AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ವಜ್ರ ಬೇಟೆ, ನಾಲ್ಕು ಕಡೆ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆ

ಆಂಧ್ರಪ್ರದೇಶದ ನಾಲ್ಕು ಪ್ರದೇಶಗಳಲ್ಲಿ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆಯಾಗಿವೆ. ಜೊನ್ನಗಿರಿಯ ರೈತರೊಬ್ಬರಿಗೆ ವಜ್ರ ಸಿಕ್ಕಿದ್ದು, ವಜ್ರ ವ್ಯಾಪಾರಿಗೆ ಮಾರಾಟ ಮಾಡಿ 6 ಲಕ್ಷ ರೂ. ಗಳಿಸಿದ್ದಾರೆ. ಶನಿವಾರ ಮಡ್ಡಿಕೇರ ಮಂಡಲದ ಹಂಪಾದಲ್ಲಿ ರೈತನಿಗೆ ವಜ್ರ ಸಿಕ್ಕಿದ್ದು 5 ಲಕ್ಷ ರೂ.ಗೆ ವರ್ತಕರೊಬ್ಬರು ಖರೀದಿಸಿದ್ದಾರೆ. ಎರಡು ದಿನಗಳಲ್ಲಿ ನಾಲ್ಕು ವಜ್ರಗಳು ಪತ್ತೆಯಾಗಿವೆ.

ಆಂಧ್ರಪ್ರದೇಶ: ವಜ್ರ ಬೇಟೆ, ನಾಲ್ಕು ಕಡೆ ಲಕ್ಷ ಲಕ್ಷ ಬೆಲೆ ಬಾಳುವ ವಜ್ರಗಳು ಪತ್ತೆ
ವಜ್ರ
ನಯನಾ ರಾಜೀವ್
|

Updated on: May 27, 2024 | 2:03 PM

Share

ಪ್ರತಿವರ್ಷ ಮಳೆಗಾಲದ ಆರಂಭದಲ್ಲಿ ಕರ್ನೂಲ್​ನಲ್ಲಿ ರೈತರು ತಮ್ಮ ಗದ್ದೆಗಳಲ್ಲಿ ವಜ್ರ(Diamond)ದ ಹುಡುಕಾಟ ನಡೆಸುತ್ತಾರೆ. ಕೆಲವೊಮ್ಮೆ ಬಣ್ಣದ ಕಲ್ಲು ಕಂಡರೂ ಅದನ್ನು ವಜ್ರವೆಂದು ಪರೀಕ್ಷಿಸಲು ಚಿನ್ನದಂಗಡಿಗೆ ಓಡುತ್ತಾರೆ. ಒಂದು ವಜ್ರ ಸಿಕ್ಕಿ ತಮ್ಮ ಎಲ್ಲಾ ತಲೆಮಾರುಗಳ ಬಡತನ ದೂರವಾಗಲಿ ಎಂದು ಆಶಿಸುತ್ತಾ ವಜ್ರಗಳನ್ನು ಹುಡುಕುತ್ತಾರೆ. ಈ ವರ್ಷವೂ ಕರ್ನೂಲ್​ನಲ್ಲಿ ಕೆಲವರಿಗೆ ವಜ್ರ ಸಿಕ್ಕಿದೆ ಎನ್ನುವ ಮಾಹಿತಿ ಇದೆ.

ಜೊನ್ನಗಿರಿಯ ರೈತರೊಬ್ಬರಿಗೆ ವಜ್ರ ಸಿಕ್ಕಿದ್ದು, ವಜ್ರ ವ್ಯಾಪಾರಿಗೆ ಮಾರಾಟ ಮಾಡಿ 6 ಲಕ್ಷ ರೂ. ಗಳಿಸಿದ್ದಾರೆ. ಶನಿವಾರ ಮಡ್ಡಿಕೇರ ಮಂಡಲದ ಹಂಪಾದಲ್ಲಿ ರೈತನಿಗೆ ವಜ್ರ ಸಿಕ್ಕಿದ್ದು 5 ಲಕ್ಷ ರೂ.ಗೆ ವರ್ತಕರೊಬ್ಬರು ಖರೀದಿಸಿದ್ದಾರೆ. ಎರಡು ದಿನಗಳಲ್ಲಿ ನಾಲ್ಕು ವಜ್ರಗಳು ಪತ್ತೆಯಾಗಿವೆ.ಒಟ್ಟು 70 ಲಕ್ಷ ರೂ. ಬೆಲೆಬಾಳುವ ವಜ್ರಗಳು ಪತ್ತೆಯಾಗಿವೆ.

2023ರ ಜೂನ್​ನಲ್ಲಿ ರೈತರೊಬ್ಬರು ಬರೋಬ್ಬರಿ 2 ಕೋಟಿ ರೂ,ಗೆ ವಜ್ರವನ್ನು ಮಾರಾಟ ಮಾಡಿದ್ದರು. 2021ರಲ್ಲಿ ರೈತರೊಬ್ಬರು 2.4 ಕೋಟಿ ರೂ., 2020 ಹಾಗೂ 2019ರಲ್ಲಿ ರೈತರು ಉತ್ತಮ ಲಾಭ ಗಳಿಸಿದ್ದರು.

ಮತ್ತಷ್ಟು ಓದಿ: ಚಿಕ್ಕಮಗಳೂರು: 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಪೊಲೀಸರು

ಅನಂತಪುರ ಜಿಲ್ಲೆಯ ತುಗ್ಗಲಿ, ಜೊನ್ನಗಿರಿ, ಕರ್ನೂಲ್​ ಜಿಲ್ಲೆಯ ಮಡ್ಡಿಕೇರಾ ಹಾಗೂ ಸಮೀಪದ ಮಂಡಲಗಳಿಗೆ ಜನಸಾಗರವೇ ಹರಿದುಬರುತ್ತಿದ್ದು, ವಜ್ರಗಳ ಹುಡುಕಾಟ ಶುರುವಾಗಿದೆ.

ಆಂಧ್ರಪ್ರದೇಶ ವಿಶೇಷವಾಗಿ ಅನಂತತಪುರ, ಕಡಪ, ಕರ್ನೂಲ್​, ಕೃಷ್ಣ, ಗುಂಟೂರು ಜಿಲ್ಲೆಗಳು ಭಾರತದ ವಜ್ರ ಸಂಪನ್ಮೂಲಗಳ ಶೇಕಡಾವಾರು ಪಾಲುಗಳನ್ನು ಹೊಂದಿದೆ.

ಮಳೆಗಾಲದ ಆರಂಭದಲ್ಲಿ ಮೊದಲ ಮಳೆಗೆ ಮಣ್ಣಿನ ಮೇಲ್ಪದರಗಳು ಕೊಚ್ಚಿಕೊಂಡು ಹೋದಾಗ ವಜ್ರಗಳು ಮೇಲ್ಮೈಗೆ ಬರುತ್ತವೆ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ರಾಯಲಸೀಮಾವು ವಜ್ರಗಳ ವ್ಯಾಪಾರಕ್ಕೆ ಪ್ರಸಿದ್ಧಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!