AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಪ್ರೇಮ ಪ್ರಕರಣ, ಮಗಳಿಗೆ ನೇಣು ಬಿಗಿದು ಸುಟ್ಟು ಹಾಕಿದ್ದ ವ್ಯಕ್ತಿ ಪೊಲೀಸರಿಗೆ ಶರಣು

ಮಗಳನ್ನು ಕೊಂದು ಸುಟ್ಟು ಹಾಕಿದ್ದ ವ್ಯಕ್ತಿ ಇದೀಗ ಪೊಲೀಸರ ಮುಂದೆ ಶರಣಾಗಿದ್ದಾನೆ. ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಗಳು ಓರ್ವ ಯುವಕನ್ನು ಪ್ರೀತಿಸುತ್ತಿದ್ದಳು, ಇದಕ್ಕೆ ಅವರು ಒಪ್ಪಿರಲಿಲ್ಲ, ಆಕೆ ಆಗಾಗ ಆತನನ್ನು ಭೇಟಿಯಾಗುತ್ತಿದ್ದಳು. ಇಡೀ ಕುಟುಂಬದಲ್ಲಿ ಇವಳೊಬ್ಬಳೇ ವಿದ್ಯಾವಂತೆ ಆಕೆಯ ಮೇಲೆ ನೂರಾರು ಕನಸುಗಳನ್ನು ಪೋಷಕರು ಕಟ್ಟಿದ್ದರು. ಆದರೆ ಆಕೆ ಪ್ರೀತಿಯಲ್ಲಿ ಬಿದ್ದು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾಳೆಂದು ಪೋಷಕರು ಹಲವು ಬಾರಿ ಬುದ್ಧಿ ಮಾತು ಹೇಳಿದ್ದರು. ಕೊನೆಗೆ ತಂದೆ ಆಕೆಯನ್ನು ಕೊಂದು ಬೆಂಕಿ ಹಾಕಿ ಸುಟ್ಟು ಹಾಕಿದ್ದ.

ಆಂಧ್ರಪ್ರದೇಶ: ಪ್ರೇಮ ಪ್ರಕರಣ,  ಮಗಳಿಗೆ ನೇಣು ಬಿಗಿದು ಸುಟ್ಟು ಹಾಕಿದ್ದ ವ್ಯಕ್ತಿ ಪೊಲೀಸರಿಗೆ ಶರಣು
ಪೊಲೀಸ್​ Image Credit source: Hindustan Times
ನಯನಾ ರಾಜೀವ್
|

Updated on: Mar 06, 2025 | 8:59 AM

Share

ಆಂಧ್ರಪ್ರದೇಶ, ಮಾರ್ಚ್​ 06: ಮಗಳು ಪ್ರೀತಿಸುತ್ತಿರುವ ವಿಚಾರ ತಿಳಿದು ಕೋಪಗೊಂಡು ಆಕೆಯನ್ನು ನೇಣು ಬಿಗಿದು ಕೊಂದು, ಸುಟ್ಟು ಹಾಕಿದ್ದ ವ್ಯಕ್ತಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ದಕ್ಷಿಣ ರಾಜ್ಯದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಗುಂತಕಲ್ ಪಟ್ಟಣದ ಟಿ ರಾಮಾಂಜನೇಯುಲು ಎಂದು ಗುರುತಿಸಲಾದ ಆರೋಪಿ ಮಾರ್ಚ್ 1 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಸಾಪುರಂ ಗ್ರಾಮದ ನಿರ್ಜನ ಸ್ಥಳದಲ್ಲಿ ತನ್ನ ಮಗಳನ್ನು ನೇಣು ಬಿಗಿದು ಕೊಲೆ ಮಾಡಿದ್ದ. ಬಳಿಕ ಆಕೆಯ ದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ಆರೋಪಿ ತಿಂಡಿ ಮತ್ತು ಉಪಾಹಾರ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆಕೆ ಪೋಷಕರ ಮಾತನ್ನು ಧಿಕ್ಕರಿಸಿ ಪ್ರಿಯಕರನನ್ನು ಆಗಾಗ ಭೇಟಿಯಾಗುತ್ತಿದ್ದಳು. ಅವಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು ಮತ್ತು ತನ್ನ ತಾಯಿಯೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದಳು. ಇದರಿಂದ ಬೇಸರಗೊಂಡ ತಂದೆ ಮಾರ್ಚ್​ 1 ರಂದು ಕಸಾಪುರಂಗೆ ಕರೆದೊಯ್ದು ಮರಕ್ಕೆ ನೇತು ಹಾಕಿದ್ದಾರೆ.

ಇದನ್ನೂ ಓದಿ
Image
ಹೈದರಾಬಾದ್: ಪತ್ನಿ, ಮಗನಿಂದ ವೈದ್ಯನ ಹತ್ಯೆ
Image
ತಮಿಳುನಾಡಿನಿಂದ ಕೊಯಮತ್ತೂರಿಗೆ ಹೋಗಿ ಹೆಂಡತಿಯನ್ನು ಕೊಂದ ಗಂಡ!
Image
ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಯುವಕ
Image
ಕೇರಳ: ಅಕ್ರಮ ಸಂಬಂಧದ ಶಂಕೆ, ಪತ್ನಿ, ಸ್ನೇಹಿತನ ಕೊಲೆಗೈದ ವ್ಯಕ್ತಿ

ಮತ್ತಷ್ಟು ಓದಿ: ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ವ್ಯಕ್ತಿ ದುರಂತ ಅಂತ್ಯ

ಕಳೆದ ಐದು ವರ್ಷಗಳಿಂದ ತನ್ನ ಗೆಳೆಯನನ್ನು ಪ್ರೀತಿಸುತ್ತಿದ್ದಳು. ಆದರೆ, ಅವರ ಪೋಷಕರಿಗೆ ಈ ಸಂಬಂಧದ ಬಗ್ಗೆ ತಿಳಿದ ನಂತರ ಅವರ ಸಂಬಂಧವನ್ನು ನಿರಾಕರಿಸಿದ್ದರು. ಯುವತಿ ಎರಡನೇ ವರ್ಷದ ಪದವಿ ಪಡೆಯುತ್ತಿದ್ದಳು, ಗೆಳೆಯ ಹೈದರಾಬಾದ್​ನಲ್ಲಿ ಪದವಿ ಪಡೆಯುತ್ತಿದ್ದ. ಮೃತಳು ಟಿ ರಾಮಾಂಜನೇಯುಲು ಅವರ ನಾಲ್ವರು ಹೆಣ್ಣುಮಕ್ಕಳಲ್ಲಿ ಕಿರಿಯವಳಾಗಿದ್ದಳು.

ಆಕೆಯ ಮೂವರು ಅಕ್ಕಂದಿರು ಅವಿದ್ಯಾವಂತರಾಗಿದ್ದರಿಂದ, ಆಕೆಯ ಒಡಹುಟ್ಟಿದವರಲ್ಲಿ ಶಿಕ್ಷಣ ಪಡೆದ ಏಕೈಕ ವ್ಯಕ್ತಿ ಅವಳು. ಪೊಲೀಸರ ಪ್ರಕಾರ, ಆಕೆಯ ಪೋಷಕರು ಆಕೆಯ ಮೇಲೆ ಹೆಚ್ಚಿನ ಭರವಸೆ ಇಟ್ಟಿದ್ದರು. ಆಕೆಯ ತಂದೆಯ ಹತಾಶೆಗೆ ಇದು ಒಂದು ಕಾರಣವಾಗಿರಬಹುದು. ರಾಮಾಂಜನೇಯುಲು ಪೊಲೀಸರ ಮುಂದೆ ಶರಣಾದರು, ಪೊಲೀಸರು ಈಗ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103 ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಮುಂದುವರೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!