ತಿರುಪತಿ ಟಿಟಿಡಿ‌ ಬೋರ್ಡ್ ಅಧ್ಯಕ್ಷರಾಗಿ ಸಿಎಂ ಜಗನ್ ಸಂಬಂಧಿ​ ಸುಬ್ಬಾರೆಡ್ಡಿ ಮರು ನೇಮಕ

ವೈ.ವಿ ಸುಬ್ಬಾರೆಡ್ಡಿ ಅವರ 2 ವರ್ಷದ ಅಧಿಕಾರ ಈ ವರ್ಷ (2021) ಜೂನ್ ತಿಂಗಳಲ್ಲಿಯೇ ಅಂತ್ಯವಾಗಬೇಕಾಗಿತ್ತು. ಆದರೆ ಮರು ನೇಮಕದೊಂದಿಗೆ ವೈ.ವಿ ಸುಬ್ಬಾರೆಡ್ಡಿ ಮತ್ತೆ ಟಿಟಿಡಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ತಿರುಪತಿ ಟಿಟಿಡಿ‌ ಬೋರ್ಡ್ ಅಧ್ಯಕ್ಷರಾಗಿ ಸಿಎಂ ಜಗನ್ ಸಂಬಂಧಿ​ ಸುಬ್ಬಾರೆಡ್ಡಿ ಮರು ನೇಮಕ
ವೈ.ವಿ ಸುಬ್ಬಾರೆಡ್ಡಿ
Follow us
| Updated By: preethi shettigar

Updated on:Aug 09, 2021 | 9:14 AM

ತಿರುಪತಿ: ಆಂಧ್ರಪ್ರದೇಶದ ಸರ್ಕಾರ ನಿನ್ನೆ ( ಆಗಸ್ಟ್ 8 ) ತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ ( ಟಿಟಿಡಿ) ಅಧ್ಯಕ್ಷರನ್ನಾಗಿ ವೈ.ವಿ ಸುಬ್ಬಾರೆಡ್ಡಿಯವರನ್ನು ಮರು ನೇಮಕ ಮಾಡಿದೆ. ವೈ.ವಿ ಸುಬ್ಬಾರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿಯವರ ಸಂಬಂಧಿಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಮತ್ತೊಮ್ಮೆ ಟಿಟಿಡಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ವೈ.ವಿ ಸುಬ್ಬಾರೆಡ್ಡಿ ಅವರ 2 ವರ್ಷದ ಅಧಿಕಾರ ಈ ವರ್ಷ (2021) ಜೂನ್ ತಿಂಗಳಲ್ಲಿಯೇ ಅಂತ್ಯವಾಗಬೇಕಾಗಿತ್ತು. ಆದರೆ ಮರು ನೇಮಕದೊಂದಿಗೆ ವೈ.ವಿ ಸುಬ್ಬಾರೆಡ್ಡಿ ಮತ್ತೆ ಟಿಟಿಡಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶೀಘ್ರ ಟಿಟಿಡಿ ಬೋರ್ಡ್ ಸದಸ್ಯರನ್ನು ನೇಮಿಸಲಿರುವ ಸರ್ಕಾರ ನಿನ್ನೆ ಈ ವಿಚಾರವಾಗಿ ಪ್ರಧಾನ ಕಾರ್ಯದರ್ಶಿ ಜಿ. ವಾಣಿ ಮೋಹನ್ ಆದೇಶ ಹೋರಡಿಸಿದ್ದು, ನೂತನ ಟಿಟಿಡಿ ಆಡಳಿತ ಮಂಡಳಿಯ ಇತರ ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ತಿರುಪತಿ ಹುಂಡಿಯಲ್ಲಿ ಅಧಿಕ ಪ್ರಮಾಣದ ಆದಾಯ ಸಂಗ್ರಹ ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24 ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ನಿನ್ನೆ (ಆಗಸ್ಟ್, 08) 2.50 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 20,466 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 8610 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಇದನ್ನೂ ಓದಿ: Infosys Sudha Murty: ಇದೇನು ಇನ್ಫೋಸಿಸ್ ಸುಧಾ ಮೂರ್ತಿ ತಿರುಪತಿ ಟಿಟಿಡಿ ಮಂಡಳಿ ಅಧ್ಯಕ್ಷರಾಗಿ ನೇಮಕವಾದರಾ!?

Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ

Published On - 8:31 am, Mon, 9 August 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ