ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್; 371 ಕೋಟಿ ರೂ. ಹಗರಣದಲ್ಲಿ ಇಡಿಯಿಂದ ಕ್ಲೀನ್ ಚಿಟ್

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು, ಇದರಿಂದಾಗಿ ಆಂಧ್ರದ ಬೊಕ್ಕಸಕ್ಕೆ 371 ಕೋಟಿ ರೂ. ನಷ್ಟವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೀಗ, ಆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಚಂದ್ರಬಾಬು ನಾಯ್ಡು ಅವರಿಗೆ ಕ್ಲೀನ್​ಚಿಟ್ ನೀಡಿದೆ.

ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್; 371 ಕೋಟಿ ರೂ. ಹಗರಣದಲ್ಲಿ ಇಡಿಯಿಂದ ಕ್ಲೀನ್ ಚಿಟ್
ಚಂದ್ರಬಾಬು ನಾಯ್ಡು
Follow us
|

Updated on: Oct 16, 2024 | 4:22 PM

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 371 ಕೋಟಿ ರೂ. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಚಂದ್ರಬಾಬು ನಾಯ್ಡು ಅವರಿಗೆ ಕ್ಲೀನ್ ಚಿಟ್ ನೀಡಿದೆ. ಆಗಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ನಡೆಸಿದ ತನಿಖೆಯ ಮೇರೆಗೆ ಕಳೆದ ವರ್ಷ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 31, 2023ರಂದು ಮಧ್ಯಂತರ ಜಾಮೀನು ಪಡೆಯುವ ಮೊದಲು ಅವರು 50 ದಿನಗಳ ಕಾಲ ಜೈಲಿನಲ್ಲಿ ಕಳೆದಿದ್ದರು.

ಆಂಧ್ರಪ್ರದೇಶ ಸಿಐಡಿ ನಡೆಸಿದ ತನಿಖೆಯ ಪ್ರಕಾರ ಕಳೆದ ವರ್ಷ ಸೆಪ್ಟೆಂಬರ್ 9ರಂದು ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಯಿತು. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಅವರ ಅರ್ಜಿಯು ನ್ಯಾಯಾಲಯದಲ್ಲಿ ಬಾಕಿಯಿರುವುದರಿಂದ ಅಕ್ಟೋಬರ್ 18ರವರೆಗೆ ಫೈಬರ್ ನೆಟ್ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸುವುದಿಲ್ಲ ಎಂದು ಆಂಧ್ರಪ್ರದೇಶ ಪೊಲೀಸರು ಅಕ್ಟೋಬರ್ 13ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ

ಆಂಧ್ರಪ್ರದೇಶ ರಾಜ್ಯದಲ್ಲಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಎರಡು ಖಾಸಗಿ ಸಂಸ್ಥೆಗಳಾದ ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ (ಇಂಡಿಯಾ) ಮತ್ತು ಡಿಸೈನ್‌ಟೆಕ್ ಸಿಸ್ಟಮ್‌ಗಳ ಉನ್ನತ ಕಾರ್ಯನಿರ್ವಾಹಕರಿಗೆ ಸಂಬಂಧಿಸಿದ 23.54 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಈ ಎರಡು ಖಾಸಗಿ ಸಂಸ್ಥೆಗಳು ಮತ್ತು ಅದರ ಕಾರ್ಯನಿರ್ವಾಹಕರಿಗೆ ಸಂಬಂಧಿಸಿದ 151 ಕೋಟಿ ರೂಪಾಯಿಗಳ ಹಣದ ಜಾಡು ಪತ್ತೆ ಮಾಡಿದರೂ, ಆ ಪ್ರಕರಣದಲ್ಲಿ ಹಣವನ್ನು ದುರುಪಯೋಗಪಡಿಸಿಕೊಳ್ಳುವಲ್ಲಿ ಚಂದ್ರಬಾಬು ನಾಯ್ಡು ಅವರ ಪಾತ್ರವನ್ನು ದೃಢೀಕರಿಸುವ ಯಾವುದೇ ಪುರಾವೆಗಳನ್ನು ತನಿಖಾಧಿಕಾರಿಗಳು ಇಲ್ಲಿಯವರೆಗೆ ಕಂಡುಕೊಂಡಿಲ್ಲ. ಹೀಗಾಗಿ, ಇಡಿ ಕ್ಲೀನ್ ಚಿಟ್ ನೀಡಿದೆ.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಸುಳ್ಳು ಹೇಳಿಕೆಯಿಂದ ತಿರುಪತಿ ಪಾವಿತ್ರ್ಯತೆಗೆ ಹಾನಿಯಾಗಿದೆ; ಜಗನ್ ರೆಡ್ಡಿ ಆರೋಪ

ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಾಯ್ಡು ಅವರನ್ನು ರಾಜಮಹೇಂದ್ರವರಂ ಜೈಲಿನಲ್ಲಿ ಇರಿಸಲಾಗಿತ್ತು, ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಾಯ್ಡುಗೆ ಜಾಮೀನು ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಅವರು ಅಕ್ಟೋಬರ್ 31, 2023ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕನಿಗೆ ನವೆಂಬರ್ 20 ರಂದು ಆಂಧ್ರಪ್ರದೇಶ ಹೈಕೋರ್ಟ್ ನಿಯಮಿತ ಜಾಮೀನು ನೀಡಿತು. ಅದಾದ ಒಂದು ವಾರದ ನಂತರ ಸಾರ್ವಜನಿಕ ರ್ಯಾಲಿಗಳು ಮತ್ತು ಸಭೆಗಳಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅವರಿಗೆ ಅನುಮತಿ ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ