AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, […]

ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?
ಆಯೇಷಾ ಬಾನು
| Edited By: |

Updated on:Jul 23, 2020 | 12:58 PM

Share

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸರ್ಕಾರವು ಸೆಪ್ಟೆಂಬರ್ 5 ರಂದು ಶಾಲೆಗಳನ್ನು ಪುನರಾರಂಭಿಸಲು ದಿನಾಂಕವನ್ನು ನಿಗದಿಪಡಿಸಿದ್ದರೂ, ಆ ವೇಳೆ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುದನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

ಶಾಲೆಗಳು ಮತ್ತೆ ತೆರೆಯುವ ತನಕ, ಮಧ್ಯಾಹ್ನದ ಊಟಕ್ಕೆ ಬದಲಾಗಿ ಪಡಿತರವನ್ನು ವಿದ್ಯಾರ್ಥಿಗಳ ಮನೆಗಳಿಗೆ ಪೂರೈಸಲಾಗುವುದು ಎಂದು ಅವರು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (ಎಲ್‌ಕೆಜಿ ಮತ್ತು ಯುಕೆಜಿ) ಪರಿಚಯಿಸಲಾಗುವುದು ಮತ್ತು ಕಿರಿಯ ಸರ್ಕಾರಿ ಕಾಲೇಜುಗಳಲ್ಲಿ ಎಪಿ ಇಎಮ್‌ಸೆಟ್ (AP EAMCET), ಜೆಇಇ (JEE), ಐಐಐಟಿ(IIIT) ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

Published On - 9:13 am, Wed, 22 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ