AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿ ಕಚ್ಚಿದರೆ ನಿರ್ಲಕ್ಷಿಸಬೇಡಿ, ನಾಯಿ ಕಡಿತದಿಂದ ತಂದೆ, ಮಗ ಸಾವು

ಸಾಕು ನಾಯಿ ಕಚ್ಚಿದರೆ ಎಂದೂ ನಿರ್ಲಕ್ಷಿಸಬೇಡಿ ಅದರಿಂದ ನಿಮ್ಮ ಪ್ರಾಣವೇ ಹೋಗುವ ಸಾಧ್ಯತೆ ಇರುತ್ತದೆ. ಆಂಧ್ರಪ್ರದೇಶದಲ್ಲಿ ಸಾಕು ನಾಯಿಯೊಂದು ಮನೆಯ ಮಾಲೀಕ ಹಾಗೂ ಮಗನಿಗೆ ಕಚ್ಚಿದ ಕಾರಣ ಕೆಲವು ದಿನಗಳಲ್ಲಿ ಇಬ್ಬರೂ ಕೂಡ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸಾಕು ನಾಯಿ ಕಚ್ಚಿದರೆ ನಿರ್ಲಕ್ಷಿಸಬೇಡಿ, ನಾಯಿ ಕಡಿತದಿಂದ ತಂದೆ, ಮಗ ಸಾವು
ನಾಯಿ ಕಡಿತImage Credit source: Truitt Law Offices
ನಯನಾ ರಾಜೀವ್
|

Updated on:Jun 27, 2024 | 8:19 AM

Share

ಸಾಕು ನಾಯಿಯನ್ನು ನೀವು ತುಂಬಾ ಪ್ರೀತಿಸುತ್ತೀರಿ ನಿಜ ಆದರೆ ನಾಯಿಗೆ ಸಿಟ್ಟು ತರಿಸುವುದು, ಅದರ ಬಾಯಿಗೆ ಬೆರಳು ಹಾಕುವುದು ಸೇರಿದಂತೆ ಇಂಥಾ ಕೆಲಸಗಳನ್ನು ಎಂದೂ ಮಾಡಬೇಡಿ, ಒಂದೊಮ್ಮೆ ನಾಯಿ ಕಚ್ಚಿದರೆ ಅದನ್ನು ನಿರ್ಲಕ್ಷಿಸಲೂ ಬೇಡಿ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಂದೆ ಹಾಗೂ ಮಗನ ಮೇಲೆ ನಾಯಿ ದಾಳಿ ನಡೆಸಿದ್ದು, ಕೆಲವೇ ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ವಿಶಾಖಪಟ್ಟಣಂನ ಭೀಮ್ಲಿ ನಿವಾಸಿಗಳಾದ 59 ವರ್ಷದ ನರಸಿಂಗರಾವ್ ಮತ್ತು ಅವರ 27 ವರ್ಷದ ಮಗ ಭಾರ್ಗವ್​ಗೆ ಒಂದು ವಾರದ ಹಿಂದೆ ಸಾಕು ನಾಯಿ ಕಚ್ಚಿತ್ತು, ಆದರೆ ಅವರು ವೈದ್ಯಕೀಯ ಚಿಕಿತ್ಸೆ ಪಡೆದಿರಲಿಲ್ಲ.

ಘಟನೆ ನಡೆದು ಎರಡು ದಿನಗಳ ಬಳಿ ನಾಯಿ ಸಾವನ್ನಪ್ಪಿದ್ದು ಆಗ ಆ್ಯಂಟಿ ರೇಬಿಸ್​ ಚುಚ್ಚುಮದ್ದು ಪಡೆಯಲು ಆಸ್ಪತ್ರೆಗೆ ಹೋಗಿದ್ದರು, ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ರೇಬಿಸ್ ಅವರ ಮೆದುಳು ಹಾಗೂ ಯಕೃತ್ತಿಗೆ ವ್ಯಾಪಿಸಿತ್ತು, ಚಿಕಿತ್ಸೆ ಒಳಗಾಗಿದ್ದರೂ ಇಬ್ಬರೂ ಮಾರಣಾಂತಿಕ ಸೋಂಕಿಗೆ ಬಲಿಯಾದರು.

ಮತ್ತಷ್ಟು ಓದಿ: ವಿಡಿಯೋ: ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳಿಂದ ದಾಳಿ, ಚಪ್ಪಲಿಯನ್ನು ಬೀಸುತ್ತಾ ತಪ್ಪಿಸಿಕೊಂಡ ಮಹಿಳೆ

ಹೈದರಾಬಾದ್‌ನ ಮಣಿಕೊಂಡದ ಚಿತ್ರಪುರಿ ಹಿಲ್ಸ್‌ನಲ್ಲಿ ಬೆಳಗಿನ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ 15 ಬೀದಿ ನಾಯಿಗಳು ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ . ಮುಂಜಾನೆ ಈ ದಾಳಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆ ಚಪ್ಪಲಿ ಹಿಡಿದು ನಾಯಿಗಳ ಕಡೆಗೆ ಕೈ ಬೀಸಿದ ಕಾರಣ ಹೇಗೋ ಆಕೆ ದಾಳಿಯಿಂದ ತಪ್ಪಿಸಿಕೊಂಡಿದ್ದರು.  ತಮ್ಮ ಪತ್ನಿ ನಾಯಿಗಳ ದಾಳಿಯಿಂದ ಬದುಕುಳಿದಿರುವುದೇ ಸಮಾಧಾನ ಎಂದು ಆಕೆಯ ಪತಿ ಹೇಳಿದ್ದರು. ಬೀದಿ ನಾಯಿಗಳಿಗೆ ಆಹಾರ ಕೊಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ಸಾಕು ನಾಯಿಯೇ ಮಾಲೀಕರಿಗೆ ಕಚ್ಚಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:17 am, Thu, 27 June 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ