AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Margadarsi Chit Fund: ಮಾರ್ಗದರ್ಶಿ ಚಿಟ್​ ಫಂಡ್​ನ 793 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆಂಧ್ರ ಪ್ರದೇಶ ಸರ್ಕಾರ ಆದೇಶ

ಮಾರ್ಗದರ್ಶಿ ಚಿಟ್​ಫಂಡ್​(Margadarshi Chit Fund)ನ 793 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶಿಸಿದೆ

Margadarsi Chit Fund: ಮಾರ್ಗದರ್ಶಿ ಚಿಟ್​ ಫಂಡ್​ನ 793 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆಂಧ್ರ ಪ್ರದೇಶ ಸರ್ಕಾರ ಆದೇಶ
ರಾಮೋಜಿ ರಾವ್
ನಯನಾ ರಾಜೀವ್
|

Updated on: May 30, 2023 | 10:19 AM

Share

ಮಾರ್ಗದರ್ಶಿ ಚಿಟ್​ಫಂಡ್​(Margadarsi Chit Fund)ನ 793 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶಿಸಿದೆ.  ಮಾರ್ಗದರ್ಶಿ ಚಿಟ್​ಫಂಡ್​ಗಳ ಚಂದಾದಾರರು ಹಾಗೂ ಠೇವಣಿದಾರರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಚಿಟ್​ಫಂಡ್​ಗಳಿಗೆ ಸೇರಿದ 793.50 ಕೋಟಿ ರೂ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಿಐಡಿಗೆ ಅವಕಾಶ ಮಾಡಿಕೊಟ್ಟಿದೆ. ಅವರ ಪ್ರಕಾರ, ಹಣಕಾಸು ಅವ್ಯವಹಾರ ಮತ್ತು ಚಂದಾದಾರರ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಚಿಟ್ ಫಂಡ್ ಕಂಪನಿಯನ್ನು ತನಿಖೆ ನಡೆಸುತ್ತಿರುವ ಸಿಐಡಿ ಮುಖ್ಯಸ್ಥ ಎನ್ ಸಂಜಯ್ ಅವರಿಂದ ರಾಜ್ಯ ಸರ್ಕಾರವು ಮನವಿಯನ್ನು ಸ್ವೀಕರಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ.

ಎಂಸಿಎಫ್‌ಪಿಎಲ್ ಅಧ್ಯಕ್ಷ ಸಿಎಚ್ ರಾಮೋಜಿರಾವ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶೈಲಜಾ ಕಿರಣ್ ಅವರ ವಿರುದ್ಧ ದೂರು ದಾಖಲಾಗಿದೆ. ಇವುಗಳಲ್ಲಿ ಮಾರ್ಗದರ್ಶಿ ಚಿಟ್​ಫಂಡ್ ನಗದು, ಬ್ಯಾಂಕ್​ ಖಾತೆಗಳಲ್ಲಿನ ಹಣ ಹಾಗೂ ನಿಯಮಗಳಿಗೆ ವಿರುದ್ಧವಾಗಿ ಮ್ಯೂಚುವಲ್​ ಫಂಡ್​ಗಳಲ್ಲಿ ಮಾಡಿರುವ ಹೂಡಿಕೆಗಳು ಕೂಡ ಸೇರಿವೆ.

ಚಿಟ್ ಚಂದಾದಾರರ ಮೊತ್ತವನ್ನು ಪಾವತಿಸುವ ಸ್ಥಿತಿಯಲ್ಲಿ ಮಾರ್ಗದರ್ಶಿ ಚಿಟ್​ಫಂಡ್​ಗಳು ಇಲ್ಲದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಠೇವಣಿದಾರರ ಹಕ್ಕುಗಳ ಸಂರಕ್ಷಣಾ ಕಾಯ್ದೆ 1999ರ ಅಡಿಯಲ್ಲಿ ಗೃಹ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ.

50 ಬ್ಯಾಂಕ್​ಗಳು ಹಾಗೂ ಮ್ಯೂಚುವಲ್ ಫಂಡ್ ಕಂಪನಿಗೂ ಮಾಹಿತಿ ನೀಡಲಾಗಿದೆ. ಬ್ಯಾಂಕುಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಹಣವನ್ನು ಬೇರೆಡೆಗೆ ತಿರುಗಿಸದೆ ಠೇವಣಿದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೇಂದ್ರ ಚಿಟ್​ ಫಂಡ್ ಕಾಯ್ದೆಯನ್ನು ಉ್ಲಲಂಘಿಸಿ ಮಾರ್ಗದರ್ಶಿ ಚಿಟ್​ ಫಂಡ್​ಗಳು ದಶಕಗಳಿಂದ ಹಣಕಾಸು ಅವ್ಯವಹಾರ ನಡೆಸುತ್ತಿರುವುದು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ತಪಾಸಣೆಯಿಂದ ತಿಳಿದುಬಂದಿದೆ.

ಕಳೆದ ವರ್ಷ ಡಿಸೆಂಬರ್​ನಿಂದ ರಾಜ್ಯದಲ್ಲಿ ಹೊಸ ಚಿಟ್​ಗಳನ್ನು ನೀಡುವುದನ್ನು ನಿಲ್ಲಿಸಿವೆ. 6 ತಿಂಗಳಿನಲ್ಲಿ 400 ಕೋಟಿ ರೂ. ವಹಿವಾಟು ಸ್ಥಗಿತಗೊಂಡಿದೆ. ಮತ್ತೊಂದೆಡೆ ಇವುಗಳನ್ನು ಪರಿಶೀಲಿಸಿದ ಸಿಐಡಿ ಮಾರ್ಗದರ್ಶಿ ಚಿಟ್ ಫಂಡ್​ಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡುವಂತೆ ಸರ್ಕಾರವನ್ನು ಕೋರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!