AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದು, ದೇಹವನ್ನು ತುಂಡು-ತುಂಡಾಗಿ ಕತ್ತರಿಸಿದ ತಾಯಿ

ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ ಪ್ರಸಾದ್ ಎಂಬುವವನನ್ನು ಹತ್ಯೆ ಮಾಡಿದ್ದಳು. ಈ ಕುರಿತು ಪ್ರಕಾಶಂ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್ ದಾಮೋದರ್ ಮಾಹಿತಿ ನೀಡಿದ್ದು, ಆಕೆಯ ಸಂಬಂಧಿಕರು ಈ ಅಪರಾಧಕ್ಕೆ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮಗತನ ವಿಕೃತ ಹಾಗೂ ಅನುಚಿತ ವರ್ತನೆಯಿಂದ ಹತಾಶೆಗೊಂಡು ಈ ನಿರ್ಧಾರ ಮಾಡಿದ್ದರು.

ಅಸಭ್ಯ ವರ್ತನೆ ತೋರಿದ್ದ ಮಗನನ್ನು ಕೊಂದು, ದೇಹವನ್ನು ತುಂಡು-ತುಂಡಾಗಿ ಕತ್ತರಿಸಿದ ತಾಯಿ
ಅಪರಾಧ
ನಯನಾ ರಾಜೀವ್
|

Updated on: Feb 17, 2025 | 12:44 PM

Share

ತಾಯಿಯೊಬ್ಬಳು ಮಗನ ಅಸಭ್ಯ ವರ್ತನೆ ಸಹಿಸಲಾಗದೆ ಕೊಂದು ಆತನನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 13ರಂದು ಲಕ್ಷ್ಮೀದೇವಿ ಎಂಬಾಕೆ ತನ್ನ 35 ವರ್ಷದ ಮಗ ಶ್ಯಾಂ ಪ್ರಸಾದ್ ಎಂಬುವವನನ್ನು ಹತ್ಯೆ ಮಾಡಿದ್ದಳು. ಈ ಕುರಿತು ಪ್ರಕಾಶಂ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್ ದಾಮೋದರ್ ಮಾಹಿತಿ ನೀಡಿದ್ದು, ಆಕೆಯ ಸಂಬಂಧಿಕರು ಈ ಅಪರಾಧಕ್ಕೆ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮಗತನ ವಿಕೃತ ಹಾಗೂ ಅನುಚಿತ ವರ್ತನೆಯಿಂದ ಹತಾಶೆಗೊಂಡು ಈ ನಿರ್ಧಾರ ಮಾಡಿದ್ದರು.

ಪ್ರಸಾದ್ ಖಮ್ಮಮ್, ಹೈದರಾಬಾದ್​ನಲ್ಲಿರುವ ಸಂಬಂಧಿಕರ ಬಳಿ ಕೆಟ್ಟಾಗಿ ನಡೆದುಕೊಂಡಿದ್ದ. ಹೈದರಾಬಾದ್ ಹಾಗೂ ನರಸರಾವ್​ಪೇಟದಲ್ಲಿ ಇರುವ ತನ್ನ ತಾಯಿಯ ತಂಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆತನನ್ನು ಕೊಡಲಿ ಅಥವಾ ಹರಿತವಾದ ಆಯುಧವನ್ನು ಬಳಸಿ ಹತ್ಯೆ ಮಾಡಲಾಗಿದೆ, ಕೊಲೆಯ ನಂತರ ಆತನ ದೇಹವನ್ನು ಸಂಬಂಧಿಕರ ಸಹಾಯದಿಂದ ಕತ್ತರಿಸಿ ಕುಂಬಮ್ ಗ್ರಾಮದ ನಕಲಗಂಡಿ ಕಾಲುವೆಯಲ್ಲಿ ಎಸೆಯಲಾಗಿತ್ತು.

ಆರೋಪಿಗಳು ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದು, ಸೆಕ್ಷನ್ 103(1) ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲುವೆಯಲ್ಲಿ ಶ್ಯಾಮ್‌ನ ದೇಹದ ಭಾಗಗಳನ್ನು ಗೋಣಿ ಚೀಲಗಳಲ್ಲಿ ಎಸೆಯಲಾಗಿರುವುದನ್ನು ಸ್ಥಳೀಯರು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಕೊಲೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Hyderabad: ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಕಾಲುವೆಗೆ ಎಸೆದು ಬಳಿಕ ಏನೂ ಆಗಿಲ್ಲ ಎಂಬಂತೆ ಬಿಂಬಿಸಿದ್ದರು, ತಮ್ಮ ಮಗ ಶ್ಯಾಮ್ ಕಾಣೆಯಾಗಿದ್ದಾನೆ ಎಂದು ಕಾಲೋನಿ ನಿವಾಸಿಗಳಿಗೆ ತಿಳಿಸಿದರು. ಪೊಲೀಸರು ಶ್ಯಾಮ್ ಕುಟುಂಬ ಸದಸ್ಯರನ್ನು ಪ್ರಶ್ನಿಸಿದಾಗ, ಆರಂಭದಲ್ಲಿ ತಾಯಿಯೇ ಕೊಲೆ ಮಾಡಿದ್ದಾಳೆ ಎಂಬ ತೀರ್ಮಾನಕ್ಕೆ ಬಂದರು. ಮಾರ್ಕಪುರಂ ಡಿಎಸ್ಪಿ ನಾಗರಾಜು ಘಟನಾ ಸ್ಥಳವನ್ನು ಪರಿಶೀಲಿಸಿದರು. ಅವರು ಮೃತರ ದೇಹದ ಭಾಗಗಳನ್ನು ಎಸೆಯಲಾಗಿದ್ದ ಪ್ರದೇಶಕ್ಕೆ ಹೋಗಿ ಪರೀಕ್ಷಿಸಿದರು.

ಮದ್ಯದ ಚಟಕ್ಕೆ ಬಿದ್ದಿದ್ದ ಶ್ಯಾಮ್ ತನ್ನ ಮನೆಯಲ್ಲಿನ ಮಹಿಳೆಯರೊಂದಿಗೆ ದೌರ್ಜನ್ಯ ನಡೆಸುತ್ತಿದ್ದ ಮತ್ತು ಅವನ ಕುಟುಂಬ ಸದಸ್ಯರು ಈ ಕೊಲೆಗೆ ಕಾರಣರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆಯ ನಂತರ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ