Andhra Pradesh: ಆಂಧ್ರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಸಾವು

ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಎಂಟು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

Andhra Pradesh: ಆಂಧ್ರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಸಾವು
ಆಸ್ಪತ್ರೆ
Image Credit source: Apollo Hospital

Updated on: Jul 23, 2023 | 10:21 AM

ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಎಂಟು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರ ಸಂಬಂಧಿಕರು ಮಾಹಿತಿ ಪ್ರಕಾರ ಆಮ್ಲಜನಕದ ಕೊರತೆಗೆ ಆಸ್ಪತ್ರೆಯ ಅಧಿಕಾರಿಗಳನ್ನು ದೂಷಿಸಿದ್ದಾರೆ.

ಆರೋಪಗಳಿಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ಅಧಿಕಾರಿಗಳು ಆಮ್ಲಜನಕದ ಕೊರತೆಯಿಂದ ಯಾವುದೇ ರೋಗಿಗಳು ಸಾವನ್ನಪ್ಪಿಲ್ಲ, ಅವರಿಗೆ ಬಂದಂತಹ ಕಾಯಿಲೆಯಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ: ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ

ಮಾಹಿತಿಯ ಪ್ರಕಾರ, ಎಂಟು ರೋಗಿಗಳಲ್ಲಿ ಆರು ಮಂದಿಯನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಎಂಐಸಿಯು) ಘಟಕದಲ್ಲಿರಿಸಲಾಗಿತ್ತು.

ಈ ಸಂದರ್ಭ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು ಮಧ್ಯ ಪ್ರವೇಶಿಸಿ ಕೂಲಂಕುಷ ತನಿಖೆ ನಡೆಸುವಂತೆ ಸೂಚಿಸಿದರು. ತನಿಖೆಯ ಭಾಗವಾಗಿ ವಿವರವಾದ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಸಾವುಗಳು ಮತ್ತು ಆಮ್ಲಜನಕದ ಕೊರತೆಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ, ಬದಲಾಗಿ ರೋಗಿಗಳ ಸಾವಿಗೆ ಇತರ ವೈದ್ಯಕೀಯ ಕಾರಣಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us