ಆಂಧ್ರ ವಿಧಾನಸಭೆಯಲ್ಲಿ ದಿಶಾ ಮಸೂದೆ ಅಂಗೀಕಾರ, 21 ದಿನದಲ್ಲೇ ಅತ್ಯಾಚಾರಿಗಳಿಗೆ ಶಿಕ್ಷೆ

ಹೈದರಾಬಾದ್‌: ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ನಡೆದ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಸಜೀವ ದಹನ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. ಎನ್​ಕೌಂಟರ್​ ಬಗ್ಗೆ ಪರ, ವಿರೋಧ ವ್ಯಕ್ತವಾದರೂ ಪೊಲೀಸರ ಕ್ರಮಕ್ಕೆ ಹೆಚ್ಚಾಗಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಸರ್ವಾನುಮತದಿಂದ ದಿಶಾ ಮಸೂದೆ ಅಂಗೀಕಾರವಾಗಿದೆ. ದಿಶಾ ಕಾಯ್ದೆ ಪ್ರಕಾರ ಎಫ್​ಐಆರ್ ದಾಖಲಾದ 21 ದಿನಗಳಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬಹುದಾಗಿದೆ. ದಿಶಾ […]

ಆಂಧ್ರ ವಿಧಾನಸಭೆಯಲ್ಲಿ ದಿಶಾ ಮಸೂದೆ ಅಂಗೀಕಾರ, 21 ದಿನದಲ್ಲೇ ಅತ್ಯಾಚಾರಿಗಳಿಗೆ ಶಿಕ್ಷೆ
ಸಾಧು ಶ್ರೀನಾಥ್​

Updated on: Dec 13, 2019 | 4:25 PM

ಹೈದರಾಬಾದ್‌: ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ನಡೆದ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಸಜೀವ ದಹನ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. ಎನ್​ಕೌಂಟರ್​ ಬಗ್ಗೆ ಪರ, ವಿರೋಧ ವ್ಯಕ್ತವಾದರೂ ಪೊಲೀಸರ ಕ್ರಮಕ್ಕೆ ಹೆಚ್ಚಾಗಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈಗ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಸರ್ವಾನುಮತದಿಂದ ದಿಶಾ ಮಸೂದೆ ಅಂಗೀಕಾರವಾಗಿದೆ. ದಿಶಾ ಕಾಯ್ದೆ ಪ್ರಕಾರ ಎಫ್​ಐಆರ್ ದಾಖಲಾದ 21 ದಿನಗಳಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬಹುದಾಗಿದೆ. ದಿಶಾ ಮಸೂದೆಗೆ ತೆಲುಗು ದೇಶಂ ಪಕ್ಷವೂ ಬೆಂಬಲ ನೀಡಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us