AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಕೇಬಲ್ ಆಪರೇಟರ್​ನಿಂದ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ, ವಿಡಿಯೋ ವೈರಲ್

ಕೇಬಲ್ ಆಪರೇಟರ್​ ಒಬ್ಬ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ ನಡೆಸಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆತ ಮಹಿಳೆ ಚಿನ್ನದ ಸರವನ್ನು ಕದಿಯುವ ಯತ್ನ ಮಾಡಿದ್ದಾನೆ, ಆಕೆ ಪ್ರತಿಭಟಿಸಲು ಯತ್ನಿಸಿದಾಗ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಎಲ್ಲವೂ ಸೆರೆಯಾಗಿದೆ, ಕುತ್ತಿಗೆಗೆ ಟವೆಲ್​ ಸುತ್ತಿ ಮಹಿಳೆಯ ಹತ್ಯೆಗೆ ಯತ್ನಿಸಿರುತ್ತಿರುವುದು ಕಂಡುಬಂದಿದೆ.

ಆಂಧ್ರಪ್ರದೇಶ: ಕೇಬಲ್ ಆಪರೇಟರ್​ನಿಂದ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ, ವಿಡಿಯೋ ವೈರಲ್
ಸರಗಳ್ಳತನImage Credit source: India Today
ನಯನಾ ರಾಜೀವ್
|

Updated on: Jan 30, 2024 | 11:58 AM

Share

ಕೇಬಲ್ ಆಪರೇಟರ್​ ಒಬ್ಬ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ ನಡೆಸಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆತ ಮಹಿಳೆ ಚಿನ್ನದ ಸರವನ್ನು ಕದಿಯುವ ಯತ್ನ ಮಾಡಿದ್ದಾನೆ, ಆಕೆ ಪ್ರತಿಭಟಿಸಲು ಯತ್ನಿಸಿದಾಗ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಎಲ್ಲವೂ ಸೆರೆಯಾಗಿದೆ, ಕುತ್ತಿಗೆಗೆ ಟವೆಲ್​ ಸುತ್ತಿ ಮಹಿಳೆಯ ಹತ್ಯೆಗೆ ಯತ್ನಿಸಿರುತ್ತಿರುವುದು ಕಂಡುಬಂದಿದೆ.

ಪೊಲೀಸರ ಪ್ರಕಾರ, ಗವರಪಾಲೆಂ ಪಾರ್ಕ್ ಸೆಂಟರ್‌ನಲ್ಲಿ ವಾಸಿಸುವ ಕರ್ರಿ ಲಕ್ಷ್ಮಿ ನಾರಾಯಣಮ್ಮ ಅವರು ಕೇಬಲ್ ಆಪರೇಟರ್ ಗೋವಿಂದ್​ನನ್ನು ಕರೆಸಿದ್ದರು. ಆತ ಕೇಬಲ್ ಸರಿ ಮಾಡುವ ಬದಲು ಆಕೆಯ ಚಿನ್ನದ ಸರಕ್ಕೆ ಕಣ್ಣು ಹಾಕಿದ್ದ. ಘಟನೆ ಜನವರಿ 26ರ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಮಹಿಳೆಯ ಕೊರಳಲ್ಲಿ ಸುಮಾರು ಎಂಟು ತೊಲ ತೂಕದ ಚಿನ್ನದ ಸರ ಹಾಕಿಕೊಂಡಿದ್ದಳು ಎಂದು ಹೇಳಲಾಗುತ್ತಿದೆ.

ಇಂಡಿಯಾ ಟುಡೇ ವರದಿ ಪ್ರಕಾರ ಆರೋಪಿ ಗೋವಿಂದ್ ಕೇಬಲ್ ಟೆಕ್ನಿಷಿಯನ್ ಆಗಿದ್ದು, ಕೆಲಸದ ನಿಮಿತ್ತ ಮಹಿಳೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ.

ಮತ್ತಷ್ಟು ಓದಿ: ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಮನೆಯಲ್ಲಿ ಮಹಿಳೆ ಒಂಟಿಯಾಗಿದ್ದನ್ನು ಕಂಡು ಗೋವಿಂದ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಆಕೆಯ ಚಿನ್ನದ ಸರ ಕದಿಯಲು ಯತ್ನಿಸಿದ್ದಾನೆ. ಮಹಿಳೆ ಹೇಗೋ ತಪ್ಪಿಸಿಕೊಂಡಿದ್ದಾರೆ.

ಮಹಿಳೆಯ ಕುಟುಂಬದವರ ದೂರಿನ ಮೇರೆಗೆ ಸೆಕ್ಷನ್ 307, ಮತ್ತು ಸೆಕ್ಷನ್ 394 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ