ಸಾಕು ನಾಯಿ ಕಚ್ಚಿದರೆ ನಿರ್ಲಕ್ಷಿಸಬೇಡಿ, ನಾಯಿ ಕಡಿತದಿಂದ ತಂದೆ, ಮಗ ಸಾವು

ಸಾಕು ನಾಯಿ ಕಚ್ಚಿದರೆ ಎಂದೂ ನಿರ್ಲಕ್ಷಿಸಬೇಡಿ ಅದರಿಂದ ನಿಮ್ಮ ಪ್ರಾಣವೇ ಹೋಗುವ ಸಾಧ್ಯತೆ ಇರುತ್ತದೆ. ಆಂಧ್ರಪ್ರದೇಶದಲ್ಲಿ ಸಾಕು ನಾಯಿಯೊಂದು ಮನೆಯ ಮಾಲೀಕ ಹಾಗೂ ಮಗನಿಗೆ ಕಚ್ಚಿದ ಕಾರಣ ಕೆಲವು ದಿನಗಳಲ್ಲಿ ಇಬ್ಬರೂ ಕೂಡ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸಾಕು ನಾಯಿ ಕಚ್ಚಿದರೆ ನಿರ್ಲಕ್ಷಿಸಬೇಡಿ, ನಾಯಿ ಕಡಿತದಿಂದ ತಂದೆ, ಮಗ ಸಾವು
ನಾಯಿ ಕಡಿತ
Image Credit source: Truitt Law Offices

Updated on: Jun 27, 2024 | 8:19 AM

ಸಾಕು ನಾಯಿಯನ್ನು ನೀವು ತುಂಬಾ ಪ್ರೀತಿಸುತ್ತೀರಿ ನಿಜ ಆದರೆ ನಾಯಿಗೆ ಸಿಟ್ಟು ತರಿಸುವುದು, ಅದರ ಬಾಯಿಗೆ ಬೆರಳು ಹಾಕುವುದು ಸೇರಿದಂತೆ ಇಂಥಾ ಕೆಲಸಗಳನ್ನು ಎಂದೂ ಮಾಡಬೇಡಿ, ಒಂದೊಮ್ಮೆ ನಾಯಿ ಕಚ್ಚಿದರೆ ಅದನ್ನು ನಿರ್ಲಕ್ಷಿಸಲೂ ಬೇಡಿ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಂದೆ ಹಾಗೂ ಮಗನ ಮೇಲೆ ನಾಯಿ ದಾಳಿ ನಡೆಸಿದ್ದು, ಕೆಲವೇ ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ವಿಶಾಖಪಟ್ಟಣಂನ ಭೀಮ್ಲಿ ನಿವಾಸಿಗಳಾದ 59 ವರ್ಷದ ನರಸಿಂಗರಾವ್ ಮತ್ತು ಅವರ 27 ವರ್ಷದ ಮಗ ಭಾರ್ಗವ್​ಗೆ ಒಂದು ವಾರದ ಹಿಂದೆ ಸಾಕು ನಾಯಿ ಕಚ್ಚಿತ್ತು, ಆದರೆ ಅವರು ವೈದ್ಯಕೀಯ ಚಿಕಿತ್ಸೆ ಪಡೆದಿರಲಿಲ್ಲ.

ಘಟನೆ ನಡೆದು ಎರಡು ದಿನಗಳ ಬಳಿ ನಾಯಿ ಸಾವನ್ನಪ್ಪಿದ್ದು ಆಗ ಆ್ಯಂಟಿ ರೇಬಿಸ್​ ಚುಚ್ಚುಮದ್ದು ಪಡೆಯಲು ಆಸ್ಪತ್ರೆಗೆ ಹೋಗಿದ್ದರು, ಅಷ್ಟರಲ್ಲಾಗಲೇ ಕಾಲ ಮಿಂಚಿತ್ತು. ರೇಬಿಸ್ ಅವರ ಮೆದುಳು ಹಾಗೂ ಯಕೃತ್ತಿಗೆ ವ್ಯಾಪಿಸಿತ್ತು, ಚಿಕಿತ್ಸೆ ಒಳಗಾಗಿದ್ದರೂ ಇಬ್ಬರೂ ಮಾರಣಾಂತಿಕ ಸೋಂಕಿಗೆ ಬಲಿಯಾದರು.

ಮತ್ತಷ್ಟು ಓದಿ: ವಿಡಿಯೋ: ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳಿಂದ ದಾಳಿ, ಚಪ್ಪಲಿಯನ್ನು ಬೀಸುತ್ತಾ ತಪ್ಪಿಸಿಕೊಂಡ ಮಹಿಳೆ

ಹೈದರಾಬಾದ್‌ನ ಮಣಿಕೊಂಡದ ಚಿತ್ರಪುರಿ ಹಿಲ್ಸ್‌ನಲ್ಲಿ ಬೆಳಗಿನ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ 15 ಬೀದಿ ನಾಯಿಗಳು ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ . ಮುಂಜಾನೆ ಈ ದಾಳಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆ ಚಪ್ಪಲಿ ಹಿಡಿದು ನಾಯಿಗಳ ಕಡೆಗೆ ಕೈ ಬೀಸಿದ ಕಾರಣ ಹೇಗೋ ಆಕೆ ದಾಳಿಯಿಂದ ತಪ್ಪಿಸಿಕೊಂಡಿದ್ದರು.  ತಮ್ಮ ಪತ್ನಿ ನಾಯಿಗಳ ದಾಳಿಯಿಂದ ಬದುಕುಳಿದಿರುವುದೇ ಸಮಾಧಾನ ಎಂದು ಆಕೆಯ ಪತಿ ಹೇಳಿದ್ದರು. ಬೀದಿ ನಾಯಿಗಳಿಗೆ ಆಹಾರ ಕೊಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ಸಾಕು ನಾಯಿಯೇ ಮಾಲೀಕರಿಗೆ ಕಚ್ಚಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:17 am, Thu, 27 June 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us