AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು

ಕೆ ರೋಸಯ್ಯ ನಿಧನ: ರೋಸಯ್ಯ 1933ರ ಜುಲೈ 4ರಂದು, ಆಂಧ್ರದ ಗುಂಟೂರು ಜಿಲ್ಲೆಯ ವೆಮೂರಿನಲ್ಲಿ ಹುಟ್ಟಿದ್ದಾರೆ. ಗುಂಟೂರಿನ ಹಿಂದು ಕಾಲೇಜಿನಲ್ಲಿ ವಾಣಿಜ್ಯದಲ್ಲಿ ಪದವಿ ಪಡೆದಿದ್ದಾರೆ. ಅವರು 1968, 1974 ಮತ್ತು 1980 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು.

Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು
ಕೋನಿಜೇಟಿ ರೋಸಯ್ಯ
TV9 Web
| Updated By: Lakshmi Hegde|

Updated on:Dec 04, 2021 | 10:16 AM

Share

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕೋನಿಜೇಟಿ ರೋಸಯ್ಯ (Konijeti Rosaiah Death) ಇಂದು ಮುಂಜಾನೆ ನಿಧನರಾದರು. 89 ವರ್ಷದ ಅವರು ಬಹುದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕಡಿಮೆ ರಕ್ತದೊತ್ತಡಕ್ಕೆ ಒಳಗಾಗಿ ಬಿದ್ದ ಅವರನ್ನು ಬಂಜಾರಾ ಹಿಲ್ಸ್​ ಸ್ಟಾರ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ. 

ಕೆ. ರೋಸಯ್ಯ ಕಾಂಗ್ರೆಸ್​​ನ ಪ್ರಮುಖ ನಾಯಕರು. ಅವರು ಶಾಸಕರು, ಎಂಎಲ್​ಸಿ, ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ (ತೆಲಂಗಾಣ ಬೇರೆ ರಾಜ್ಯವಾಗಿ ವಿಭಜನೆ ಆಗುವುದಕ್ಕೂ ಪೂರ್ವ) ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು ಏಳು ಬಾರಿ ಬಜೆಟ್​ ಮಂಡನೆ ಮಾಡುವ ದಾಖಲೆ ನಿರ್ಮಿಸಿದ್ದರು. ವೈ.ಎಸ್​. ರಾಜಶೇಖರ್​ ರೆಡ್ಡಿ ನಿಧನದ ನಂತರ ಅವಿಭಜಿತ ಆಂಧ್ರಪ್ರದೇಶದ ಸಿಇಒ ಆಗಿದ್ದರು. ಅಷ್ಟೇ ಅಲ್ಲ, ತಮಿಳು ನಾಡು ಮತ್ತು ಕರ್ನಾಟಕದ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ರೋಸಯ್ಯ 1933ರ ಜುಲೈ 4ರಂದು, ಆಂಧ್ರದ ಗುಂಟೂರು ಜಿಲ್ಲೆಯ ವೆಮೂರಿನಲ್ಲಿ ಹುಟ್ಟಿದ್ದಾರೆ. ಗುಂಟೂರಿನ ಹಿಂದು ಕಾಲೇಜಿನಲ್ಲಿ ವಾಣಿಜ್ಯದಲ್ಲಿ ಪದವಿ ಪಡೆದಿದ್ದಾರೆ. ಅವರು 1968, 1974 ಮತ್ತು 1980 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಮೊಟ್ಟಮೊದಲ ಬಾರಿಗೆ ಆಂಧ್ರಪ್ರದೇಶದ ಮರಿ ಚೆನ್ನಾ ರೆಡ್ಡಿ ಸರ್ಕಾರದಲ್ಲಿ ರಸ್ತೆ ಮತ್ತು ಸಾರಿಗೆ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಅವಿಭಜಿತ ಆಂಧ್ರಪ್ರದೇಶವಿದ್ದಾಗಿನಿಂದಲೂ ಆ ಸರ್ಕಾರದ ಸಂಪುಟದಲ್ಲಿ ಅಪಾರ ಅನುಭವ ಹೊಂದಿದ್ದ ಅವರು 2009ರ ಸೆಪ್ಟೆಂಬರ್​ 13ರಿಂದ, 2010ರ ನವೆಂಬರ್​ 24ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಾದ ಬಳಿಕ 2011ರ ಆಗಸ್ಟ್​ 31ರಿಂದ 2016ರ ಆಗಸ್ಟ್​ 30ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು. ಈ ಮಧ್ಯೆ 2014ರಲ್ಲಿ ಎರಡು ತಿಂಗಳು (ಜೂನ್​-ಆಗಸ್ಟ್​) ಕರ್ನಾಟಕ ರಾಜ್ಯಪಾಲರಾಗಿದ್ದರು. ಆಗ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ನಂತರ ವಜುಭಾಯಿ ವಾಲಾ ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದರು.

ಇದನ್ನೂ ಓದಿ: ‘ಯಾಹೂ’ನಲ್ಲಿ ಅತ್ಯಂತ ಹೆಚ್ಚು ಸರ್ಚ್​ಗೆ ಒಳಗಾದ ಸೆಲೆಬ್ರಿಟಿಗಳು ಯಾರು?; ಇಲ್ಲಿದೆ ಮಾಹಿತಿ

Published On - 10:03 am, Sat, 4 December 21

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?