ಆಂಧ್ರಪ್ರದೇಶ: ಪಿಕ್​ಅಪ್ ವ್ಯಾನ್​ ಡಿವೈಡರ್​ಗೆ ಡಿಕ್ಕಿ, ಮೂವರು ಮಕ್ಕಳು ಸೇರಿ ಐದು ಮಂದಿ ಸಾವು

|

Updated on: Oct 02, 2024 | 11:44 AM

ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಪಿಕ್​ಅಪ್​ ವ್ಯಾನ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಾಯಗಳಾಗಿವೆ. ಆದಿಲಾಬಾದ್‌ನ ಗುಡಿಹತ್ನೂರು ಮಂಡಲದ ಮೇಕಲಗಂಡಿ ಕಾರ್ನರ್ ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಎಂಟು ಜನರಿದ್ದ ವಾಹನವು ನಿರ್ಮಲ್ ಜಿಲ್ಲೆಯ ಭೈಂಸಾದಿಂದ ಆದಿಲಾಬಾದ್‌ಗೆ ತೆರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಆಂಧ್ರಪ್ರದೇಶ: ಪಿಕ್​ಅಪ್ ವ್ಯಾನ್​ ಡಿವೈಡರ್​ಗೆ ಡಿಕ್ಕಿ, ಮೂವರು ಮಕ್ಕಳು ಸೇರಿ ಐದು ಮಂದಿ ಸಾವು
ಅಪಘಾತ
Follow us on

ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಪಿಕ್​ಅಪ್​ ವ್ಯಾನ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಾಯಗಳಾಗಿವೆ. ಆದಿಲಾಬಾದ್‌ನ ಗುಡಿಹತ್ನೂರು ಮಂಡಲದ ಮೇಕಲಗಂಡಿ ಕಾರ್ನರ್ ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಎಂಟು ಜನರಿದ್ದ ವಾಹನವು ನಿರ್ಮಲ್ ಜಿಲ್ಲೆಯ ಭೈಂಸಾದಿಂದ ಆದಿಲಾಬಾದ್‌ಗೆ ತೆರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಮೃತರನ್ನು ಮೋಯಿಜ್, 60, ಅಲಿ, 8, ಖಾಜಾ ಮೊಯಿನುದ್ದೀನ್, 40, ಮೊಹಮ್ಮದ್ ಉಸ್ಮಾನುದ್ದೀನ್, 11, ಮತ್ತು ಫರೀದ್, 12 ಸೇರಿದ್ದಾರೆ. ಫರೀದ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಸಾವನ್ನಪ್ಪಿದರು, ಇತರರು ಸ್ಥಳದಲ್ಲೇ ಸಾವನ್ನಪ್ಪಿದರು.

ಗಾಯಾಳುಗಳನ್ನು ಅದಿಲಾಬಾದ್ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಬಲಿಪಶುಗಳು ಮತ್ತು ಗಾಯಾಳುಗಳೆಲ್ಲರೂ ಆದಿಲಾಬಾದ್ ಪಟ್ಟಣದ ಶಿಕ್ಷಕರ ಕಾಲೋನಿಯಲ್ಲಿ ವಾಸಿಸುವ ಒಂದೇ ಕುಟುಂಬದ ಸಂಬಂಧಿಗಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ಎರಡು ಪ್ರತ್ಯೇಕ ಅಪಘಾತ, 9 ಮಂದಿ ಸಾವು

ಗುಜರಾತ್: ಡಿವೈಡರ್​ ಮೇಲೆ ಹಾರಿ 3 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್, 7 ಮಂದಿ ಸಾವು
ಬಸ್ಸೊಂದು ರಸ್ತೆಯಿಂದ ಆಯತಪ್ಪಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 4 ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್​ನ ದ್ವಾರಕಾ ಬಳಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ, ಬಸ್ಸು ದ್ವಾರಕಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 51 ರಲ್ಲಿ ರಾತ್ರಿ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ರಸ್ತೆಯಲ್ಲಿ ಜಾನುವಾರುಗಳಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಿನಿವ್ಯಾನ್, ಕಾರು ಮತ್ತು ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು 6 ಬರೋಡಾ ಎನ್‌ಡಿಆರ್‌ಎಫ್ ತಂಡದ ಎಎಸ್‌ಐ ರವಿಕಾಂತ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 10:59 am, Wed, 2 October 24