AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್

Chandrababu Naidu: ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಲಾಗಿದೆ. ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ, ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದರು.

ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್
ಚಂದ್ರಬಾಬು ನಾಯ್ಡು
TV9 Web
| Edited By: |

Updated on: Oct 09, 2023 | 6:37 PM

Share

ಹೈದರಾಬಾದ್ ಅಕ್ಟೋಬರ್ 09: ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರು ಸಲ್ಲಿಸಿದ್ದ ಮೂರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High Court) ಸೋಮವಾರ ವಜಾಗೊಳಿಸಿದೆ. 2014-19ರ ಅವರ ಸರ್ಕಾರದ ಅವಧಿಯಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 9 ರಂದು ನಂದ್ಯಾಲ್‌ನಿಂದ ರಾಜ್ಯ ಸಿಐಡಿಯಿಂದ ಬಂಧಿಸಲ್ಪಟ್ಟ ನಂತರ ಅವರು ಅಮರಾವತಿ ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಲಾಗಿದೆ. ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ, ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದರು.

ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಮೊದಲು ನಾಯ್ಡು ಅವರನ್ನು ಸೆಪ್ಟೆಂಬರ್ 10 ರಂದು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಿತು. ನ್ಯಾಯಾಲಯದ ಆದೇಶದ ನಂತರ ಅವರನ್ನು ವಿಜಯವಾಡದಿಂದ 200 ಕಿಮೀ ದೂರದಲ್ಲಿರುವ ರಾಜಮಂಡ್ರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಆಪಾದಿತ ಹಗರಣ ಪ್ರಕರಣದಲ್ಲಿ ಅಕ್ಟೋಬರ್ 5 ರಂದು ಎಸಿಬಿ ನ್ಯಾಯಾಲಯವು ಅಕ್ಟೋಬರ್ 19 ರವರೆಗೆ ಈ ಬಂಧನವನ್ನು ವಿಸ್ತರಿಸಿತು. ಸೆಪ್ಟೆಂಬರ್ 22 ರಂದು ಹೈಕೋರ್ಟ್ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ನಾಯ್ಡು ಅವರ ಮನವಿಯನ್ನು ವಜಾಗೊಳಿಸಿತು. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಪ್ರಕಾರ ರಾಜ್ಯಪಾಲರಿಂದ ಪೂರ್ವಾನುಮತಿ ಪಡೆಯಲು ಸಿಐಡಿ ವಿಫಲವಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಆದಾಗ್ಯೂ, ನ್ಯಾಯಮೂರ್ತಿ ಕೆ ಶ್ರೀನಿವಾಸ ರೆಡ್ಡಿ ಅವರ ಪೀಠವು ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿಯು ತನಿಖೆಗೆ ಅನಗತ್ಯವಾಗಿತ್ತು ಏಕೆಂದರೆ ಸಾರ್ವಜನಿಕ ನಿಧಿಯ ಬಳಕೆ, ವೈಯಕ್ತಿಕ ಲಾಭಕ್ಕಾಗಿ, ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ಒಂದು ಕಾಯಿದೆಯನ್ನು ರೂಪಿಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ:  ಚಂದ್ರಬಾಬು ನಾಯ್ಡು ಅವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ: ಅಸಾದುದ್ದೀನ್ ಓವೈಸಿ

ಆರ್ಥಿಕ ಅಪರಾಧಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಈ ಆರಂಭಿಕ ಹಂತದಲ್ಲಿ ತನಿಖೆಗೆ ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಒಪ್ಪಿಕೊಂಡಿದೆ. ಈ ತೀರ್ಪನ್ನು ಪ್ರಶ್ನಿಸಿ, ಟಿಡಿಪಿ ನಾಯಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ