AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. 3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ: ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ […]

ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!
ಸಾಧು ಶ್ರೀನಾಥ್​
|

Updated on:Jan 29, 2020 | 6:45 AM

Share

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ: ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ ವಿರೋಧ ಪಕ್ಷ ಟಿಡಿಪಿ 3 ರಾಜಧಾನಿಗಳ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಪರಿಷತ್ತಿನಲ್ಲಿ ಟಿಡಿಪಿ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದು 3 ರಾಜಧಾನಿಗಳ ರಚನೆ ನಿರ್ಧಾರ ಜಾರಿಯಾಗುವುದನ್ನ ತಡೆಯುವಲ್ಲಿ ಯಶಸ್ವಿಯಾಗಿತ್ತು.

ಎಲ್ಲಾ ಬೆಳವಣಿಗೆಗಳ ಮೊದಲ ಹಂತವಾಗಿ ವಿಧಾನಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರವನ್ನು ಜಗನಮೋಹನ ರೆಡ್ಡಿ ತೆಗೆದುಕೊಂಡಿದ್ದಾರೆ. ನಂತರ ಆಂಧ್ರದಲ್ಲಿ 3 ರಾಜಧಾನಿಗಳ ರಚನೆಯ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ವಿಧಾನಸಭೆಯಲ್ಲಿ ಬಹುಸಂಖ್ಯೆಯ ಶಾಸಕರು ಪರಿಷತ್ತು ರದ್ದುಮಾಡುವ ನಿರ್ಧಾರದ ಪರವಾಗಿ ಮತಚಲಾಯಿಸಿದ್ದಾರೆ.

Published On - 7:14 am, Tue, 28 January 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ