ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. […]

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ
ಸಾಧು ಶ್ರೀನಾಥ್​

Updated on: May 07, 2020 | 3:03 PM

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಪರಿಹಾರ. ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಸಹ ಘೋಷಣೆಯಾಗಿದೆ. ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುತ್ತೇವೆ ಎಂದೂ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us