ಆಂಧ್ರಪ್ರದೇಶ: ಕೇಬಲ್ ಆಪರೇಟರ್​ನಿಂದ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ, ವಿಡಿಯೋ ವೈರಲ್

ಕೇಬಲ್ ಆಪರೇಟರ್​ ಒಬ್ಬ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ ನಡೆಸಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆತ ಮಹಿಳೆ ಚಿನ್ನದ ಸರವನ್ನು ಕದಿಯುವ ಯತ್ನ ಮಾಡಿದ್ದಾನೆ, ಆಕೆ ಪ್ರತಿಭಟಿಸಲು ಯತ್ನಿಸಿದಾಗ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಎಲ್ಲವೂ ಸೆರೆಯಾಗಿದೆ, ಕುತ್ತಿಗೆಗೆ ಟವೆಲ್​ ಸುತ್ತಿ ಮಹಿಳೆಯ ಹತ್ಯೆಗೆ ಯತ್ನಿಸಿರುತ್ತಿರುವುದು ಕಂಡುಬಂದಿದೆ.

ಆಂಧ್ರಪ್ರದೇಶ: ಕೇಬಲ್ ಆಪರೇಟರ್​ನಿಂದ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ, ವಿಡಿಯೋ ವೈರಲ್
ಸರಗಳ್ಳತನImage Credit source: India Today
Follow us
|

Updated on: Jan 30, 2024 | 11:58 AM

ಕೇಬಲ್ ಆಪರೇಟರ್​ ಒಬ್ಬ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ ನಡೆಸಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆತ ಮಹಿಳೆ ಚಿನ್ನದ ಸರವನ್ನು ಕದಿಯುವ ಯತ್ನ ಮಾಡಿದ್ದಾನೆ, ಆಕೆ ಪ್ರತಿಭಟಿಸಲು ಯತ್ನಿಸಿದಾಗ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಎಲ್ಲವೂ ಸೆರೆಯಾಗಿದೆ, ಕುತ್ತಿಗೆಗೆ ಟವೆಲ್​ ಸುತ್ತಿ ಮಹಿಳೆಯ ಹತ್ಯೆಗೆ ಯತ್ನಿಸಿರುತ್ತಿರುವುದು ಕಂಡುಬಂದಿದೆ.

ಪೊಲೀಸರ ಪ್ರಕಾರ, ಗವರಪಾಲೆಂ ಪಾರ್ಕ್ ಸೆಂಟರ್‌ನಲ್ಲಿ ವಾಸಿಸುವ ಕರ್ರಿ ಲಕ್ಷ್ಮಿ ನಾರಾಯಣಮ್ಮ ಅವರು ಕೇಬಲ್ ಆಪರೇಟರ್ ಗೋವಿಂದ್​ನನ್ನು ಕರೆಸಿದ್ದರು. ಆತ ಕೇಬಲ್ ಸರಿ ಮಾಡುವ ಬದಲು ಆಕೆಯ ಚಿನ್ನದ ಸರಕ್ಕೆ ಕಣ್ಣು ಹಾಕಿದ್ದ. ಘಟನೆ ಜನವರಿ 26ರ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಮಹಿಳೆಯ ಕೊರಳಲ್ಲಿ ಸುಮಾರು ಎಂಟು ತೊಲ ತೂಕದ ಚಿನ್ನದ ಸರ ಹಾಕಿಕೊಂಡಿದ್ದಳು ಎಂದು ಹೇಳಲಾಗುತ್ತಿದೆ.

ಇಂಡಿಯಾ ಟುಡೇ ವರದಿ ಪ್ರಕಾರ ಆರೋಪಿ ಗೋವಿಂದ್ ಕೇಬಲ್ ಟೆಕ್ನಿಷಿಯನ್ ಆಗಿದ್ದು, ಕೆಲಸದ ನಿಮಿತ್ತ ಮಹಿಳೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ.

ಮತ್ತಷ್ಟು ಓದಿ: ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಮನೆಯಲ್ಲಿ ಮಹಿಳೆ ಒಂಟಿಯಾಗಿದ್ದನ್ನು ಕಂಡು ಗೋವಿಂದ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಆಕೆಯ ಚಿನ್ನದ ಸರ ಕದಿಯಲು ಯತ್ನಿಸಿದ್ದಾನೆ. ಮಹಿಳೆ ಹೇಗೋ ತಪ್ಪಿಸಿಕೊಂಡಿದ್ದಾರೆ.

ಮಹಿಳೆಯ ಕುಟುಂಬದವರ ದೂರಿನ ಮೇರೆಗೆ ಸೆಕ್ಷನ್ 307, ಮತ್ತು ಸೆಕ್ಷನ್ 394 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ