AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ಮಾಡುವಾಗ ಮಗಳ ಬಾಯಿಗೆ ಕುಂಕುಮ ತುಂಬಿದ ಅಪ್ಪ; ಒಂದೇ ಗಂಟೆಯಲ್ಲಿ ಬಾಲಕಿ ಸಾವು

32 ವರ್ಷದ ವ್ಯಕ್ತಿ ಧಾರ್ಮಿಕ ಕ್ರಿಯೆಯ ಭಾಗವಾಗಿ ತಮ್ಮ ನಾಲ್ಕು ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದರು. ಅದಾದ ಒಂದೇ ಗಂಟೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ.

ಪೂಜೆ ಮಾಡುವಾಗ ಮಗಳ ಬಾಯಿಗೆ ಕುಂಕುಮ ತುಂಬಿದ ಅಪ್ಪ; ಒಂದೇ ಗಂಟೆಯಲ್ಲಿ ಬಾಲಕಿ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 16, 2022 | 6:29 PM

ಹೈದರಾಬಾದ್: ಮಾಟ-ಮಂತ್ರದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗಳ ಜೀವವನ್ನೇ ತೆಗೆದಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ (Andhra Pradesh) ನೆಲ್ಲೂರು ಜಿಲ್ಲೆಯಲ್ಲಿ 32 ವರ್ಷದ ವ್ಯಕ್ತಿ ತನ್ನ 4 ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

32 ವರ್ಷದ ವ್ಯಕ್ತಿ ಧಾರ್ಮಿಕ ಕ್ರಿಯೆಯ ಭಾಗವಾಗಿ ತಮ್ಮ ನಾಲ್ಕು ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದರು. ಅದಾದ ಒಂದೇ ಗಂಟೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ. ಆರೋಪಿ ಕಂದಾ ವೇಣುಗೋಪಾಲ್ ವ್ಯಾಪಾರದಲ್ಲಿ ನಷ್ಟವನ್ನು ಅನುಭವಿಸಿದ್ದರಿಂದ ಕಂಗಾಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಟ-ಮಂತ್ರದ ಮೊರೆ ಹೋಗಿದ್ದ ಆತ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ತನ್ನ ಅತ್ತೆಯ ಮನೆಯಿಂದ ಮರಳಿ ಕರೆತಂದ್ದ. ಆತನಿಗೆ ನಷ್ಟವನ್ನುಂಟುಮಾಡುತ್ತದೆ ಎನ್ನಲಾಗಿದ್ದ ದುಷ್ಟ ಶಕ್ತಿಗಳನ್ನು ಓಡಿಸಲು ಮನೆಯಲ್ಲಿ ಪೂಜೆಯನ್ನು ಇಟ್ಟುಕೊಂಡಿದ್ದ. (source)

ಇದನ್ನೂ ಓದಿ: Shocking News: ರೆಸ್ಟೋರೆಂಟ್​​ನಲ್ಲಿ ಮೋಮೋಸ್ ತಿನ್ನುವಾಗ​ ಗಂಟಲಲ್ಲಿ ಸಿಕ್ಕಿ ವ್ಯಕ್ತಿ ಸಾವು!

ಈ ವೇಳೆ ಬುಧವಾರ ಬೆಳಗ್ಗೆ ವೇಣುಗೋಪಾಲ್ ತಮ್ಮ ಪೂಜಾ ಕೊಠಡಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಆರಂಭಿಸಿದ್ದಾಗ ಈ ಘಟನೆ ನಡೆದಿದೆ. ತನ್ನ ಹೆಣ್ಣುಮಕ್ಕಳನ್ನು ಕರೆದು ಅವರ ಮೇಲೆ ಅರಿಶಿನ ನೀರನ್ನು ಎರಚಲು ಪ್ರಾರಂಭಿಸಿದ. ನಂತರ ಸಣ್ಣ ಮಗಳ ಬಾಯಿ ತೆರೆಯಲು ಹೇಳಿ ಕುಂಕುಮವನ್ನು ತುಂಬಿದ. ಅವಳು ಬೇಡಬೇಡವೆಂದರೂ ಕೇಳದೆ ಕುಂಕುಮವನ್ನು ಬಲವಂತವಾಗಿ ತಿನ್ನುವಂತೆ ಮಾಡಿದ. ಇದಾದ ನಂತರ ಆ ಹುಡುಗಿ ಉಸಿರುಗಟ್ಟಿ ಜೋರಾಗಿ ಅಳಲು ಪ್ರಾರಂಭಿಸಿದ್ದಳು. ಬಳಿಕ ಅವಳನ್ನು ಒಳಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆಕೆ ಪ್ರಜ್ಞಾಹೀನಳಾಗಿದ್ದಳು.

ನಂತರ ಆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಚೆನ್ನೈಗೆ ಕಳುಹಿಸಲಾಗಿತ್ತು. ಆದರೆ, ಮರುದಿನ ಬೆಳಗ್ಗೆ ಆಕೆ ಚೆನ್ನೈನಲ್ಲಿ ಕೊನೆಯುಸಿರೆಳೆದಳು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ