Andhra Pradesh: ಬಸ್ ಕಾಲುವೆಗೆ ಉರುಳಿ 7 ಮಂದಿ ಸಾವು, 15 ಜನರಿಗೆ ಗಾಯ

ಮದುವೆಗೆ  ಜನರನ್ನು ಕೊಂಡೊಯ್ಯುತ್ತಿದ್ದ ಬಸ್​ ಕಾಲುವೆಗೆ ಉರುಳಿ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

Andhra Pradesh: ಬಸ್ ಕಾಲುವೆಗೆ ಉರುಳಿ 7 ಮಂದಿ ಸಾವು, 15 ಜನರಿಗೆ ಗಾಯ
ಬಸ್
Image Credit source: India TV

Updated on: Jul 11, 2023 | 10:57 AM

ಮದುವೆಗೆ  ಜನರನ್ನು ಕೊಂಡೊಯ್ಯುತ್ತಿದ್ದ ಬಸ್​ ಕಾಲುವೆಗೆ ಉರುಳಿ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಪೊಡಿಲಿಯಿಂದ ಕಾಕಿನಾಡಕ್ಕೆ ತೆರಳುತ್ತಿದ್ದ ಬಸ್ ದರ್ಶಿ ಬಳಿ ಸಾಗರ್ ನಾಲೆಗೆ ಉರುಳಿದೆ. ಬಸ್​ನಲ್ಲಿ 35-40 ಮಂದಿ ಇದ್ದರು.

ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾಕಿನಾಡಕ್ಕೆ ತೆರಳುತ್ತಿದ್ದರು.ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಇತರ ಇಲಾಖೆಗಳ ಸಮನ್ವಯದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಿದರು.

ಮತ್ತಷ್ಟು ಓದಿ: Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಪೊಲೀಸರ ಪ್ರಕಾರ, ಸರ್ಕಾರಿ ಸ್ವಾಮ್ಯದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್ ಅನ್ನು ಪ್ರಯಾಣಕ್ಕಾಗಿ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ. ಬಸ್ ಚಾಲಕ ನಿದ್ರಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೃತರನ್ನು ಅಬ್ದುಲ್ ಅಜೀಜ್ (65), ಅಬ್ದುಲ್ ಹನಿ (60), ಶೇಖ್ ರಮೀಜ್ (48), ಮುಲ್ಲಾ ನೂರ್ ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್ ಶಬೀನಾ (35) ಮತ್ತು ಶೇಖ್ ಹಿನಾ (6) ಎಂದು ಗುರುತಿಸಲಾಗಿದೆ.

ಇನ್ನೊಂದು ಬಸ್ ಎದುರುಗಡೆಯಿಂದ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ರಸ್ತೆಡಯ ಬದಿಯ ಕಾಂಕ್ರೀಟ್ ಬ್ಲಾಕ್​ಗೆ ಡಿಕ್ಕಿ ಹೊಡೆದು ನಂತರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us