AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹ 200 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಮಾಡಿದ ಆಂಧ್ರಪ್ರದೇಶ ಪೊಲೀಸ್; ವಿಡಿಯೊ ನೋಡಿ

ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂ ಜಿಲ್ಲೆಯ 11 ಮಂಡಲಗಳಲ್ಲಿ ಅಕ್ರಮ ಮಾವೋವಾದಿಗಳು ಗಾಂಜಾ ಕೃಷಿಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಹೇಳಿದ್ದಾರೆ.

₹ 200 ಕೋಟಿ ಮೌಲ್ಯದ 2 ಲಕ್ಷ ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಮಾಡಿದ ಆಂಧ್ರಪ್ರದೇಶ ಪೊಲೀಸ್; ವಿಡಿಯೊ ನೋಡಿ
ಗಾಂಜಾ ನಾಶಮಾಡುತ್ತಿರುವ ಆಂಧ್ರ ಪೊಲೀಸ್
TV9 Web
| Edited By: |

Updated on: Feb 13, 2022 | 11:25 AM

Share

ವಿಶಾಖಪಟ್ಟಣಂ: ₹ 200 ಕೋಟಿಗೂ ಅಧಿಕ ಮೌಲ್ಯದ ಎರಡು ಲಕ್ಷ ಕೆಜಿ ಗಾಂಜಾವನ್ನು (Ganja) ನಾಶಪಡಿಸಿರುವುದಾಗಿ ಆಂಧ್ರಪ್ರದೇಶ (Andhra Pradesh) ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಳೆದೆರಡು ವರ್ಷಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಶಪಡಿಸಿದ ಮಾದಕ ವಸ್ತು (narcotic) ಇದು ಎಂದು ಅವರು ಹೇಳಿದರು. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂ ಜಿಲ್ಲೆಯ 11 ಮಂಡಲಗಳಲ್ಲಿ ಅಕ್ರಮ ಮಾವೋವಾದಿಗಳು ಗಾಂಜಾ ಕೃಷಿಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಹೇಳಿದ್ದಾರೆ. ‘ಪರಿವರ್ತನ್’ ಕಾರ್ಯಾಚರಣೆಯ ಭಾಗವಾಗಿ 406 ವಿಶೇಷ ಪೊಲೀಸ್ ತಂಡಗಳು 11 ಮಂಡಲಗಳ 313 ಗ್ರಾಮಗಳಲ್ಲಿ ಗಾಂಜಾ ತೋಟಗಳನ್ನು ನಾಶಪಡಿಸಿದವು. ಆಂಧ್ರ-ಒಡಿಶಾ ಗಡಿಯಲ್ಲಿ ವಿವಿಧ ರಾಜ್ಯಗಳ ಹಲವಾರು ಗುಂಪುಗಳು ಗಾಂಜಾ ಕೃಷಿ ಮತ್ತು ಮಾದಕ ದ್ರವ್ಯದ ಅಕ್ರಮ ಸಾಗಣೆಯಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ.  ಗಿಡ ಬೆಳೆಸಿದ್ದಕ್ಕಾಗಿ 1,500 ಜನರನ್ನು ಬಂಧಿಸಲಾಗಿದೆ ಮತ್ತು 577 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಗಾಂಜಾ ಸಾಗಾಟದಲ್ಲಿ ತೊಡಗಿದ್ದ 314 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದವಸ್ತುಗಳನ್ನು ಗುಡ್ಡೆಹಾಕಿ ಸುಡುತ್ತಿರುವ ವಿಡಿಯೊವನ್ನು ಆಂಧ್ರಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದು, ಆಂಧ್ರಪ್ರದೇಶದ ಪೊಲೀಸರಿಗೆ ಐತಿಹಾಸಿಕ ಕ್ಷಣ. 2 ಲಕ್ಷ ಕೆಜಿ ಗಾಂಜಾವನ್ನು ಆಂಧ್ರ ಪೊಲೀಸರ ಜತೆ ಮಾದಕ ವಸ್ತು ನಿರ್ಮೂಲನ ಸಮಿತಿ, ಕೊಡೂರು ಮತ್ತು ಅನಕಪಲ್ಲಿ ವಿಶೇಷ ಜಾರಿ ಬ್ಯುರೊ ನಾಶಮಾಡುತ್ತಿರುವುದಾಗಿ ಟ್ವೀಟ್ ನಲ್ಲಿ ಹೇಳಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ಪುರಾವೆ ಕೇಳಿದ್ದೇವಾ?: ಅಸ್ಸಾಂ ಸಿಎಂ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?