AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಮದುವೆಮನೆಯಿಂದ ವಧುವನ್ನು ಅಪಹರಿಸಲು ಯತ್ನಿಸಿದ ಕುಟುಂಬ, ಮೆಣಸಿನ ಪುಡಿ ಎರಚಿ ಹಲ್ಲೆ

ಮದುವೆ ಮನೆಯಲ್ಲಿ ಕುಟುಂಬದವರೇ ವಧುವನ್ನು ಅಪಹರಿಸಲು ಪ್ರಯತ್ನ ಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆದರೆ ಕೊನೆಗೂ ವರನ ಕಡೆಯವರು ಆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ. ಆದರೆ ವಧುವಿನ ಕುಟುಂಬ ಈ ರೀತಿ ನಡೆದುಕೊಳ್ಳಲು ಕಾರಣ ಏನೆಂಬುದರ ಕುರಿತು ತನಿಖೆ ನಡೆಯುತ್ತಿದೆ.

ಆಂಧ್ರಪ್ರದೇಶ: ಮದುವೆಮನೆಯಿಂದ ವಧುವನ್ನು ಅಪಹರಿಸಲು ಯತ್ನಿಸಿದ ಕುಟುಂಬ, ಮೆಣಸಿನ ಪುಡಿ ಎರಚಿ ಹಲ್ಲೆ
ವಧುವಿನ ಅಪಹರಣಕ್ಕೆ ಯತ್ನImage Credit source: India Today
ನಯನಾ ರಾಜೀವ್
|

Updated on: Apr 23, 2024 | 7:48 AM

Share

ಸಾಮಾನ್ಯವಾಗಿ ಮಗಳ ಮದುವೆ(Marriage) ಎಂದು ಪೋಷಕರು ಸಂಭ್ರಮದಲ್ಲಿರುತ್ತಾರೆ, ಮದುವೆ ನಿರ್ವಿಘ್ನವಾಗಿ ನೆರವೇರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಆಂಧ್ರಪ್ರದೇಶದಲ್ಲಿ ನಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಆಂಧ್ರಪ್ರದೇಶದ ಗೋದಾವರಿಯಲ್ಲಿ ಮದುವೆ ಮನೆಯಲ್ಲಿ ಕುಟುಂಬದವರೇ ವಧುವನ್ನು ಅಪಹರಿಸಲು ಪ್ರಯತ್ನಿಸಿರುವ ಘಟನೆ ನಡೆದಿದೆ.

ಅವರನ್ನು ತಡೆಯಲು ಪ್ರಯತ್ನಿಸಿದವರ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯುತ್ತಿರುವ ದೃಶ್ಯ ಸೆರೆಯಾಗಿದೆ.

ಕಡಿಯಂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಾಗ್ಯೂ, ಸ್ನೇಹಾ ಅವರ ಕುಟುಂಬವು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ದಾಳಿ ಮಾಡಿ ಅವಳನ್ನು ಅಪಹರಿಸಲು ಪ್ರಯತ್ನಿಸಿದಾಗ ಇರುವ ಸಂತೋಷವೆಲ್ಲವೂ ದೂರವಾಗಿತ್ತು.

ಆದರೆ, ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಇಲ್ಲಿ ನಡೆಯುತ್ತದೆ ಸತ್ತವರಿಗೂ ಮದುವೆ; ಇದು ತುಳುನಾಡಿನ ಪ್ರೇತ ಕಲ್ಯಾಣ

ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!