AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗನ್ ರೆಡ್ಡಿ ಸರ್ಕಾರ ಆಂಧ್ರದ ಆರ್ಥಿಕತೆಯನ್ನು ನಾಶಪಡಿಸಿತು’:ಶ್ವೇತಪತ್ರ ಬಿಡುಗಡೆ ಮಾಡಿದ ಚಂದ್ರಬಾಬು ನಾಯ್ಡು

ರೆಡ್ಡಿ ಅಧಿಕಾರ ವಹಿಸಿಕೊಂಡಾಗ ಪ್ರಾರಂಭವಾದ ‘ದುರಾಡಳಿತ’ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಕೈಗಾರಿಕಾ ವಿರೋಧಿ ನೀತಿಗಳು, ರಾಜಧಾನಿ ನಗರ ಯೋಜನೆಗೆ ಬದಲಾವಣೆಗಳಿಗೆ ಕಾರಣವಾಯಿತು. ಪೋಲಾವರಂ ಯೋಜನೆಯಲ್ಲಿ ₹ 45,000 ಕೋಟಿ ನಷ್ಟ ಮತ್ತು ಇತರ ಹಾನಿ ₹ 7,900 ಕೋಟಿ ಎಂದು ಶ್ವೇತಪತ್ರದಲ್ಲಿ ಆರೋಪಿಸಲಾಗಿದೆ.

‘ಜಗನ್ ರೆಡ್ಡಿ ಸರ್ಕಾರ ಆಂಧ್ರದ ಆರ್ಥಿಕತೆಯನ್ನು ನಾಶಪಡಿಸಿತು’:ಶ್ವೇತಪತ್ರ ಬಿಡುಗಡೆ ಮಾಡಿದ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 26, 2024 | 7:25 PM

Share

ಅಮರಾವತಿ ಜುಲೈ 26: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಶುಕ್ರವಾರ ಶ್ವೇತಪತ್ರವನ್ನು (white paper) ಬಿಡುಗಡೆ ಮಾಡಿದ್ದು, ಜಗನ್ ಮೋಹನ್ ರೆಡ್ಡಿ (Jagan Mohan Reddy) ನೇತೃತ್ವದ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ನಾಶಪಡಿಸಿದ್ದು ₹ 7 ಲಕ್ಷ ಕೋಟಿಗಳಷ್ಟು ನಷ್ಟವನ್ನು ಉಂಟುಮಾಡಿದೆ ಎಂದು ಆರೋಪಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ರಾಜ್ಯದ ಹಣಕಾಸು ಕುರಿತು ಶ್ವೇತಪತ್ರವನ್ನು ಬಿಡುಗಡೆ ಮಾಡಿದ ನಾಯ್ಡು, ರೆಡ್ಡಿ ನಾಯಕತ್ವದಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ಶೇ.16ರಿಂದ ಶೇ.10.3ಕ್ಕೆ ಕುಸಿದಿದ್ದು, ಸೇವಾ ವಲಯದ ಬೆಳವಣಿಗೆ ದರ ಶೇ.10.3ರಿಂದ ಶೇ.9.9ಕ್ಕೆ ಕುಸಿದಿದೆ ಎಂದು ಆರೋಪಿಸಿದರು.

ರೆಡ್ಡಿ ಅಧಿಕಾರ ವಹಿಸಿಕೊಂಡಾಗ ಪ್ರಾರಂಭವಾದ ‘ದುರಾಡಳಿತ’ ನೈಸರ್ಗಿಕ ಸಂಪನ್ಮೂಲಗಳ ಲೂಟಿ, ಕೈಗಾರಿಕಾ ವಿರೋಧಿ ನೀತಿಗಳು, ರಾಜಧಾನಿ ನಗರ ಯೋಜನೆಗೆ ಬದಲಾವಣೆಗಳಿಗೆ ಕಾರಣವಾಯಿತು. ಪೋಲಾವರಂ ಯೋಜನೆಯಲ್ಲಿ ₹ 45,000 ಕೋಟಿ ನಷ್ಟ ಮತ್ತು ಇತರ ಹಾನಿ ₹ 7,900 ಕೋಟಿ ಎಂದು ದಾಖಲೆಯಲ್ಲಿ ಆರೋಪಿಸಲಾಗಿದೆ.

“2014 ರಿಂದ 2019 ರವರೆಗೆ ಆಂಧ್ರ ಪ್ರದೇಶವು ತೆಲಂಗಾಣಕ್ಕಿಂತ ವೇಗವಾಗಿ ಬೆಳೆಯುತ್ತಿದೆ, ಆದರೆ 2019 ರಿಂದ 2024 ರವರೆಗೆ ರೈತರ ಆದಾಯ ಕುಸಿಯಿತು ಮತ್ತು ಸಾಲಗಳು ಹೆಚ್ಚಾಗುವುದರೊಂದಿಗೆ ಆರ್ಥಿಕತೆಯು ನಾಶವಾಯಿತು” ಎಂದು ವಿಧಾನಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಾಯ್ಡು ಹೇಳಿದ್ದಾರೆ.

ಅಲ್ಪಾವಧಿಯ ವಿದ್ಯುತ್ ಖರೀದಿಯಿಂದಾಗಿ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ವಿದ್ಯುತ್ ವೆಚ್ಚ ಹೆಚ್ಚಾಯಿತು, ಇದು ₹ 12,250 ಕೋಟಿ ಹೆಚ್ಚುವರಿ ಹೊರೆಯನ್ನು ಸೇರಿಸಿತು, ಆದರೆ ಅಕ್ರಮ ಮರಳು ಗಣಿಗಾರಿಕೆ ₹ 7,000 ಕೋಟಿ ನಷ್ಟಕ್ಕೆ ಕಾರಣವಾಯಿತು. ಖನಿಜ ಸಂಪತ್ತಿನ ಲೂಟಿಯಿಂದ ₹ 9,750 ಕೋಟಿ ಆದಾಯ ನಷ್ಟವಾಗಿದೆ ಎಂದು ಆರೋಪಿಸಿದ ಅವರು, ಅಮರಾವತಿ ನಗರ ಯೋಜನೆ, ಪೋಲವರಂ ಯೋಜನೆ ಮತ್ತು ಇಂಧನ ಒಪ್ಪಂದಗಳ ರದ್ದತಿ ಹೂಡಿಕೆದಾರರ ವಿಶ್ವಾಸವನ್ನು ನಾಶಪಡಿಸಿದೆ. ಇದು ರಾಜ್ಯದ ಬ್ರ್ಯಾಂಡ್ ಇಮೇಜ್ ಅನ್ನು ಹಾಳು ಮಾಡಿದೆ ಎಂದು ಹೇಳಿದರು.

ರಾಜ್ಯದ ಸಾಲವು ಮಾರ್ಚ್ 31, 2019 ರಂದು ₹ 3.75 ಲಕ್ಷ ಕೋಟಿಯಿಂದ ಜೂನ್ 12, 2024 ರ ವೇಳೆಗೆ ₹ 9.74 ಲಕ್ಷ ಕೋಟಿಗೆ ಏರಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥರು ದೂರಿದ್ದಾರೆ.

ಇದನ್ನೂ ಓದಿ: ನೀತಿ ಆಯೋಗವನ್ನು ರದ್ದು ಮಾಡಿ; ಪ್ರಧಾನಿ ಮೋದಿ ನೇತೃತ್ವದ ಸಭೆಗೆ ಮುನ್ನ ಮಮತಾ ಬ್ಯಾನರ್ಜಿ ಬೇಡಿಕೆ

ಕೋವಿಡ್-19 ಪ್ರಭಾವದ ಹೊರತಾಗಿಯೂ ಆಂಧ್ರಪ್ರದೇಶ ಹೆಚ್ಚುವರಿ ₹52,197 ಕೋಟಿ ಸಂಗ್ರಹಿಸಬೇಕಿತ್ತು ಎಂದು ಶ್ವೇತಪತ್ರದಲ್ಲಿ ಹೇಳಿದ್ದು ಹಿಂದಿನ ಸರ್ಕಾರದ ಅಡಿಯಲ್ಲಿ ‘ಅಸಮರ್ಥತೆ’ ಮತ್ತು ‘ಕೆಟ್ಟ ನಿರ್ವಹಣೆ’ಯನ್ನು ಪತ್ರಿಕೆ ಎತ್ತಿ ತೋರಿಸಿದೆ.  ಇದು ಮಾರ್ಚ್ 2019 ರಲ್ಲಿ ₹ 3,75,295 ಕೋಟಿಗಳಿಂದ 2024 ರ ಮಧ್ಯದ ವೇಳೆಗೆ ₹ 9,74,556 ಕೋಟಿಗಳಿಗೆ ರಾಜ್ಯದ ಸಾಲದ ಏರಿಕೆಯನ್ನು ಎತ್ತಿ ತೋರಿಸಿದೆ.

ತಮ್ಮ ಸತತ ಏಳನೇ ಬಜೆಟ್ ಅನ್ನು ಮಂಡಿಸುತ್ತಿರುವಾಗ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು 2024-25 ರ ಆರ್ಥಿಕ ವರ್ಷದಲ್ಲಿ ಆಂಧ್ರಪ್ರದೇಶದ ಹೊಸ ರಾಜಧಾನಿಯ ಅಭಿವೃದ್ಧಿಗಾಗಿ ₹ 15,000 ಕೋಟಿಗಳ ವಿಶೇಷ ಹಣಕಾಸು ಬೆಂಬಲ ಪ್ಯಾಕೇಜ್ ಅನ್ನು ಘೋಷಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ