ತಿರುಪತಿ ಲಡ್ಡು ವಿವಾದ; ಪ್ರಾಣಿಗಳ ಕೊಬ್ಬಿನ ಆರೋಪದ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಕಾಂಗ್ರೆಸ್ ಆಗ್ರಹ

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಮತ್ತು ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಈ ವಿಷಯದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ತಿರುಪತಿ ಲಡ್ಡು ವಿವಾದ; ಪ್ರಾಣಿಗಳ ಕೊಬ್ಬಿನ ಆರೋಪದ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಕಾಂಗ್ರೆಸ್ ಆಗ್ರಹ
ವೈಎಸ್ ಶರ್ಮಿಳಾ

Updated on: Sep 20, 2024 | 5:12 PM

ಹೈದರಾಬಾದ್: ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂಬ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದಾಗಿ ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ತಿಳಿಸಿದ್ದಾರೆ. ಈ ವಿಷಯವು ದೇಶಾದ್ಯಂತ ಕೋಟ್ಯಂತರ ಜನರ ಭಾವನೆಗಳು ಮತ್ತು ನಂಬಿಕೆಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ಬುಧವಾರ ಆಂಧ್ರಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರ ಪ್ರಸಾದ ಕಲಬೆರಕೆಯಲ್ಲಿ ತೊಡಗಿತ್ತು ಎಂದು ಹೇಳಿದ್ದರು. ಇದು ಆಂಧ್ರಪ್ರದೇಶದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋಟ್ಯಂತರ ಜನರ ಭಾವನೆ, ಭಾವನೆಗಳು ಮತ್ತು ನಂಬಿಕೆಗೆ ಸಂಬಂಧಿಸಿದೆ ಎಂದು ಶರ್ಮಿಳಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ; ಆಂಧ್ರ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಸರ್ಕಾರ

“ಎನ್ ಚಂದ್ರಬಾಬು ನಾಯ್ಡು ಅವರು ಅಧಿಕಾರ ಸ್ವೀಕರಿಸಿದ ದಿನವೇ ಮಾದರಿ ತೆಗೆದುಕೊಳ್ಳಲಾಗಿದೆ ಎಂದು ವರದಿಯನ್ನು ಮಂಡಿಸಿದರು. ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಬಳಸುವ ಪದಾರ್ಥಗಳಲ್ಲಿ ದನದ ಟ್ಯಾಲೋ ಮತ್ತು ಮೀನಿನ ಎಣ್ಣೆಯೂ ಇದೆ ಎಂದು ಈ ರಿಪೋರ್ಟ್ ವರದಿ ಮಾಡಿದೆ. ಚಂದ್ರಬಾಬು ನಾಯ್ಡು ಇದನ್ನು ಏಕೆ ಇದೇ ವೇಳೆ ಬಹಿರಂಗಪಡಿಸಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದು ಶರ್ಮಿಳಾ ಹೇಳಿದ್ದಾರೆ.


ಹೈಕೋರ್ಟ್ ಮೆಟ್ಟಿಲೇರಿದ ವೈಎಸ್​ಆರ್​ಸಿಪಿ:

ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ತಿರುಪತಿ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ನಡುವೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಹೈಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ, ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಆಂಧ್ರ ಪ್ರದೇಶ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಇದನ್ನೂ ಓದಿ: ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ; ಟಿಟಿಡಿ ಸ್ಪಷ್ಟನೆ

ತೆಲುಗು ದೇಶಂ ಪಕ್ಷದ (ಟಿಡಿಪಿ) ಆರೋಪಗಳ ಬಗ್ಗೆ ವೈಎಸ್‌ಆರ್‌ಸಿಪಿಯ ವಕೀಲರು ಹಾಲಿ ನ್ಯಾಯಾಧೀಶರು ಅಥವಾ ನ್ಯಾಯಾಲಯ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ಕೋರಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಇಂದು (ಸೆಪ್ಟೆಂಬರ್ 20) ಬೆಳಿಗ್ಗೆ ಹೈಕೋರ್ಟ್ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಸೆಪ್ಟೆಂಬರ್ 25ರೊಳಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸುವಂತೆ ಪೀಠವು ಅರ್ಜಿದಾರರಿಗೆ ತಿಳಿಸಿದೆ.

ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇತ್ತು ಎಂಬ ಸಿಎಂ ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ತನಿಖೆ ನಡೆಸುವಂತೆ ಕೋರಿ ನ್ಯಾಯಾಲಯವು ವಾದವನ್ನು ಆಲಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us