ ಬಾನು
|

Updated on: May 12, 2021 | 8:04 AM

Share

ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆಗೆ ಆಂಧ್ರ ಸರ್ಕಾರ ಮಹತ್ವದ ಆದೇಶ ಜಾರಿ ಮಾಡಿದೆ. ರಾಜ್ಯದ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ.

ನಿನ್ನೆ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು ತೆಲಂಗಾಣದಲ್ಲಿ ಮೇ 12 ಅಂದ್ರೆ ಇಂದಿನಿಂದ 10 ದಿನಗಳ ಲಾಕ್ಡೌನ್ ಜಾರಿಯಾಗಿದೆ. ಇಂದಿನಿಂದ 10 ದಿನಗಳ ಕಾಲ ಮುಂಜಾನೆ 6ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಅಗತ್ಯವಸ್ತುಗಳು ಸಿಗಲಿವೆ. ಹೀಗಾಗಿ ಈಗ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಬರುತ್ತಿದ್ದು ಈ ಬಗ್ಗೆ ಕೆಲವು ನಿಯಮಾವಳಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈದ್-ಉಲ್-ಫಿತರ್ ದಿನ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ. ಹಾಗೂ ಈದ್ಗಾ, ಬಹಿರಂಗ ಪ್ರದೇಶಗಳಲ್ಲಿ‌ ಪ್ರಾರ್ಥನೆ‌ ಮಾಡುವುದಕ್ಕೆ‌ ನಿಷೇಧ ಹೇರಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ‌ ಸಲ್ಲಿಸಲು ಸೂಚನೆ ನೀಡಲಾಗಿದೆ. ಒಂದೇ ಕಡೆ 50 ಜನರಿಗಿಂತ ಹೆಚ್ಚಿನ ಜನರು ಸೇರಬಾರದು, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ ಧರಿಸುವುದು ಕಡ್ಡಾಯ. ಬೆಳಿಗ್ಗೆ 6 ರಿಂದ‌12 ಗಂಟೆಯ ವರೆಗೆ 2 ಹಂತಗಳಲ್ಲಿ ಪ್ರಾರ್ಥನೆ ಮಾಡಬಹುದು. ಇನ್ನು ಮುಖ್ಯವಾಗಿ ಶುಭಾಶಯ ಹೇಳಲು ಕೈ ಕುಲುಕುವುದು, ಆಲಿಂಗನ‌ ಮಾಡುವುದನ್ನು ನಿಷೇಧಿಸಲಾಗಿದೆ.

ಸೋಂಕಿತ ಭೀಕರತೆ ಹೆಚ್ಚಿರುವುದರಿಂದ ವೃದ್ಧರು, ಮಕ್ಕಳು, ಅನಾರೋಗ್ಯಕ್ಕೆ ಒಳಗಾದವರು ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಮಾಸ್ಕ್ ಧರಿಸದಿದ್ದರೆ ಅನುಮತಿ‌ ಇಲ್ಲ, ಸ್ಯಾನಿಟೈಸರ್, ಸಾಬೂನಿನಿಂದ‌ ಕೈ ತೊಳೆದು ಶುಭ್ರತೆ ಪಾಲಿಸಬೇಕು. ಮಸೀದ್ಗಳ‌ ನಿರ್ವಾಹಕರು‌ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು, ಕಮಿಷನರ್ಗಳು ಕೊವಿಡ್ ನಿಯಮ‌ ಪಾಲನೆ‌ ಬಗ್ಗೆ ಪರಿಶೀಲನೆ‌ ಮಾಡಬೇಕೆಂದು ಆಂಧ್ರಪ್ರದೇಶ ಸರಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: Ramadan Eid 2021 Date: ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ