AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡದ ಮಧುರಾನಗರದ ಪ್ರವಾಹ ಪೀಡಿತ ಪ್ರದೇಶವನ್ನು ಪರಿಶೀಲಿಸುವ ಸಂದರ್ಭದಲ್ಲಿ ವೇಗದ ರೈಲು ಕೆಲವು ಅಡಿ ದೂರದಲ್ಲಿ ಹಾದುಹೋಗುವಾಗ ರೈಲು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ಸುಷ್ಮಾ ಚಕ್ರೆ
|

Updated on: Sep 05, 2024 | 10:14 PM

Share

ಹೈದರಾಬಾದ್: ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ ಘಟನೆ ಸಂಭವಿಸಿದೆ. ಕೂದಲೆಳೆ ಅಂತರದಿಂದ ಸಿಎಂ ಚಂದ್ರಬಾಬು ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ. ಈ ಪ್ರವಾಹವು 2005ರ ವಿಜಯವಾಡ ಪ್ರವಾಹಕ್ಕಿಂತ ಭೀಕರವಾಗಿದೆ ಎಂದು ವಿವರಿಸಲಾಗಿದೆ.

ಇದ್ದಕ್ಕಿದ್ದಂತೆ, ಒಂದು ರೈಲು ವಿರುದ್ಧ ದಿಕ್ಕಿನಿಂದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಸಮೀಪಿಸಿತು. ಆಗ ಅವರ ಜೊತೆಗಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ರೈಲು ಮಾರ್ಗದಿಂದ ತ್ವರಿತವಾಗಿ ಹಿಂದೆ ಸರಿದಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ. ರೈಲು ಹಾದುಹೋದ ನಂತರ, ಆ ತಂಡವು ತಮ್ಮ ತಪಾಸಣೆಯನ್ನು ಮುಂದುವರೆಸಿತು.

ಇದನ್ನೂ ಓದಿ: Crime News: ಮಗುವಿನ ಮೇಲೆ ಅತ್ಯಾಚಾರ, ಕೊಲೆ; ತನಗೆ ಗಲ್ಲು ಶಿಕ್ಷೆ ನೀಡಲು ಅಪರಾಧಿಯಿಂದ ನ್ಯಾಯಾಧೀಶರಿಗೆ ಮನವಿ

ಸಿಎಂ ಚಂದ್ರಬಾಬು ನಾಯ್ಡು ಅವರು ಕಳೆದ ಕೆಲವು ದಿನಗಳಿಂದ ವಿಜಯವಾಡದಲ್ಲಿಯೇ ಉಳಿದುಕೊಂಡಿದ್ದು, ನಗರ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮತ್ತು ಪರಿಹಾರ ಪ್ರಯತ್ನಗಳು ಮುಂದುವರಿದಿವೆ.

ವಿಜಯವಾಡದಲ್ಲಿ ಭಾನುವಾರವೊಂದರಲ್ಲೇ 37 ಸೆಂ.ಮೀ ಮಳೆ ಸುರಿದಿದ್ದು, ಬುಡಮೇರು ನದಿ ಉಕ್ಕಿ ಹರಿಯಲು ಕಾರಣವಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಹುಟ್ಟುವ ಈ ನದಿಯು ಒಡ್ಡು ಒಡೆದು ಭಾರಿ ಪ್ರವಾಹಕ್ಕೆ ಕಾರಣವಾಗಿದೆ. ಇದರಿಂದ ರಕ್ಷಣಾ ತಂಡಗಳಿಗೆ ಜನರನ್ನು ತಲುಪಲು ಕಷ್ಟವಾಗುತ್ತಿದೆ.

ಇದನ್ನೂ ಓದಿ: Shocking Video: ಹೆಗಲ ಮೇಲೆ ಮಕ್ಕಳ ಶವ ಹೊತ್ತು 15 ಕಿ.ಮೀ ನಡೆದ ಪೋಷಕರು; ಆಘಾತಕಾರಿ ವಿಡಿಯೋ ವೈರಲ್

ಈ ಪ್ರವಾಹವು 2005ರ ವಿಜಯವಾಡ ಪ್ರವಾಹಕ್ಕಿಂತ ಭೀಕರವಾಗಿದೆ ಎಂದು ವಿವರಿಸಲಾಗಿದೆ. ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯ ಸರ್ಕಾರಕ್ಕೆ ಮೊದಲ ಭಾರಿ ಸವಾಲನ್ನು ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್