ಆಂಧ್ರಪ್ರದೇಶ: ಉಡ ಬೇಟೆಯಾಡಿದ ವ್ಯಕ್ತಿ ಬಂಧನ

ವಲ್ಲಂಪಾಡು ಗ್ರಾಮದ ಸೂರ್ಯನಾರಾಯಣನಿಗೆ ಪ್ರಾಣಿ ಬೇಟೆಯೆಂದರೆ ಒಲವು. ಇದರ ಭಾಗವಾಗಿ ಎರಡು ದಿನಗಳ ಹಿಂದೆ ವಲ್ಲಂಪಾಡು ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಉಡವನ್ನು ಬೇಟೆಯಾಡಿದ್ದರು. ಇದೆಲ್ಲದರಿಂದ ತೃಪ್ತರಾಗದ ಅವರು ಉಡ ಬೇಟೆಯ ದೃಶ್ಯಗಳನ್ನು ಸೆಲ್ ಫೋನ್​​ನಲ್ಲಿ ಚಿತ್ರೀಕರಿಸಿದ್ದಾರೆ

ಆಂಧ್ರಪ್ರದೇಶ: ಉಡ ಬೇಟೆಯಾಡಿದ ವ್ಯಕ್ತಿ ಬಂಧನ
ಉಡ
Follow us
| Edited By: Rashmi Kallakatta

Updated on: Nov 18, 2023 | 2:51 PM

ನಂದ್ಯಾಲ, ನವೆಂಬರ್ 17: ಮಾಂಸ ತಿಂದು ಕೊರಳಲ್ಲಿ ಎಲುಬು ಧರಿಸುವುದು ಎಂದರೆ ಇದೇನಾ? ಬೇಟೆಗಾರನೊಬ್ಬ ಕಾಡು ಪ್ರಾಣಿಯನ್ನು ಬೇಟೆಯಾಡಿ.. ನಂತರ ಬೇಟೆಯಾಡುವ ದೃಶ್ಯಗಳನ್ನು ತನ್ನ ಸೆಲ್ ಫೋನ್‌ನಲ್ಲಿ ಚಿತ್ರೀಕರಿಸಿ ತನ್ನ ಯೂಟ್ಯೂಬ್ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದಾನೆ. ಆ ವಿಡಿಯೊಗಳನ್ನು ನೋಡಿದ ಪ್ರಾಣಿ ಪ್ರಿಯರು ಬೆಚ್ಚಿಬಿದ್ದಿದ್ದಾರೆ. ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು(Forest Officers) ಕಳ್ಳ ಬೇಟೆಗಾರನ ಹುಡುಕಾಟ ಆರಂಭಿಸಿದ್ದಾರೆ. ಕೊನೆಗೆ ಕಳ್ಳ ಬೇಟೆಗಾರನನ್ನು ಹಿಡಿದು ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ. ಆಂಧ್ರಪ್ರದೇಶ (Andhra Pradesh) ನಂದ್ಯಾಲ (Nandyal)ಜಿಲ್ಲೆಯ ಕೋವೆಲಕುಂಟ್ಲ ಮಂಡಲದ ವಲ್ಲಂಪಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವಲ್ಲಂಪಾಡು ಗ್ರಾಮದ ಸೂರ್ಯನಾರಾಯಣನಿಗೆ ಪ್ರಾಣಿ ಬೇಟೆಯೆಂದರೆ ಒಲವು. ಇದರ ಭಾಗವಾಗಿ ಎರಡು ದಿನಗಳ ಹಿಂದೆ ವಲ್ಲಂಪಾಡು ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಉಡವನ್ನು ಬೇಟೆಯಾಡಿದ್ದರು. ಇದೆಲ್ಲದರಿಂದ ತೃಪ್ತರಾಗದ ಅವರು ಉಡ ಬೇಟೆಯ ದೃಶ್ಯಗಳನ್ನು ಸೆಲ್ ಫೋನ್ ನಲ್ಲಿ ಚಿತ್ರೀಕರಿಸಿದ್ದಾರೆ. ಅವರು ಹೇಗೆ ಉಡ ಅನ್ನು ಬೇಟೆಯಾಡಿದರು ಎಂಬುದನ್ನು ವಿಡಿಯೊದಲ್ಲಿ ವಿವರಿಸುವುದನ್ನು ಚಿತ್ರೀಕರಿಸಲಾಗಿದೆ. ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅವುಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಈ ದೃಶ್ಯಗಳನ್ನು ನೋಡಿದ ಹೈದರಾಬಾದ್‌ನ ಸ್ಟ್ರೇ ಅನಿಮಲ್ ಫೌಂಡೇಶನ್ ಆಫ್ ಇಂಡಿಯಾ ಸಂಸ್ಥೆಯು ನಂದ್ಯಾಲ ಜಿಲ್ಲಾ ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಯೂಟ್ಯೂಬ್ ಚಾನೆಲ್‌ನಲ್ಲಿನ ದೃಶ್ಯಗಳನ್ನು ಆಧರಿಸಿ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶದ ಈ ಹಳ್ಳಿಯಲ್ಲಿ ಸುಮಾರು 200 ವರ್ಷಗಳಿಂದ ಇಲ್ಲ ದೀಪಾವಳಿ ಆಚರಣೆ

ವಲ್ಲಂಪಾಡು ಗ್ರಾಮಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಬೇಟೆಗಾರ ಸೂರ್ಯನಾರಾಯಣನನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಸೂರ್ಯನಾರಾಯಣ ಎಂಬಾತ ಉಡ ಬೇಟೆಯಾಡಿರುವುದು ಪತ್ತೆಯಾಗಿದ್ದು, ಆತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಾದ ನಂತರ ಅರಣ್ಯಾಧಿಕಾರಿಗಳು ಸೂರ್ಯನಾರಾಯಣನನ್ನು ಬಂಧಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ನದಿಯಲ್ಲಿ ಕಳಕೊಂಡಿದ್ದ ಸರ ಮೂಕಾಂಬಿಕೆಯ ಬೇಡಿದ್ದಕ್ಕೆ ತಕ್ಷಣ ಸಿಕ್ತು!
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​