AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಮಗು ಸಾವು!

ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಅನಂತಪುರದ ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ವೇಣಿ ಎಂಬಾಕೆಯ ಪುತ್ರಿ ಅಕ್ಷಿತಾ ಆಟವಾಡುತ್ತಾ ಬರುತ್ತಿದ್ದಾಗ ಆಕಸ್ಮಿಕವಾಗಿ ಬಿಸಿಯಾದ ಹಾಲಿನ ಪಾತ್ರೆಯೊಳಗೆ ಬಿದ್ದಿದ್ದಾಳೆ. ಈ ಘಟನೆ ಆ ಅಡುಗೆಮನೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Shocking Video: ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಮಗು ಸಾವು!
Andhra Girl Death
ಸುಷ್ಮಾ ಚಕ್ರೆ
|

Updated on:Sep 26, 2025 | 4:26 PM

Share

ಅನಂತಪುರ, ಸೆಪ್ಟೆಂಬರ್ 26: ಆಂಧ್ರಪ್ರದೇಶದ (Andhra Pradesh) ಅನಂತಪುರದ ಶಾಲೆಯೊಂದರಲ್ಲಿ ಬಿಸಿಯಾದ ಹಾಲನ್ನು ಇಡಲಾಗಿದ್ದ ಪಾತ್ರೆಯೊಳಗೆ ಬಿದ್ದ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣವೇಣಿ ತನ್ನ ಜೊತೆ 17 ತಿಂಗಳ ಮಗಳನ್ನೂ ಕರೆದುಕೊಂಡು ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣದಿಂದ ಆ ಬಾಲಕಿ ಅಮ್ಮನ ಜೊತೆ ಶಾಲೆಗೆ ಬಂದಿದ್ದಳು. ಆದರೆ, ಆ ದಿನವೇ ಆಕೆಯ ಕೊನೆಯ ದಿನವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಘಟನೆ ನಡೆದ ದಿನ, ಕೃಷ್ಣ ವೇಣಿ ಶಾಲೆಯಲ್ಲಿ ಕೆಲಸ ಮಾಡುವಾಗ ತನ್ನ 17 ತಿಂಗಳ ಮಗಳನ್ನು ಕರೆದುಕೊಂಡು ಬಂದಿದ್ದರು. ಅವಳು ತನ್ನ ಕೆಲಸದಲ್ಲಿ ತೊಡಗಿದ್ದಾಗ ಅವರ ಪುಟ್ಟ ಮಗಳು ಅಕ್ಷಿತಾ ಅಲ್ಲೇ ಆಚೀಚೆ ಆಟವಾಡುತ್ತಾ ಇದ್ದಳು. ಆಗ ಒಂದು ಬೆಕ್ಕು ಅಡುಗೆಮನೆಯೊಳಗೆ ಬಂದಿತು. ಆ ಬೆಕ್ಕನ್ನು ಹಿಡಿಯಲು ಅಕ್ಷಿತಾ ಕೂಡ ಅದರ ಹಿಂದೆ ಬಂದಳು. ಆಗ ಆ ಬೆಕ್ಕು ಬಿಸಿಯಾದ ಹಾಲನ್ನು ತಣ್ಣಗಾಗಲು ಇಡಲಾಗಿದ್ದ ದೊಡ್ಡ ಪಾತ್ರೆಯ ಬಳಿಯಿಂದ ಓಡಿಹೋಯಿತು. ಅದರ ಹಿಂದೆಯೇ ಬಂದ ಅಕ್ಷಿತಾ ಕಾಲಿಗೆ ಆ ಪಾತ್ರೆ ತಾಗಿ ಆಕಸ್ಮಿಕವಾಗಿ ಬಿಸಿಯಾದ ಹಾಲು ತುಂಬಿದ್ದ ಪಾತ್ರೆಯೊಳಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಕರಡಿ ದಾಳಿಯಿಂದ ಪವಾಡದಂತೆ ಪಾರಾದ ವ್ಯಕ್ತಿ; ಕಾರೊಳಗೆ ಹಾರಿ ಜೀವ ಉಳಿಸಿಕೊಂಡ ವಿಡಿಯೋ ವೈರಲ್

ದೊಡ್ಡದಾದ ಪಾತ್ರೆಯಿಂದ ಹೊರಗೆ ಬರಲಾಗದೆ ಆಕೆ ಜೋರಾಗಿ ಕಿರುಚಾಡಿದ್ದಾಳೆ. ಆಗ ಮಗಳ ಕಿರುಚಾಟ ಕೇಳಿ ಕೃಷ್ಣವೇಣಿ ಓಡಿಬಂದು ಮಗಳನ್ನು ಪಾತ್ರೆಯಿಂದ ಮೇಲೆತ್ತಿದ್ದಾರೆ. ಬಿಸಿಯಾದ ಹಾಲು ತಾಗಿದ್ದರಿಂದ ಅಕ್ಷಿತಾಳ ಮೈ ಸುಟ್ಟುಹೋಗಿತ್ತು. ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿಂದ ಅವರು ಜಿಲ್ಲಾಸ್ಪತ್ರೆಗೆ ಕಳುಹಿಸಿದರು. ಆದರೆ, ಎಳೆಯ ಬಾಲಕಿಯ ಮೈ ಸುಟ್ಟುಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:18 pm, Fri, 26 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ