ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. 3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ: ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ […]

ಆಂಧ್ರ ರಾಜಕೀಯದಲ್ಲಿ ಸಂಚಲನ: ಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರ ಕೈಗೊಂಡ ಜಗನ್!
ಸಾಧು ಶ್ರೀನಾಥ್​

Updated on: Jan 29, 2020 | 6:45 AM

ಹೈದರಾಬಾದ್​: ಆಂಧ್ರದಲ್ಲಿ ವಿಧಾನಪರಿಷತ್ ರದ್ದುಪಡಿಸುವ ಮಹತ್ವದ ನಿರ್ಧಾರವನ್ನ ಸಿಎಂ ಜಗನ್ ಮೋಹನರೆಡ್ಡಿ ಕೈಗೊಂಡಿದ್ದಾರೆ. ಈ ಹಿಂದೆಯೂ ಹಲವು ಮಹತ್ವದ ನಿರ್ಣಯಗಳನ್ನ ಜಗನ್ ಮೋಹನ್ ರೆಡ್ಡಿ ಕೈಗೊಂಡಿದ್ದರು. ಇದೀಗ ಪರಿಷತ್​ನ ರದ್ದುಪಡಿಸಿರೋದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

3 ರಾಜಧಾನಿಗಳ ರಚನೆಗೆ ಟಿಡಿಪಿ ವಿರೋಧ:
ಆಂಧ್ರಪ್ರದೇಶದಲ್ಲಿ 3 ರಾಜಧಾನಿಗಳನ್ನು ರಚಿಸುವ ಜಗನ್ ಮೋಹನರೆಡ್ಡಿ ಅವರ ಯೋಜನೆಗೆ ಆಂಧ್ರ ವಿಧಾನಪರಿಷತ್ತು ತಡೆಯೊಡ್ಡಿತ್ತು. ಈ ಮಸೂದೆ ಜಾರಿಗೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತರೂ ಪರಿಷತ್ತಿನಲ್ಲಿ ಅನುಮೋದನೆ ದೊರೆಯದೆ ವಿಳಂಬವಾಗುತ್ತಿತ್ತು. ಅಮರಾವತಿಯಲ್ಲಿಯೇ ರಾಜಧಾನಿ ರಚನೆಯಾಗಬೇಕೆಂದು ವಾದಿಸಿದ್ದ ವಿರೋಧ ಪಕ್ಷ ಟಿಡಿಪಿ 3 ರಾಜಧಾನಿಗಳ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಪರಿಷತ್ತಿನಲ್ಲಿ ಟಿಡಿಪಿ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದು 3 ರಾಜಧಾನಿಗಳ ರಚನೆ ನಿರ್ಧಾರ ಜಾರಿಯಾಗುವುದನ್ನ ತಡೆಯುವಲ್ಲಿ ಯಶಸ್ವಿಯಾಗಿತ್ತು.

ಎಲ್ಲಾ ಬೆಳವಣಿಗೆಗಳ ಮೊದಲ ಹಂತವಾಗಿ ವಿಧಾನಪರಿಷತ್ತನ್ನೇ ರದ್ದುಪಡಿಸುವ ನಿರ್ಧಾರವನ್ನು ಜಗನಮೋಹನ ರೆಡ್ಡಿ ತೆಗೆದುಕೊಂಡಿದ್ದಾರೆ. ನಂತರ ಆಂಧ್ರದಲ್ಲಿ 3 ರಾಜಧಾನಿಗಳ ರಚನೆಯ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ವಿಧಾನಸಭೆಯಲ್ಲಿ ಬಹುಸಂಖ್ಯೆಯ ಶಾಸಕರು ಪರಿಷತ್ತು ರದ್ದುಮಾಡುವ ನಿರ್ಧಾರದ ಪರವಾಗಿ ಮತಚಲಾಯಿಸಿದ್ದಾರೆ.

Published On - 7:14 am, Tue, 28 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us