AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Blast: ಆಂಧ್ರಪ್ರದೇಶದ ಅಚ್ಯುತಪುರಂನ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟ; 15 ಜನ ಸಾವು

ಆಂಧ್ರಪ್ರದೇಶದ ಔಷಧೀಯ ಕಂಪನಿ ಎಸ್ಸೆಂಟಿಯಾದಲ್ಲಿ ಬೆಂಕಿ ಸ್ಫೋಟ ಸಂಭವಿಸಿದೆ. ಗಂಭೀರವಾದ ಸುಟ್ಟ ಗಾಯಗಳೊಂದಿಗೆ ಒದ್ದಾಡುತ್ತಿದ್ದ ಹಲವಾರು ಜನರನ್ನು ವಿಶಾಖಪಟ್ಟಣಂನ ಅನಕಾಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Andhra Pradesh Blast: ಆಂಧ್ರಪ್ರದೇಶದ ಅಚ್ಯುತಪುರಂನ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟ; 15 ಜನ ಸಾವು
ಆಂಧ್ರಪ್ರದೇಶದ ಅಚ್ಚುತಪುರಂನ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟ
ಸುಷ್ಮಾ ಚಕ್ರೆ
|

Updated on:Aug 21, 2024 | 9:11 PM

Share

ಹೈದರಾಬಾದ್: ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ರಿಯಾಕ್ಟರ್ ಫಾರ್ಮಾ ಘಟಕದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಬೆಂಕಿ ಸ್ಫೋಟದ ನಂತರ ಕನಿಷ್ಠ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಕೇಂದ್ರವಾದ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ (ಎಸ್​ಇಝಡ್) ಔಷಧೀಯ ಕಂಪನಿ ಎಸ್ಸೆಂಟಿಯಾದಲ್ಲಿ ಊಟದ ವಿರಾಮದ ವೇಳೆ ಸ್ಫೋಟ ಮತ್ತು ಬೆಂಕಿ ಸಂಭವಿಸಿದೆ.

ಇದರಿಂದ ಹಲವು ಜನರಿಗೆ ಸುಟ್ಟ ಗಾಯಗಳಾಗಿವೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯ (SEZ) ಔಷಧೀಯ ಕೇಂದ್ರವಾಗಿದ್ದು, ಎಸ್ಸಿಯೆಂಟಿಯಾ ಫಾರ್ಮಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟವನ್ನು ಪ್ರಚೋದಿಸಿತು. ಊಟದ ವಿರಾಮದ ವೇಳೆ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ. ಎಸ್ಸಿಯೆನ್ಷಿಯಾ SEZನಿಂದ ಕಾರ್ಯನಿರ್ವಹಿಸುತ್ತಿರುವ ದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಇದು ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ.

ಇದನ್ನೂ ಓದಿ: 100 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಯತ್ನ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಖುಲಾಸೆ

ಮೃತ ಕಾರ್ಮಿಕರಲ್ಲಿ ಇಬ್ಬರು ರಾಂಬಿಲ್ಲಿ ಮಂಡಲ ಮೂಲದ ಪುಡಿ ಮೋಹನ್ ಮತ್ತು ಎನ್ ಹರಿಕಾ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅನಕಾಪಲ್ಲಿ ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರನ್ನು ವಿಶಾಖಪಟ್ಟಣಂನ ಆಸ್ಪತ್ರೆಗೆ ಸಾಗಿಸಲಾಗಿದ್ದರೆ, ಇನ್ನು ಕೆಲವರನ್ನು ಅನಕಪಲ್ಲಿ ಎನ್‌ಟಿಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ಮತ್ತು ರಕ್ಷಣಾ ಘಟಕಗಳು ಸ್ಥಳಕ್ಕೆ ಧಾವಿಸಿದ್ದರೂ ಸಹ ಬೆಂಕಿಯಿಂದ ಉಂಟಾದ ದಟ್ಟವಾದ ಹೊಗೆಯು ಸೌಲಭ್ಯದಲ್ಲಿ ರಕ್ಷಣಾ ಪ್ರಯತ್ನಗಳಿಗೆ ಅಡ್ಡಿಯಾಯಿತು. ಈ ಬೆಂಕಿ ಅವಘಡಕ್ಕೆ ಶಾರ್ಟ್​ ಸರ್ಕ್ಯೂಟ್ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Wed, 21 August 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?