AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದು, ದೇಹವನ್ನು ತುಂಡು-ತುಂಡಾಗಿ ಕತ್ತರಿಸಿದ ತಾಯಿ

ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ ಪ್ರಸಾದ್ ಎಂಬುವವನನ್ನು ಹತ್ಯೆ ಮಾಡಿದ್ದಳು. ಈ ಕುರಿತು ಪ್ರಕಾಶಂ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್ ದಾಮೋದರ್ ಮಾಹಿತಿ ನೀಡಿದ್ದು, ಆಕೆಯ ಸಂಬಂಧಿಕರು ಈ ಅಪರಾಧಕ್ಕೆ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮಗತನ ವಿಕೃತ ಹಾಗೂ ಅನುಚಿತ ವರ್ತನೆಯಿಂದ ಹತಾಶೆಗೊಂಡು ಈ ನಿರ್ಧಾರ ಮಾಡಿದ್ದರು.

ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದು, ದೇಹವನ್ನು ತುಂಡು-ತುಂಡಾಗಿ ಕತ್ತರಿಸಿದ ತಾಯಿ
ಅಪರಾಧ
ನಯನಾ ರಾಜೀವ್
|

Updated on: Feb 17, 2025 | 12:44 PM

Share

ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ ಪ್ರಸಾದ್ ಎಂಬುವವನನ್ನು ಹತ್ಯೆ ಮಾಡಿದ್ದಳು. ಈ ಕುರಿತು ಪ್ರಕಾಶಂ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್ ದಾಮೋದರ್ ಮಾಹಿತಿ ನೀಡಿದ್ದು, ಆಕೆಯ ಸಂಬಂಧಿಕರು ಈ ಅಪರಾಧಕ್ಕೆ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮಗತನ ವಿಕೃತ ಹಾಗೂ ಅನುಚಿತ ವರ್ತನೆಯಿಂದ ಹತಾಶೆಗೊಂಡು ಈ ನಿರ್ಧಾರ ಮಾಡಿದ್ದರು.

ಪ್ರಸಾದ್ ಖಮ್ಮಮ್, ಹೈದರಾಬಾದ್​ನಲ್ಲಿರುವ ಸಂಬಂಧಿಕರ ಬಳಿ ಕೆಟ್ಟಾಗಿ ನಡೆದುಕೊಂಡಿದ್ದ. ಹೈದರಾಬಾದ್ ಹಾಗೂ ನರಸರಾವ್​ಪೇಟದಲ್ಲಿ ಇರುವ ತನ್ನ ತಾಯಿಯ ತಂಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆತನನ್ನು ಕೊಡಲಿ ಅಥವಾ ಹರಿತವಾದ ಆಯುಧವನ್ನು ಬಳಸಿ ಹತ್ಯೆ ಮಾಡಲಾಗಿದೆ, ಕೊಲೆಯ ನಂತರ ಆತನ ದೇಹವನ್ನು ಸಂಬಂಧಿಕರ ಸಹಾಯದಿಂದ ಕತ್ತರಿಸಿ ಕುಂಬಮ್ ಗ್ರಾಮದ ನಕಲಗಂಡಿ ಕಾಲುವೆಯಲ್ಲಿ ಎಸೆಯಲಾಗಿತ್ತು.

ಆರೋಪಿಗಳು ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದು, ಸೆಕ್ಷನ್ 103(1) ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲುವೆಯಲ್ಲಿ ಶ್ಯಾಮ್‌ನ ದೇಹದ ಭಾಗಗಳನ್ನು ಗೋಣಿ ಚೀಲಗಳಲ್ಲಿ ಎಸೆಯಲಾಗಿರುವುದನ್ನು ಸ್ಥಳೀಯರು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಕೊಲೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Hyderabad: ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಕಾಲುವೆಗೆ ಎಸೆದು ಬಳಿಕ ಏನೂ ಆಗಿಲ್ಲ ಎಂಬಂತೆ ಬಿಂಬಿಸಿದ್ದರು, ತಮ್ಮ ಮಗ ಶ್ಯಾಮ್ ಕಾಣೆಯಾಗಿದ್ದಾನೆ ಎಂದು ಕಾಲೋನಿ ನಿವಾಸಿಗಳಿಗೆ ತಿಳಿಸಿದರು. ಪೊಲೀಸರು ಶ್ಯಾಮ್ ಕುಟುಂಬ ಸದಸ್ಯರನ್ನು ಪ್ರಶ್ನಿಸಿದಾಗ, ಆರಂಭದಲ್ಲಿ ತಾಯಿಯೇ ಕೊಲೆ ಮಾಡಿದ್ದಾಳೆ ಎಂಬ ತೀರ್ಮಾನಕ್ಕೆ ಬಂದರು. ಮಾರ್ಕಪುರಂ ಡಿಎಸ್ಪಿ ನಾಗರಾಜು ಘಟನಾ ಸ್ಥಳವನ್ನು ಪರಿಶೀಲಿಸಿದರು. ಅವರು ಮೃತರ ದೇಹದ ಭಾಗಗಳನ್ನು ಎಸೆಯಲಾಗಿದ್ದ ಪ್ರದೇಶಕ್ಕೆ ಹೋಗಿ ಪರೀಕ್ಷಿಸಿದರು.

ಮದ್ಯದ ಚಟಕ್ಕೆ ಬಿದ್ದಿದ್ದ ಶ್ಯಾಮ್ ತನ್ನ ಮನೆಯಲ್ಲಿನ ಮಹಿಳೆಯರೊಂದಿಗೆ ದೌರ್ಜನ್ಯ ನಡೆಸುತ್ತಿದ್ದ ಮತ್ತು ಅವನ ಕುಟುಂಬ ಸದಸ್ಯರು ಈ ಕೊಲೆಗೆ ಕಾರಣರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆಯ ನಂತರ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!