AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ವಜ್ರ ಬೇಟೆ, ನಾಲ್ಕು ಕಡೆ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆ

ಆಂಧ್ರಪ್ರದೇಶದ ನಾಲ್ಕು ಪ್ರದೇಶಗಳಲ್ಲಿ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆಯಾಗಿವೆ. ಜೊನ್ನಗಿರಿಯ ರೈತರೊಬ್ಬರಿಗೆ ವಜ್ರ ಸಿಕ್ಕಿದ್ದು, ವಜ್ರ ವ್ಯಾಪಾರಿಗೆ ಮಾರಾಟ ಮಾಡಿ 6 ಲಕ್ಷ ರೂ. ಗಳಿಸಿದ್ದಾರೆ. ಶನಿವಾರ ಮಡ್ಡಿಕೇರ ಮಂಡಲದ ಹಂಪಾದಲ್ಲಿ ರೈತನಿಗೆ ವಜ್ರ ಸಿಕ್ಕಿದ್ದು 5 ಲಕ್ಷ ರೂ.ಗೆ ವರ್ತಕರೊಬ್ಬರು ಖರೀದಿಸಿದ್ದಾರೆ. ಎರಡು ದಿನಗಳಲ್ಲಿ ನಾಲ್ಕು ವಜ್ರಗಳು ಪತ್ತೆಯಾಗಿವೆ.

ಆಂಧ್ರಪ್ರದೇಶ: ವಜ್ರ ಬೇಟೆ, ನಾಲ್ಕು ಕಡೆ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆ
ವಜ್ರ
ನಯನಾ ರಾಜೀವ್
|

Updated on: May 27, 2024 | 2:03 PM

Share

ಪ್ರತಿವರ್ಷ ಮಳೆಗಾಲದ ಆರಂಭದಲ್ಲಿ ಕರ್ನೂಲ್​ನಲ್ಲಿ ರೈತರು ತಮ್ಮ ಗದ್ದೆಗಳಲ್ಲಿ ವಜ್ರ(Diamond)ದ ಹುಡುಕಾಟ ನಡೆಸುತ್ತಾರೆ. ಕೆಲವೊಮ್ಮೆ ಬಣ್ಣದ ಕಲ್ಲು ಕಂಡರೂ ಅದನ್ನು ವಜ್ರವೆಂದು ಪರೀಕ್ಷಿಸಲು ಚಿನ್ನದಂಗಡಿಗೆ ಓಡುತ್ತಾರೆ. ಒಂದು ವಜ್ರ ಸಿಕ್ಕಿ ತಮ್ಮ ಎಲ್ಲಾ ತಲೆಮಾರುಗಳ ಬಡತನ ದೂರವಾಗಲಿ ಎಂದು ಆಶಿಸುತ್ತಾ ವಜ್ರಗಳನ್ನು ಹುಡುಕುತ್ತಾರೆ. ಈ ವರ್ಷವೂ ಕರ್ನೂಲ್​ನಲ್ಲಿ ಕೆಲವರಿಗೆ ವಜ್ರ ಸಿಕ್ಕಿದೆ ಎನ್ನುವ ಮಾಹಿತಿ ಇದೆ.

ಜೊನ್ನಗಿರಿಯ ರೈತರೊಬ್ಬರಿಗೆ ವಜ್ರ ಸಿಕ್ಕಿದ್ದು, ವಜ್ರ ವ್ಯಾಪಾರಿಗೆ ಮಾರಾಟ ಮಾಡಿ 6 ಲಕ್ಷ ರೂ. ಗಳಿಸಿದ್ದಾರೆ. ಶನಿವಾರ ಮಡ್ಡಿಕೇರ ಮಂಡಲದ ಹಂಪಾದಲ್ಲಿ ರೈತನಿಗೆ ವಜ್ರ ಸಿಕ್ಕಿದ್ದು 5 ಲಕ್ಷ ರೂ.ಗೆ ವರ್ತಕರೊಬ್ಬರು ಖರೀದಿಸಿದ್ದಾರೆ. ಎರಡು ದಿನಗಳಲ್ಲಿ ನಾಲ್ಕು ವಜ್ರಗಳು ಪತ್ತೆಯಾಗಿವೆ.ಒಟ್ಟು 70 ಲಕ್ಷ ರೂ. ಬೆಲೆಬಾಳುವ ವಜ್ರಗಳು ಪತ್ತೆಯಾಗಿವೆ.

2023ರ ಜೂನ್​ನಲ್ಲಿ ರೈತರೊಬ್ಬರು ಬರೋಬ್ಬರಿ 2 ಕೋಟಿ ರೂ,ಗೆ ವಜ್ರವನ್ನು ಮಾರಾಟ ಮಾಡಿದ್ದರು. 2021ರಲ್ಲಿ ರೈತರೊಬ್ಬರು 2.4 ಕೋಟಿ ರೂ., 2020 ಹಾಗೂ 2019ರಲ್ಲಿ ರೈತರು ಉತ್ತಮ ಲಾಭ ಗಳಿಸಿದ್ದರು.

ಮತ್ತಷ್ಟು ಓದಿ: ಚಿಕ್ಕಮಗಳೂರು: 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಪೊಲೀಸರು

ಅನಂತಪುರ ಜಿಲ್ಲೆಯ ತುಗ್ಗಲಿ, ಜೊನ್ನಗಿರಿ, ಕರ್ನೂಲ್​ ಜಿಲ್ಲೆಯ ಮಡ್ಡಿಕೇರಾ ಹಾಗೂ ಸಮೀಪದ ಮಂಡಲಗಳಿಗೆ ಜನಸಾಗರವೇ ಹರಿದುಬರುತ್ತಿದ್ದು, ವಜ್ರಗಳ ಹುಡುಕಾಟ ಶುರುವಾಗಿದೆ.

ಆಂಧ್ರಪ್ರದೇಶ ವಿಶೇಷವಾಗಿ ಅನಂತತಪುರ, ಕಡಪ, ಕರ್ನೂಲ್​, ಕೃಷ್ಣ, ಗುಂಟೂರು ಜಿಲ್ಲೆಗಳು ಭಾರತದ ವಜ್ರ ಸಂಪನ್ಮೂಲಗಳ ಶೇಕಡಾವಾರು ಪಾಲುಗಳನ್ನು ಹೊಂದಿದೆ.

ಮಳೆಗಾಲದ ಆರಂಭದಲ್ಲಿ ಮೊದಲ ಮಳೆಗೆ ಮಣ್ಣಿನ ಮೇಲ್ಪದರಗಳು ಕೊಚ್ಚಿಕೊಂಡು ಹೋದಾಗ ವಜ್ರಗಳು ಮೇಲ್ಮೈಗೆ ಬರುತ್ತವೆ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ರಾಯಲಸೀಮಾವು ವಜ್ರಗಳ ವ್ಯಾಪಾರಕ್ಕೆ ಪ್ರಸಿದ್ಧಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?