AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಸ್ ಕಾಲುವೆಗೆ ಉರುಳಿ 7 ಮಂದಿ ಸಾವು, 15 ಜನರಿಗೆ ಗಾಯ

ಮದುವೆಗೆ  ಜನರನ್ನು ಕೊಂಡೊಯ್ಯುತ್ತಿದ್ದ ಬಸ್​ ಕಾಲುವೆಗೆ ಉರುಳಿ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

Andhra Pradesh: ಬಸ್ ಕಾಲುವೆಗೆ ಉರುಳಿ 7 ಮಂದಿ ಸಾವು, 15 ಜನರಿಗೆ ಗಾಯ
ಬಸ್Image Credit source: India TV
ನಯನಾ ರಾಜೀವ್
|

Updated on: Jul 11, 2023 | 10:57 AM

Share

ಮದುವೆಗೆ  ಜನರನ್ನು ಕೊಂಡೊಯ್ಯುತ್ತಿದ್ದ ಬಸ್​ ಕಾಲುವೆಗೆ ಉರುಳಿ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಪೊಡಿಲಿಯಿಂದ ಕಾಕಿನಾಡಕ್ಕೆ ತೆರಳುತ್ತಿದ್ದ ಬಸ್ ದರ್ಶಿ ಬಳಿ ಸಾಗರ್ ನಾಲೆಗೆ ಉರುಳಿದೆ. ಬಸ್​ನಲ್ಲಿ 35-40 ಮಂದಿ ಇದ್ದರು.

ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾಕಿನಾಡಕ್ಕೆ ತೆರಳುತ್ತಿದ್ದರು.ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಇತರ ಇಲಾಖೆಗಳ ಸಮನ್ವಯದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಿದರು.

ಮತ್ತಷ್ಟು ಓದಿ: Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಪೊಲೀಸರ ಪ್ರಕಾರ, ಸರ್ಕಾರಿ ಸ್ವಾಮ್ಯದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್ ಅನ್ನು ಪ್ರಯಾಣಕ್ಕಾಗಿ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ. ಬಸ್ ಚಾಲಕ ನಿದ್ರಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೃತರನ್ನು ಅಬ್ದುಲ್ ಅಜೀಜ್ (65), ಅಬ್ದುಲ್ ಹನಿ (60), ಶೇಖ್ ರಮೀಜ್ (48), ಮುಲ್ಲಾ ನೂರ್ ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್ ಶಬೀನಾ (35) ಮತ್ತು ಶೇಖ್ ಹಿನಾ (6) ಎಂದು ಗುರುತಿಸಲಾಗಿದೆ.

ಇನ್ನೊಂದು ಬಸ್ ಎದುರುಗಡೆಯಿಂದ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ರಸ್ತೆಡಯ ಬದಿಯ ಕಾಂಕ್ರೀಟ್ ಬ್ಲಾಕ್​ಗೆ ಡಿಕ್ಕಿ ಹೊಡೆದು ನಂತರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ