AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಗೆದ್ದ ಖುಷಿಯಲ್ಲೇ ಐದು ವರ್ಷದ ಬಳಿಕ ಮನೆಗೆ ಮರಳಿದ ಮಹಿಳೆ

ಜಗನ್​ಮೋಹನ್ ರೆಡ್ಡಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ಬಿಟ್ಟು ಹೋಗಿದ್ದ ಮಹಿಳೆ ಚಂದ್ರಬಾಬು ನಾಯ್ಡು ಬಂದ ಖುಷಿಯಲ್ಲಿ ವಾಪಸ್ ಮರಳಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಚಂದ್ರಬಾಬು ನಾಯ್ಡು ಗೆದ್ದ ಖುಷಿಯಲ್ಲೇ ಐದು ವರ್ಷದ ಬಳಿಕ ಮನೆಗೆ ಮರಳಿದ ಮಹಿಳೆ
ವಿಜಯಲಕ್ಷ್ಮೀImage Credit source: TV9 Telugu
ನಯನಾ ರಾಜೀವ್
|

Updated on: Jun 17, 2024 | 3:20 PM

Share

ಕ್ರಿಕೆಟ್​ ಬೆಟ್ಟಿಂಗ್​ನಷ್ಟೇ ಚುನಾವಣಾ ಬೆಟ್ಟಿಂಗ್ ಕೂಡ ಚಾಲ್ತಿಯಲ್ಲಿದೆ. ಯಾವ ಪಕ್ಷ ಗೆಲ್ಲುತ್ತೆ ಎನ್ನುವುದರ ಬಗ್ಗೆ ಬೆಟ್ಟಿಂಗ್ ಕಟ್ಟುವುದು ಸಾಮಾನ್ಯ ಅದಕ್ಕೆ ತಕ್ಕಂತೆ ಹಣವನ್ನು ಬಿಟ್ಟಿಂಗ್ ಮೇಲೆ ಸುರಿಯುತ್ತಾರೆ. ಆದರೆ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. 2019ರಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಟುಂಬದಲ್ಲಿ ಇಬ್ಬರು ಬೆಟ್ಟಿಂಗ್ ಕಟ್ಟಿದ್ದರು.

ಖಮ್ಮಂ ಜಿಲ್ಲೆಯ ಕುಸುಮಂಚಿ ಮಂಡಲದ ಕೇಶ್ವಾಪುರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ 2019ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಾಯಕ ಗೆಲ್ಲುತ್ತಾರೆ ಎಂದು ಒಂದೇ ಕುಟುಂಬದ ಇಬ್ಬರ ನಡುವೆ ಬಾಜಿ ಕಟ್ಟಲಾಗಿತ್ತು. ತಮ್ಮ ನಾಯಕ ಯಶಸ್ವಿಯಾಗದಿದ್ದರೆ, ತನ್ನ ನಾಯಕ ಯಶಸ್ವಿಯಾಗುವವರೆಗೂ ತಾನು ಹಳ್ಳಿಗೆ ಕಾಲಿಡುವುದಿಲ್ಲ ಎಂದು ವಿಜಯಲಕ್ಷ್ಮೀ ಶಪಥ ಮಾಡಿದ್ದರು.

ವಿಜಯಲಕ್ಷ್ಮೀ ಹಾಗೂ ಕುಟುಂಬದ ನಡುವೆ ನಡೆದ ಬೆಟ್ಟಿಂಗ್​ನಲ್ಲಿ ಒಂದೊಮ್ಮೆ ಚಂದ್ರಬಾಬು ನಾಯ್ಡು ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ತಾನು ಊರು ಬಿಟ್ಟು ಹೋಗುವುದಾಗಿ ಶಪಥ ಮಾಡಿದ್ದರು. ಅದಾದ ಬಳಿಕ ಜಗನ್​ಮೋಹನ್ ರೆಡ್ಡಿ ಗೆದ್ದಿದ್ದರು, ವಿಜಯಲಕ್ಷ್ಮೀ ಊರು ಬಿಟ್ಟು ಹೋಗಿದ್ದರು, ಯಾವುದೇ ಕಾರ್ಯಕ್ರಮಕ್ಕೂ ಊರಿಗೆ ಬಂದಿರಲಿಲ್ಲ.

ಮತ್ತಷ್ಟು ಓದಿ: AP CM Swearing in Ceremony: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಇದೀಗ ಚಂದ್ರಬಾಬು ನಾಯ್ಡು ಗೆದ್ದ ಖುಷಿಯಲ್ಲೇ ಊರಿಗೆ ಮರಳಿದ್ದಾರೆ. ಕುಟುಂಬದವರೂ ಆಕೆಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.

ಮತ್ತೆ ಕೇಶವಪುರಕ್ಕೆ ಬಂದಿದ್ದರಿಂದ ಗ್ರಾಮಸ್ಥರು ವಿಜಯಲಕ್ಷ್ಮಿ ಕುಟುಂಬದವರು ಶಾಲು ಹೊದಿಸಿ, ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಐದನೇ ವರ್ಷದ ಬಳಿಕ ಮನೆಗೆ ಬಂದಿದ್ದಕ್ಕೆ ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ