Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. 3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ: ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ […]

ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!
Follow us
ಸಾಧು ಶ್ರೀನಾಥ್​
|

Updated on:Jan 29, 2020 | 6:45 AM

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ: ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ ವಿರೋಧ ಪಕ್ಷ ಟಿಡಿಪಿ 3 ರಾಜಧಾನಿಗಳ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಪರಿಷತ್ತಿನಲ್ಲಿ ಟಿಡಿಪಿ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದು 3 ರಾಜಧಾನಿಗಳ ರಚನೆ ನಿರ್ಧಾರ ಜಾರಿಯಾಗುವುದನ್ನ ತಡೆಯುವಲ್ಲಿ ಯಶಸ್ವಿಯಾಗಿತ್ತು.

ಎಲ್ಲಾ ಬೆಳವಣಿಗೆಗಳ ಮೊದಲ ಹಂತವಾಗಿ ವಿಧಾನಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರವನ್ನು ಜಗನಮೋಹನ ರೆಡ್ಡಿ ತೆಗೆದುಕೊಂಡಿದ್ದಾರೆ. ನಂತರ ಆಂಧ್ರದಲ್ಲಿ 3 ರಾಜಧಾನಿಗಳ ರಚನೆಯ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ವಿಧಾನಸಭೆಯಲ್ಲಿ ಬಹುಸಂಖ್ಯೆಯ ಶಾಸಕರು ಪರಿಷತ್ತು ರದ್ದುಮಾಡುವ ನಿರ್ಧಾರದ ಪರವಾಗಿ ಮತಚಲಾಯಿಸಿದ್ದಾರೆ.

Published On - 7:14 am, Tue, 28 January 20

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?