AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ಮಾಡುವಾಗ ಮಗಳ ಬಾಯಿಗೆ ಕುಂಕುಮ ತುಂಬಿದ ಅಪ್ಪ; ಒಂದೇ ಗಂಟೆಯಲ್ಲಿ ಬಾಲಕಿ ಸಾವು

32 ವರ್ಷದ ವ್ಯಕ್ತಿ ಧಾರ್ಮಿಕ ಕ್ರಿಯೆಯ ಭಾಗವಾಗಿ ತಮ್ಮ ನಾಲ್ಕು ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದರು. ಅದಾದ ಒಂದೇ ಗಂಟೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ.

ಪೂಜೆ ಮಾಡುವಾಗ ಮಗಳ ಬಾಯಿಗೆ ಕುಂಕುಮ ತುಂಬಿದ ಅಪ್ಪ; ಒಂದೇ ಗಂಟೆಯಲ್ಲಿ ಬಾಲಕಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 16, 2022 | 6:29 PM

Share

ಹೈದರಾಬಾದ್: ಮಾಟ-ಮಂತ್ರದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗಳ ಜೀವವನ್ನೇ ತೆಗೆದಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ (Andhra Pradesh) ನೆಲ್ಲೂರು ಜಿಲ್ಲೆಯಲ್ಲಿ 32 ವರ್ಷದ ವ್ಯಕ್ತಿ ತನ್ನ 4 ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

32 ವರ್ಷದ ವ್ಯಕ್ತಿ ಧಾರ್ಮಿಕ ಕ್ರಿಯೆಯ ಭಾಗವಾಗಿ ತಮ್ಮ ನಾಲ್ಕು ವರ್ಷದ ಮಗಳ ಬಾಯಿಯಲ್ಲಿ ಕುಂಕುಮವನ್ನು ತುಂಬಿದ್ದರು. ಅದಾದ ಒಂದೇ ಗಂಟೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ. ಆರೋಪಿ ಕಂದಾ ವೇಣುಗೋಪಾಲ್ ವ್ಯಾಪಾರದಲ್ಲಿ ನಷ್ಟವನ್ನು ಅನುಭವಿಸಿದ್ದರಿಂದ ಕಂಗಾಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಟ-ಮಂತ್ರದ ಮೊರೆ ಹೋಗಿದ್ದ ಆತ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ತನ್ನ ಅತ್ತೆಯ ಮನೆಯಿಂದ ಮರಳಿ ಕರೆತಂದ್ದ. ಆತನಿಗೆ ನಷ್ಟವನ್ನುಂಟುಮಾಡುತ್ತದೆ ಎನ್ನಲಾಗಿದ್ದ ದುಷ್ಟ ಶಕ್ತಿಗಳನ್ನು ಓಡಿಸಲು ಮನೆಯಲ್ಲಿ ಪೂಜೆಯನ್ನು ಇಟ್ಟುಕೊಂಡಿದ್ದ. (source)

ಇದನ್ನೂ ಓದಿ: Shocking News: ರೆಸ್ಟೋರೆಂಟ್​​ನಲ್ಲಿ ಮೋಮೋಸ್ ತಿನ್ನುವಾಗ​ ಗಂಟಲಲ್ಲಿ ಸಿಕ್ಕಿ ವ್ಯಕ್ತಿ ಸಾವು!

ಈ ವೇಳೆ ಬುಧವಾರ ಬೆಳಗ್ಗೆ ವೇಣುಗೋಪಾಲ್ ತಮ್ಮ ಪೂಜಾ ಕೊಠಡಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಆರಂಭಿಸಿದ್ದಾಗ ಈ ಘಟನೆ ನಡೆದಿದೆ. ತನ್ನ ಹೆಣ್ಣುಮಕ್ಕಳನ್ನು ಕರೆದು ಅವರ ಮೇಲೆ ಅರಿಶಿನ ನೀರನ್ನು ಎರಚಲು ಪ್ರಾರಂಭಿಸಿದ. ನಂತರ ಸಣ್ಣ ಮಗಳ ಬಾಯಿ ತೆರೆಯಲು ಹೇಳಿ ಕುಂಕುಮವನ್ನು ತುಂಬಿದ. ಅವಳು ಬೇಡಬೇಡವೆಂದರೂ ಕೇಳದೆ ಕುಂಕುಮವನ್ನು ಬಲವಂತವಾಗಿ ತಿನ್ನುವಂತೆ ಮಾಡಿದ. ಇದಾದ ನಂತರ ಆ ಹುಡುಗಿ ಉಸಿರುಗಟ್ಟಿ ಜೋರಾಗಿ ಅಳಲು ಪ್ರಾರಂಭಿಸಿದ್ದಳು. ಬಳಿಕ ಅವಳನ್ನು ಒಳಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆಕೆ ಪ್ರಜ್ಞಾಹೀನಳಾಗಿದ್ದಳು.

ನಂತರ ಆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಚೆನ್ನೈಗೆ ಕಳುಹಿಸಲಾಗಿತ್ತು. ಆದರೆ, ಮರುದಿನ ಬೆಳಗ್ಗೆ ಆಕೆ ಚೆನ್ನೈನಲ್ಲಿ ಕೊನೆಯುಸಿರೆಳೆದಳು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ