ಪ್ರಧಾನಿಯನ್ನು ಭೇಟಿ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ; ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ

|

Updated on: Mar 17, 2023 | 7:42 PM

ಪ್ರಧಾನಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಬಾಕಿ ಉಳಿದಿರುವ ಹಲವಾರು ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ರೆಡ್ಡಿ ಮನವಿ ಮಾಡಿದ್ದಾರೆ. ಆಂಧ್ರಪ್ರದೇಶ ಪುನರ್ವಿಭಜನಾ ಕಾಯ್ದೆಯಲ್ಲಿ ಉಲ್ಲೇಖಿಸಲಾದ ವಿಷಯಗಳ ಕುರಿತು...

ಪ್ರಧಾನಿಯನ್ನು ಭೇಟಿ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ; ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ
ಮೋದಿ ಭೇಟಿ ಮಾಡಿದ ವೈಎಸ್ ಜಗನ್ ಮೋಹನ್ ರೆಡ್ಡಿ
Follow us on

ದೆಹಲಿ: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿ ತಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ವಿಶೇಷ ರಾಜ್ಯ ಸ್ಥಾನಮಾನ, ಕೇಂದ್ರದಿಂದ ಬಾಕಿ ಇರುವ ಹಣ ಮತ್ತು ನೆರೆಯ ತೆಲಂಗಾಣದೊಂದಿಗೆ ಬಾಕಿ ಪಾವತಿಸಲು ಅವರ ಮಧ್ಯಸ್ಥಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ರಾಜ್ಯ ವಿಭಜನೆಯಾಗಿ ಒಂಬತ್ತು ವರ್ಷಗಳಾದರೂ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳ ಕುರಿತು ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಜಗನ್ ಪ್ರಧಾನಿಗೆ ಮನವಿ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದಾರೆ.

ಪ್ರಧಾನಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಬಾಕಿ ಉಳಿದಿರುವ ಹಲವಾರು ದ್ವಿಪಕ್ಷೀಯ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ರೆಡ್ಡಿ ಮನವಿ ಮಾಡಿದ್ದಾರೆ. ಆಂಧ್ರಪ್ರದೇಶ ಪುನರ್ವಿಭಜನಾ ಕಾಯ್ದೆಯಲ್ಲಿ ಉಲ್ಲೇಖಿಸಲಾದ ವಿಷಯಗಳ ಕುರಿತು ರಚಿಸಲಾದ ಕೇಂದ್ರ ಹಣಕಾಸು ಕಾರ್ಯದರ್ಶಿ ನೇತೃತ್ವದ ಸಮಿತಿಯು ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳನ್ನು ಮಾಡಿದೆ, ಆದರೆ ಕೆಲವು ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ಅವರು ಹೇಳಿದ್ದಾರೆ.

2014-15ನೇ ಹಣಕಾಸು ವರ್ಷದ ಸಂಪನ್ಮೂಲ ಅಂತರ ನಿಧಿಯಡಿ ₹ 36,625 ಕೋಟಿ ಬಾಕಿ ಉಳಿದಿದ್ದು, ಕೂಡಲೇ ಬಿಡುಗಡೆ ಮಾಡಬೇಕು. 2021-22ರಲ್ಲಿ ನೀಡಿದ್ದ ₹ 42,472 ಕೋಟಿ ಸಾಲದ ಮಿತಿಯನ್ನು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ₹ 17,923 ಕೋಟಿ ಮಾಡಲಾಗಿತ್ತು. ಅದನ್ನು ಹೆಚ್ಚಿಸುವಂತೆ ಜಗನ್ ಮನವಿ ಮಾಡಿದ್ದಾರೆ.

ಹಿಂದಿನ ಸರ್ಕಾರವು ಮಿತಿಯನ್ನು ಮೀರಿ ಸಾಲವನ್ನು ಬಳಸಿದ್ದರಿಂದ ರಾಜ್ಯ ಸಾಲದ ಮಿತಿಗಳನ್ನು ಈಗ ನಿರ್ಬಂಧಿಸಲಾಗಿದೆ. ಈ ಸರ್ಕಾರ ತಪ್ಪಿಲ್ಲದಿದ್ದರೂ ನಿಯಮಾನುಸಾರ ನೀಡಿರುವ ಸಾಲದ ಮಿತಿಯನ್ನೂ ಕಡಿತಗೊಳಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕುಡಿಯುವ ನೀರು ಸರಬರಾಜು ಘಟಕವನ್ನು ಸಂಸ್ಕರಿಸುವುದು ಸೇರಿದಂತೆ ತಾಂತ್ರಿಕ ಸಲಹಾ ಸಮಿತಿಯು ಅಂದಾಜು ಮಾಡಿದ ಅದೇ ಯೋಜನೆಗೆ ₹ 55,548 ಕೋಟಿಗಳನ್ನು ತಕ್ಷಣವೇ ಅನುಮೋದಿಸುವುದರ ಜೊತೆಗೆ, ಪೋಲವರಂ ಯೋಜನೆಯನ್ನು ತ್ವರಿತವಾಗಿ ಮುಂದುವರಿಸಲು ತಾತ್ಕಾಲಿಕ ರೀತಿಯಲ್ಲಿ ₹ 10,000 ಕೋಟಿ ಮಂಜೂರು ಮಾಡುವಂತೆ ಮುಖ್ಯಮಂತ್ರಿ ರೆಡ್ಡಿ ಪ್ರಧಾನಿಗೆ ಮನವಿ ಮಾಡಿದರು.

ಇದನ್ನೂ ಓದಿ: ಕಾಂಗ್ರೆಸ್​​ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ವಿರುದ್ಧದ ‘ಹೊಸ ರಂಗ’ಕ್ಕೆ ಒಪ್ಪಿದ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ

“ಪೋಲವರಂ ಯೋಜನೆ ಪ್ರವಾಹ ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ನೀಡಬೇಕು ಎಂದು ನಾನು ಮನವಿ ಮಾಡುತ್ತೇನೆ. ವಿಳಂಬ ಹೆಚ್ಚಾದಂತೆ ಯೋಜನೆಯ ವೆಚ್ಚ ಹೆಚ್ಚಾಗುತ್ತದೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಪ್ರವಾಹ ಸಂತ್ರಸ್ತರಿಗೆ ಡಿಬಿಟಿ ವಿಧಾನದಲ್ಲಿ ಈ ನೆರವನ್ನು ಒದಗಿಸಿದರೆ ವಿಳಂಬವನ್ನು ತಪ್ಪಿಸಬಹುದು ಎಂದು ಆಂಧ್ರ ಸಿಎಂ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ