Sign In

By signing in or creating an account, you agree with Associated Broadcasting Company's Terms & Conditions and Privacy Policy.

AP Cabinet ಆಂಧ್ರ ಪ್ರದೇಶದಲ್ಲಿ ಜಗನ್ ರೆಡ್ಡಿ ಸಚಿವ ಸಂಪುಟ ಪುನಾರಚನೆ; ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳಿಗೆ ಮಣೆ 

ಹೊಸದಾಗಿ ಪರಿಷ್ಕರಿಸಲಾದ ಸಂಪುಟದಲ್ಲಿ 25 ಕ್ಯಾಬಿನೆಟ್ ಸದಸ್ಯರಲ್ಲಿ 17 ಮಂದಿ ಎಸ್‌ಟಿ, ಎಸ್‌ಸಿ, ಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದವರು ಎಂದು ಮುಖ್ಯಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆ ಭಾನುವಾರ ತಿಳಿಸಿದೆ.

AP Cabinet ಆಂಧ್ರ ಪ್ರದೇಶದಲ್ಲಿ ಜಗನ್ ರೆಡ್ಡಿ ಸಚಿವ ಸಂಪುಟ ಪುನಾರಚನೆ; ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳಿಗೆ ಮಣೆ 
ಜಗನ್ ಮೋಹನ್ ರೆಡ್ಡಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 10, 2022 | 7:44 PM

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಭಾನುವಾರ ಏಪ್ರಿಲ್ 10 ರಂದು ತಮ್ಮ ಹಿಂದಿನ ಕ್ಯಾಬಿನೆಟ್‌ನಿಂದ 11 ಸಚಿವರನ್ನು ಉಳಿಸಿಕೊಳ್ಳುವ ಮೂಲಕ ವಾರದ ಆರಂಭದಲ್ಲಿ ವಿಸರ್ಜಿಸಲಾಗಿದ್ದ ತಮ್ಮ ಸಂಪುಟವನ್ನು ಪುನರ್ ರಚಿಸಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ನಿರೀಕ್ಷಿತ ಪುನರ್ರಚನೆಗೆ ಮುಂಚಿತವಾಗಿ ಏಪ್ರಿಲ್ 7 ರಂದು ಗುರುವಾರ ವಿಸರ್ಜಿಸಲಾಯಿತು. ಹೊಸದಾಗಿ ಪರಿಷ್ಕರಿಸಲಾದ ಸಂಪುಟದಲ್ಲಿ 25 ಕ್ಯಾಬಿನೆಟ್ ಸದಸ್ಯರಲ್ಲಿ 17 ಮಂದಿ ಎಸ್‌ಟಿ, ಎಸ್‌ಸಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರು ಎಂದು ಮುಖ್ಯಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆ ಭಾನುವಾರ ತಿಳಿಸಿದೆ. ಪ್ರಕಟಣೆ ಪ್ರಕಾರ2019 ರಲ್ಲಿ, ಸಿಎಂ ಜಗನ್ (CM Jagan) ಅವರು ತಮ್ಮ ಸಂಪುಟವನ್ನು ರಚಿಸಿದಾಗ, 25 ಸಚಿವರಲ್ಲಿ ಶೇಕಡಾ 56 ರಷ್ಟು ಜನರು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವರ್ಗದವರಾಗಿದ್ದರು. ಈ ಬಾರಿ ಸಂಪುಟದಲ್ಲಿ ಅವರ ಪ್ರಾತಿನಿಧ್ಯವನ್ನು ಶೇ.68ಕ್ಕೆ ಹೆಚ್ಚಿಸಲಾಗಿದೆ. ಹಿಂದಿನ ಸಂಪುಟದಲ್ಲಿ 5 ಎಸ್‌ಸಿ, 1 ಎಸ್‌ಟಿ, 7 ಒಬಿಸಿ, 1 ಅಲ್ಪಸಂಖ್ಯಾತ ಮತ್ತು 11 ಇತರ ಜಾತಿಗಳ ಶಾಸಕರಿದ್ದರು. ಈ ಬಾರಿ 17 ಇದ್ದಾರೆ.ಇದರಲ್ಲಿ 11 ಹಿಂದುಳಿದ ವರ್ಗದವರು, 5 ಎಸ್​​ಸಿ, 1 ಎಸ್​​ಟಿ ಮತ್ತು 8 ಇತರ ಜಾತಿಯ ಪ್ರಾತಿನಿಧ್ಯವನ್ನು ಹೆಚ್ಚಿಸಲಾಗಿದೆ. ಮಹಿಳಾ ಶಾಸಕರ ಸಬಲೀಕರಣ ಮತ್ತು ಸಮಾನ ಪ್ರಾತಿನಿಧ್ಯವನ್ನು ಖಾತರಿಪಡಿಸುವ ಉದ್ದೇಶದಿಂದ ಹಿಂದಿನ ಮೂವರ ಸಂಪುಟಕ್ಕೆ ಹೋಲಿಸಿದರೆ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಾಲ್ಕಕ್ಕೆ ಹೆಚ್ಚಿಸಲಾಗಿದೆ ಎಂದು ಸಿಎಂಒ ತಿಳಿಸಿದೆ.

ಹಿಂದಿನ ಸಂಪುಟದಿಂದ ಉಳಿಸಿಕೊಂಡಿರುವ 10 ಸಚಿವರಲ್ಲಿ ಮೂವರು ಪರಿಶಿಷ್ಟ ಜಾತಿ, ಐವರು ಹಿಂದುಳಿದ ವರ್ಗ ಹಾಗೂ ಇಬ್ಬರು ಇತರೆ ಜಾತಿಯವರು.

ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ 2014 ರಿಂದ ಪ್ರಾರಂಭವಾಗಿ ಇತರ ಜಾತಿಗಳ ಪ್ರಾತಿನಿಧ್ಯವು 13 ಆಗಿದ್ದು, ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗದವರು 12 ಮಂದಿ ಇದ್ದರು. 12 ರಲ್ಲಿ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಾಯಕರಿಗೆ ಯಾವುದೇ ಸಚಿವಾಲಯವನ್ನು ನೀಡಲಾಗಿಲ್ಲ.

2017 ರಲ್ಲಿ ಸಚಿವ ಸಂಪುಟ ನವೀಕರಿಸಿದಾಗ ಅದೇ ಅನುಪಾತವನ್ನು ಮತ್ತೆ ನಿರ್ವಹಿಸಲಾಯಿತು. ನಾಯ್ಡು ಅವರ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ನಾಲ್ಕು ತಿಂಗಳ ಮೊದಲು ಪರಿಶಿಷ್ಟ ಪಂಗಡಗಳನ್ನು ಅವರ ಸಂಪುಟಕ್ಕೆ ಸೇರಿಸಲಾಯಿತು.

ರೆಡ್ಡಿಯವರ ಹೊಸ ಕ್ಯಾಬಿನೆಟ್‌ನಲ್ಲಿ ಎಸ್‌ಸಿ, ಎಸ್‌ಟಿ, ಬಿಸಿ ಮತ್ತು ಅಲ್ಪಸಂಖ್ಯಾತರ ಪ್ರಾತಿನಿಧ್ಯದಲ್ಲಿ ಶೇಕಡಾ 50 ರಷ್ಟು ಹೆಚ್ಚಳವಾಗಿದೆ. ರೆಡ್ಡಿ ಅವರು ಐದು ಉಪಮುಖ್ಯಮಂತ್ರಿಗಳನ್ನು ನೇಮಿಸಿದ್ದರು, ಅವರಲ್ಲಿ ನಾಲ್ವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಅಲ್ಪಸಂಖ್ಯಾತ%

Published On - 7:17 pm, Sun, 10 April 22

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!