AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಂಧ್ರ ಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಯನ್ನು ಎಲ್ಲರೆದುರು ನಿಂದಿಸಿದ ಸಚಿವ; ಪ್ರತಿಪಕ್ಷಗಳಿಂದ ವಿರೋಧ

ಬಿಜೆಪಿಯಷ್ಟೇ ಅಲ್ಲ, ಆಂಧ್ರಪ್ರದೇಶದ ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ (ಟಿಡಿಪಿ) ಎಂಎಲ್​ಸಿ ನಾರಾ ಲೋಕೇಶ್​ ಕೂಡ ಈ ವಿಡಿಯೋ ಟ್ವೀಟ್ ಮಾಡಿಕೊಂಡಿದ್ದಾರೆ. ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Video: ಆಂಧ್ರ ಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಯನ್ನು ಎಲ್ಲರೆದುರು ನಿಂದಿಸಿದ ಸಚಿವ; ಪ್ರತಿಪಕ್ಷಗಳಿಂದ ವಿರೋಧ
ಪೊಲೀಸ್ ಅಧಿಕಾರಿಯನ್ನು ನಿಂದಿಸಿದ ಸಚಿವ
TV9 Web
| Edited By: |

Updated on: Feb 10, 2022 | 12:41 PM

Share

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್​ ರೆಡ್ಡಿ(Andhra Pradesh CM YS Jagan Mohan Reddy)ನಿನ್ನೆ (ಫೆ.9) ವಿಶಾಖಪಟ್ಟಣದಲ್ಲಿ ಶ್ರೀ ಶಾರದಾ ಪೀಠದ (Sri Sarada Peetham in Visakhapatnam) ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಅವರು ಸುಮಾರು ನಾಲ್ಕೂವರೆ ತಾಸುಗಳ ಕಾಲ ಇದ್ದರು. ಆದರೆ ಇದೇ ವೇಳೆ ರಾಜ್ಯ ಪಶುಸಂಗೋಪನಾ ಇಲಾಖೆ ಸಚಿವ ಸೀದಿರಿ ಅಪ್ಪಲರಾಜು ಅವರು ಸ್ಥಳದಲ್ಲಿದ್ದ ಪೊಲೀಸ್​ ಅಧಿಕಾರಿಯೊಬ್ಬರನ್ನು ನಿಂದಿಸಿ, ಅವರಿಗೆ ಬೈದಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬಿಜೆಪಿಯ ಆಂಧ್ರಪ್ರದೇಶ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣು ವರ್ಧನ್​ ರೆಡ್ಡಿ ಕೂಡ್​ ಶೇರ್ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಜಗನ್​ ರೆಡ್ಡಿಯವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತನ್ನ ಬೆಂಬಲಿಗರಿಗೆ ಪೊಲೀಸ್ ಅಧಿಕಾರಿ ಪ್ರವೇಶ ಕೊಡಲಿಲ್ಲ ಎಂಬ ಕಾರಣಕ್ಕೆ  ಸೀದಿರಿ ಅಪ್ಪಲರಾಜು ಪೊಲೀಸ್​ ಅಧಿಕಾರಿಯೊಬ್ಬ ಬಳಿ ಜಗಳವಾಡಿದ್ದಾರೆ. ಆ ಅಧಿಕಾರಿಯನ್ನು ನಿಂದಿಸಿದ್ದಾರೆ. ಬಳಿಕ ಅಲ್ಲಿಗೆ ಆಗಮಿಸಿದ ಎಸಿಪಿ ಸಚಿವರನ್ನು ಸಮಾಧಾನ ಮಾಡಿ ಕಳಿಸಿದ್ದಾರೆ.  ಆದರೆ ಸಚಿವರ ಈ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಅಷ್ಟೇ ಅಲ್ಲ, ನೆಟ್ಟಿಗರೂ ಕೂಡ ವಿರೋಧಿಸಿದ್ದಾರೆ. ವಿಡಿಯೋ ಶೇರ್ ಮಾಡಿರುವ ವಿಷ್ಣು ವರ್ಧನ್​ ರೆಡ್ಡಿ, ಸಚಿವರ ಅಹಂಕಾರ ಅದೆಷ್ಟು ಉತ್ತುಂಗದಲ್ಲಿದೆಯೆಂದರೆ, ಅವರು ಈ ರಾಜ್ಯದ ಮೂಲಭೂತ ಕಾನೂನು ಕೂಡ ಮರೆತಿದ್ದಾರೆ. ಪೊಲೀಸ್ ಸಿಬ್ಬಂದಿಯೊಂದಿಗೇ ಹೀಗೆ ವರ್ತಿಸುತ್ತಿದ್ದಾರೆ ಎಂದರೆ, ಸಾಮಾನ್ಯ ಜನರೊಂದಿಗೆ ಇನ್ನು ಹೇಗೆ ವರ್ತಿಸಬಹುದು. ಇವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯಷ್ಟೇ ಅಲ್ಲ, ಆಂಧ್ರಪ್ರದೇಶದ ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ (ಟಿಡಿಪಿ) ಎಂಎಲ್​ಸಿ ನಾರಾ ಲೋಕೇಶ್​ ಕೂಡ ಈ ವಿಡಿಯೋ ಟ್ವೀಟ್ ಮಾಡಿಕೊಂಡಿದ್ದಾರೆ. ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿ, ನಿಂದಿಸಿದ ಈ ಸಚಿವರ ವಿರುದ್ಧ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Rohit Sharma: ಮೈದಾನದಲ್ಲೇ ತಾಳ್ಮೆ ಕಳೆದುಕೊಂಡ ರೋಹಿತ್: ಸಿಟ್ಟಿನಲ್ಲಿ ಚಹಲ್​ಗೆ ಹೇಳಿದ್ದೇನು ಗೊತ್ತಾ?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ