AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು
ಮಗುImage Credit source: Shutterstock
ನಯನಾ ರಾಜೀವ್
|

Updated on: Jan 28, 2024 | 2:01 PM

Share

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

3 ತಿಂಗಳ ಹಿಂದೆ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದ ಇಂಜಿನಿಯರಿಂಗ್ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಸೇರಿಕೊಂಡಿದ್ದಾಳೆ. ವಿದ್ಯಾರ್ಥಿನಿ ಗರ್ಭಿಣಿ ಎಂಬ ಅಂಶವನ್ನು ಕಾಲೇಜು ಆಡಳಿತ ಮಂಡಳಿ ಗುರುತಿಸದಿರುವುದು ಗಮನಾರ್ಹ.

ಹೆರಿಗೆಯಾಗುವವರೆಗೂ ಆಕೆ ಗರ್ಭಿಣಿ ಎಂದು ವಿದ್ಯಾರ್ಥಿಗಳಿಗೆ ತಿಳಿದಿರಲಿಲ್ಲ. ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಎರಡನೇ ವರ್ಷ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ಎಂದು ಶುಕ್ರವಾರ ತಡರಾತ್ರಿ ಪೋಷಕರಿಗೆ ಕರೆ ಮಾಡಿದ್ದಾಳೆ.

ಮತ್ತಷ್ಟು ಓದಿ: ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ, ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಶ್ಲಾಘನೆ

ಅಷ್ಟರಲ್ಲಿ ಪೋಷಕರು ಹಾಸ್ಟೆಲ್​ಗೆ ಓಡೋಡಿ ಬಂದಿದ್ದಾರೆ, ಆದರೆ, ಹೊಟ್ಟೆ ನೋವು ಉಲ್ಬಣಗೊಂಡಿದ್ದರಿಂದ ರಾತ್ರಿ 9 ಗಂಟೆಗೆ ವಿದ್ಯಾರ್ಥಿನಿ ಬಾತ್ ರೂಮಿಗೆ ಹೋಗಿದ್ದಾಳೆ. ಸ್ವಲ್ಪ ಸಮಯವಾದರೂ ಹೊರಗೆ ಬರದ ಕಾರಣ, ಆಗಲೇ ಹಾಸ್ಟೆಲ್‌ಗೆ ಬಂದಿದ್ದ ಆತನ ಸ್ನೇಹಿತರು ಹಾಗೂ ಪೋಷಕರು ಬಾಗಿಲು ಒಡೆದಿದ್ದಾರೆ.

ಒಳಗಿನ ದೃಶ್ಯ ನೋಡಿ ಎಲ್ಲರೂ ಬೆಚ್ಚಿಬಿದ್ದರು. ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ವಿದ್ಯಾರ್ಥಿಯ ಪೋಷಕರು ಹಾಗೂ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಕರ್ನೂಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಶನಿವಾರ ಮೃತಪಟ್ಟಿದ್ದಾಳೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು