AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಮಗು ಸಾವು!

ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಅನಂತಪುರದ ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ವೇಣಿ ಎಂಬಾಕೆಯ ಪುತ್ರಿ ಅಕ್ಷಿತಾ ಆಟವಾಡುತ್ತಾ ಬರುತ್ತಿದ್ದಾಗ ಆಕಸ್ಮಿಕವಾಗಿ ಬಿಸಿಯಾದ ಹಾಲಿನ ಪಾತ್ರೆಯೊಳಗೆ ಬಿದ್ದಿದ್ದಾಳೆ. ಈ ಘಟನೆ ಆ ಅಡುಗೆಮನೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Shocking Video: ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು 17 ತಿಂಗಳ ಮಗು ಸಾವು!
Andhra Girl Death
ಸುಷ್ಮಾ ಚಕ್ರೆ
|

Updated on:Sep 26, 2025 | 4:26 PM

Share

ಅನಂತಪುರ, ಸೆಪ್ಟೆಂಬರ್ 26: ಆಂಧ್ರಪ್ರದೇಶದ (Andhra Pradesh) ಅನಂತಪುರದ ಶಾಲೆಯೊಂದರಲ್ಲಿ ಬಿಸಿಯಾದ ಹಾಲನ್ನು ಇಡಲಾಗಿದ್ದ ಪಾತ್ರೆಯೊಳಗೆ ಬಿದ್ದ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣವೇಣಿ ತನ್ನ ಜೊತೆ 17 ತಿಂಗಳ ಮಗಳನ್ನೂ ಕರೆದುಕೊಂಡು ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣದಿಂದ ಆ ಬಾಲಕಿ ಅಮ್ಮನ ಜೊತೆ ಶಾಲೆಗೆ ಬಂದಿದ್ದಳು. ಆದರೆ, ಆ ದಿನವೇ ಆಕೆಯ ಕೊನೆಯ ದಿನವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಘಟನೆ ನಡೆದ ದಿನ, ಕೃಷ್ಣ ವೇಣಿ ಶಾಲೆಯಲ್ಲಿ ಕೆಲಸ ಮಾಡುವಾಗ ತನ್ನ 17 ತಿಂಗಳ ಮಗಳನ್ನು ಕರೆದುಕೊಂಡು ಬಂದಿದ್ದರು. ಅವಳು ತನ್ನ ಕೆಲಸದಲ್ಲಿ ತೊಡಗಿದ್ದಾಗ ಅವರ ಪುಟ್ಟ ಮಗಳು ಅಕ್ಷಿತಾ ಅಲ್ಲೇ ಆಚೀಚೆ ಆಟವಾಡುತ್ತಾ ಇದ್ದಳು. ಆಗ ಒಂದು ಬೆಕ್ಕು ಅಡುಗೆಮನೆಯೊಳಗೆ ಬಂದಿತು. ಆ ಬೆಕ್ಕನ್ನು ಹಿಡಿಯಲು ಅಕ್ಷಿತಾ ಕೂಡ ಅದರ ಹಿಂದೆ ಬಂದಳು. ಆಗ ಆ ಬೆಕ್ಕು ಬಿಸಿಯಾದ ಹಾಲನ್ನು ತಣ್ಣಗಾಗಲು ಇಡಲಾಗಿದ್ದ ದೊಡ್ಡ ಪಾತ್ರೆಯ ಬಳಿಯಿಂದ ಓಡಿಹೋಯಿತು. ಅದರ ಹಿಂದೆಯೇ ಬಂದ ಅಕ್ಷಿತಾ ಕಾಲಿಗೆ ಆ ಪಾತ್ರೆ ತಾಗಿ ಆಕಸ್ಮಿಕವಾಗಿ ಬಿಸಿಯಾದ ಹಾಲು ತುಂಬಿದ್ದ ಪಾತ್ರೆಯೊಳಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಕರಡಿ ದಾಳಿಯಿಂದ ಪವಾಡದಂತೆ ಪಾರಾದ ವ್ಯಕ್ತಿ; ಕಾರೊಳಗೆ ಹಾರಿ ಜೀವ ಉಳಿಸಿಕೊಂಡ ವಿಡಿಯೋ ವೈರಲ್

ದೊಡ್ಡದಾದ ಪಾತ್ರೆಯಿಂದ ಹೊರಗೆ ಬರಲಾಗದೆ ಆಕೆ ಜೋರಾಗಿ ಕಿರುಚಾಡಿದ್ದಾಳೆ. ಆಗ ಮಗಳ ಕಿರುಚಾಟ ಕೇಳಿ ಕೃಷ್ಣವೇಣಿ ಓಡಿಬಂದು ಮಗಳನ್ನು ಪಾತ್ರೆಯಿಂದ ಮೇಲೆತ್ತಿದ್ದಾರೆ. ಬಿಸಿಯಾದ ಹಾಲು ತಾಗಿದ್ದರಿಂದ ಅಕ್ಷಿತಾಳ ಮೈ ಸುಟ್ಟುಹೋಗಿತ್ತು. ತಕ್ಷಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿಂದ ಅವರು ಜಿಲ್ಲಾಸ್ಪತ್ರೆಗೆ ಕಳುಹಿಸಿದರು. ಆದರೆ, ಎಳೆಯ ಬಾಲಕಿಯ ಮೈ ಸುಟ್ಟುಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:18 pm, Fri, 26 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು