AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿದ್ದ ಗಂಡಸರು ಹಣ ದೋಚಲು ಬಂದಾಗ ಮಹಿಳೆ ತಡೆದಿದ್ದಕ್ಕೆ ಅತ್ಯಾಚಾರ ನಡೆದಿದೆ: ವಿವಾದಾತ್ಮಕ ಹೇಳಿಕೆ ನೀಡಿದ ಆಂಧ್ರ ಪ್ರದೇಶದ ಗೃಹ ಸಚಿವೆ

ಮದ್ಯದ ಅಮಲಿನಲ್ಲಿದ್ದ ಗಂಡಸರು ಮಹಿಳೆಯ ಪತಿಯನ್ನು ದೋಚುವ ಉದ್ದೇಶದಿಂದ ದಾಳಿ ನಡೆಸಿದ್ದರು. ಈ ಹೊತ್ತಲ್ಲಿ ಮಹಿಳೆ ಮಧ್ಯಪ್ರವೇಶಿಸಿದಾಗ ಅನಿರೀಕ್ಷಿತವಾಗಿ ಅತ್ಯಾಚಾರ ನಡೆದಿದೆ ಎಂದಿದ್ದಾರೆ ಸಚಿವೆ.

ಮದ್ಯದ ಅಮಲಿನಲ್ಲಿದ್ದ ಗಂಡಸರು ಹಣ ದೋಚಲು ಬಂದಾಗ ಮಹಿಳೆ ತಡೆದಿದ್ದಕ್ಕೆ ಅತ್ಯಾಚಾರ ನಡೆದಿದೆ: ವಿವಾದಾತ್ಮಕ ಹೇಳಿಕೆ  ನೀಡಿದ ಆಂಧ್ರ ಪ್ರದೇಶದ ಗೃಹ ಸಚಿವೆ
ತಾನೆತಿ ವನಿತಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: May 05, 2022 | 4:02 PM

Share

ಅಮರಾವತಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಗಳ ಬಗ್ಗೆಆಂಧ್ರಪ್ರದೇಶದ (Andhra Pradesh) ನೂತನ ಗೃಹ ಸಚಿವೆ ತಾನೆತಿ ವನಿತಾ (Taneti Vanitha) ಅವರು ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ. ಮೇ 1 ರಂದು 25 ವರ್ಷದ ಗರ್ಭಿಣಿ ಮೇಲೆ ರೇಪಲ್ಲೆ ರೈಲು ನಿಲ್ದಾಣದಲ್ಲಿ (Repalle railway station) ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ಹೇಳಿಕೆ ನೀಡಿ ಸಚಿವೆ ಅತ್ಯಾಚಾರ ಉದ್ದೇಶಪೂರ್ವ ನಡೆದಿದ್ದಲ್ಲ, ಅನಿರೀಕ್ಷಿತ ಸಂದರ್ಭಗಳಲ್ಲಿ ಹಾಗೆ ಸಂಭವಿಸಿದೆ ಎಂದಿದ್ದಾರೆ . ಈ ಹಿಂದೆ ವೈಜಾಗ್‌ನಲ್ಲಿ ಅಪ್ರಾಪ್ತರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಸಚಿವೆ ವನಿತಾ ಅವರು ಮಗುವಿನ ಸುರಕ್ಷತೆಯ ಜವಾಬ್ದಾರಿ ತಾಯಿಯದ್ದು ಎಂದಿದ್ದರು. ಅತ್ಯಾಚಾರದ ಘಟನೆಗಳಿಗೆ ಸಚಿವೆ “ಮಾನಸಿಕ ಪರಿಸ್ಥಿತಿ” ಮತ್ತು ಬಡತನವನ್ನು ದೂಷಿಸಿದ್ದಾರೆ. ಆರೋಪಿಗಳು ಅತ್ಯಾಚಾರ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ಮದ್ಯದ ಅಮಲಿನಲ್ಲಿದ್ದ ಗಂಡಸರು ಮಹಿಳೆಯ ಪತಿಯನ್ನು ದೋಚುವ ಉದ್ದೇಶದಿಂದ ದಾಳಿ ನಡೆಸಿದ್ದರು. ಈ ಹೊತ್ತಲ್ಲಿ ಮಹಿಳೆ ಮಧ್ಯಪ್ರವೇಶಿಸಿದಾಗ ಅನಿರೀಕ್ಷಿತವಾಗಿ ಅತ್ಯಾಚಾರ ನಡೆದಿದೆ ಎಂದಿದ್ದಾರೆ ಸಚಿವೆ. ಮಹಿಳೆ ಪತಿಯ ಮೇಲಿನ ಹಲ್ಲೆಯನ್ನು ತಡೆಯಲು ಯತ್ನಿಸಿದಳು, ಆಗ ಅನಿರೀಕ್ಷಿತ ರೀತಿಯಲ್ಲಿ ಕೆಲವು ಘಟನೆಗಳು ನಡೆದವು. ಘಟನೆ ನಡೆದಾಗ ರೈಲ್ವೆ ಪೊಲೀಸರು ಸಹಾಯಕ್ಕೆ ಸಿಗಲಿಲ್ಲ ಎಂದು ಸಂತ್ರಸ್ತೆಯ ಪತಿ ಹೇಳಿದ್ದರು.ಆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ ರೈಲ್ವೇ ಪೋಲೀಸ್ ಪಡೆಗಳು ಲಭ್ಯವಾಗದಿರುವುದನ್ನು ದೂಷಿಸಲಾಗುವುದಿಲ್ಲ. ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದಿದ್ದಾರೆ.

ಪ್ರತಿಪಕ್ಷ ತೆಲುಗು ದೇಶಂ ಪಕ್ಷವು ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆಗಳು ಬೇಜವಾಬ್ದಾರಿ ಎಂದು ಬಣ್ಣಿಸಿದೆ. ಎರಡು ವಾರಗಳಲ್ಲಿ ಆಂಧ್ರ ಪ್ರದೇಶದ ರೈಲು ನಿಲ್ದಾಣಗಳಲ್ಲಿ ಎರಡು ಅತ್ಯಾಚಾರ ಘಟನೆಗಳು ನಡೆದಿವೆ. ಏಪ್ರಿಲ್ 16 ರಂದು ಗುರಜಾಲ ರೈಲು ನಿಲ್ದಾಣದಲ್ಲಿ ಮಹಾರಾಷ್ಟ್ರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?