AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಉಡ ಬೇಟೆಯಾಡಿದ ವ್ಯಕ್ತಿ ಬಂಧನ

ವಲ್ಲಂಪಾಡು ಗ್ರಾಮದ ಸೂರ್ಯನಾರಾಯಣನಿಗೆ ಪ್ರಾಣಿ ಬೇಟೆಯೆಂದರೆ ಒಲವು. ಇದರ ಭಾಗವಾಗಿ ಎರಡು ದಿನಗಳ ಹಿಂದೆ ವಲ್ಲಂಪಾಡು ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಉಡವನ್ನು ಬೇಟೆಯಾಡಿದ್ದರು. ಇದೆಲ್ಲದರಿಂದ ತೃಪ್ತರಾಗದ ಅವರು ಉಡ ಬೇಟೆಯ ದೃಶ್ಯಗಳನ್ನು ಸೆಲ್ ಫೋನ್​​ನಲ್ಲಿ ಚಿತ್ರೀಕರಿಸಿದ್ದಾರೆ

ಆಂಧ್ರಪ್ರದೇಶ: ಉಡ ಬೇಟೆಯಾಡಿದ ವ್ಯಕ್ತಿ ಬಂಧನ
ಉಡ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 18, 2023 | 2:51 PM

Share

ನಂದ್ಯಾಲ, ನವೆಂಬರ್ 17: ಮಾಂಸ ತಿಂದು ಕೊರಳಲ್ಲಿ ಎಲುಬು ಧರಿಸುವುದು ಎಂದರೆ ಇದೇನಾ? ಬೇಟೆಗಾರನೊಬ್ಬ ಕಾಡು ಪ್ರಾಣಿಯನ್ನು ಬೇಟೆಯಾಡಿ.. ನಂತರ ಬೇಟೆಯಾಡುವ ದೃಶ್ಯಗಳನ್ನು ತನ್ನ ಸೆಲ್ ಫೋನ್‌ನಲ್ಲಿ ಚಿತ್ರೀಕರಿಸಿ ತನ್ನ ಯೂಟ್ಯೂಬ್ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದಾನೆ. ಆ ವಿಡಿಯೊಗಳನ್ನು ನೋಡಿದ ಪ್ರಾಣಿ ಪ್ರಿಯರು ಬೆಚ್ಚಿಬಿದ್ದಿದ್ದಾರೆ. ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು(Forest Officers) ಕಳ್ಳ ಬೇಟೆಗಾರನ ಹುಡುಕಾಟ ಆರಂಭಿಸಿದ್ದಾರೆ. ಕೊನೆಗೆ ಕಳ್ಳ ಬೇಟೆಗಾರನನ್ನು ಹಿಡಿದು ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ. ಆಂಧ್ರಪ್ರದೇಶ (Andhra Pradesh) ನಂದ್ಯಾಲ (Nandyal)ಜಿಲ್ಲೆಯ ಕೋವೆಲಕುಂಟ್ಲ ಮಂಡಲದ ವಲ್ಲಂಪಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವಲ್ಲಂಪಾಡು ಗ್ರಾಮದ ಸೂರ್ಯನಾರಾಯಣನಿಗೆ ಪ್ರಾಣಿ ಬೇಟೆಯೆಂದರೆ ಒಲವು. ಇದರ ಭಾಗವಾಗಿ ಎರಡು ದಿನಗಳ ಹಿಂದೆ ವಲ್ಲಂಪಾಡು ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಉಡವನ್ನು ಬೇಟೆಯಾಡಿದ್ದರು. ಇದೆಲ್ಲದರಿಂದ ತೃಪ್ತರಾಗದ ಅವರು ಉಡ ಬೇಟೆಯ ದೃಶ್ಯಗಳನ್ನು ಸೆಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾರೆ. ಅವರು ಹೇಗೆ ಉಡ ಅನ್ನು ಬೇಟೆಯಾಡಿದರು ಎಂಬುದನ್ನು ವಿಡಿಯೊದಲ್ಲಿ ವಿವರಿಸುವುದನ್ನು ಚಿತ್ರೀಕರಿಸಲಾಗಿದೆ. ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅವುಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಈ ದೃಶ್ಯಗಳನ್ನು ನೋಡಿದ ಹೈದರಾಬಾದ್‌ನ ಸ್ಟ್ರೇ ಅನಿಮಲ್ ಫೌಂಡೇಶನ್ ಆಫ್ ಇಂಡಿಯಾ ಸಂಸ್ಥೆಯು ನಂದ್ಯಾಲ ಜಿಲ್ಲಾ ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಯೂಟ್ಯೂಬ್ ಚಾನೆಲ್‌ನಲ್ಲಿನ ದೃಶ್ಯಗಳನ್ನು ಆಧರಿಸಿ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶದ ಈ ಹಳ್ಳಿಯಲ್ಲಿ ಸುಮಾರು 200 ವರ್ಷಗಳಿಂದ ಇಲ್ಲ ದೀಪಾವಳಿ ಆಚರಣೆ

ವಲ್ಲಂಪಾಡು ಗ್ರಾಮಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಬೇಟೆಗಾರ ಸೂರ್ಯನಾರಾಯಣನನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಸೂರ್ಯನಾರಾಯಣ ಎಂಬಾತ ಉಡ ಬೇಟೆಯಾಡಿರುವುದು ಪತ್ತೆಯಾಗಿದ್ದು, ಆತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಾದ ನಂತರ ಅರಣ್ಯಾಧಿಕಾರಿಗಳು ಸೂರ್ಯನಾರಾಯಣನನ್ನು ಬಂಧಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ