AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಹನುಮಾನ್ ಮಂದಿರ ನಿರ್ಮಿಸಿ ಎಲ್ಲರಿಗೂ ಮಾದರಿಯಾಗುತ್ತಿದೆ ಈ ಮುಸ್ಲಿಂ ಕುಟುಂಬ

ಭಾರತದಲ್ಲಿ ಹಲವು ಜಾತಿ, ಧರ್ಮಗಳಿವೆ. ಜಾತಿ, ಧರ್ಮ ಮೀರಿ ಬದುಕಿ ಹತ್ತು ಮಂದಿಗೆ ಮಾದರಿಯಾಗಿ ನಿಲ್ಲುವ ಕೆಲವರಿದ್ದಾರೆ. ಕೆರೆಗೆ ನಾಲ್ಕು ದಾರಿಗಳಿದ್ದರೆ ಯಾವ ದಾರಿಯಲ್ಲಿ ಹೋದರೂ ಕೆರೆಯಿಂದ ನೀರು ಸಿಗುತ್ತದೆ. ಹಿಂದೂಗಳು ಮುಸ್ಲಿಂ ಹಬ್ಬಗಳಿಗೆ ಶುಭಾಶಯ ಕೋರುತ್ತಾರೆ. ಹಿಂದೂ ದೇವರುಗಳನ್ನು ಪೂಜಿಸುವ ಕೆಲವು ಮುಸ್ಲಿಮರಿದ್ದಾರೆ.

ಆಂಧ್ರದಲ್ಲಿ ಹನುಮಾನ್ ಮಂದಿರ ನಿರ್ಮಿಸಿ ಎಲ್ಲರಿಗೂ ಮಾದರಿಯಾಗುತ್ತಿದೆ ಈ ಮುಸ್ಲಿಂ ಕುಟುಂಬ
ದೇವಸ್ಥಾನ
ನಯನಾ ರಾಜೀವ್
|

Updated on: Jul 18, 2024 | 1:58 PM

Share

ಜಾತಿ, ಧರ್ಮದ ಹೆಸರಿನಲ್ಲಿ ಒಬ್ಬರಿಗೊಬ್ಬರು ದ್ವೇಷ ಕಾರುತ್ತಿರುವ ಈ ಸಮಯದಲ್ಲಿ ಇಲ್ಲೊಂದು ಮುಸ್ಲಿಂ ಕುಟುಂಬ ಹನುಮಾನ್ ಮಂದಿರವನ್ನು ಕಟ್ಟಿ ಎಲ್ಲರಿಗೂ ಮಾದಿರಿಯಾಗಿದ್ದಾರೆ. ಪೂರ್ವಜರು ಕೊಟ್ಟ ಮಾತಿಗೆ ತಲೆದೂಗಿ ಈ ಕುಟುಂಬವು ಆಂಜನೇಯನ ದೇವಸ್ಥಾನವನ್ನು ನಿರ್ಮಿಸುತ್ತಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಕುಟುಂಬ 14 ವರ್ಷಗಳ ಹಿಂದೆಯೇ ಈ ಕಾಮಗಾರಿ ಆರಂಭಿಸಿತ್ತು, ಈಗಲೂ ಮುಂದುವರೆದಿದೆ. ಚಿತ್ತೂರು ಜಿಲ್ಲೆಯ ಪುಲಿಚೇರಲ್ ಮಂಡಲದ ಕೆ.ಕೊತ್ತಪೇಟ ಗ್ರಾಮದ ಫಿರೋಜ್ ಮತ್ತು ಚಾಂದ್ ಭಾಷಾ ಸಹೋದರರು ತಮ್ಮ ತಂದೆ ಅಜೀದ್ ಬಾಷಾ ಅವರ ಆಶಯದಂತೆ ಏಳು ದೇವಾಲಯಗಳ ಸಂಕೀರ್ಣದೊಂದಿಗೆ ದೇವಾಲಯವನ್ನು ನಿರ್ಮಿಸುತ್ತಿದ್ದಾರೆ.

ಫಿರೋಜ್ ಮತ್ತು ಚಾಂದ್ ಬಾಷಾ ಅವರ ತಾತನಿಗೆ ಮಕ್ಕಳಿಲ್ಲದ ಕಾರಣ ಸ್ವಾಮೀಜಿಯೊಬ್ಬರ ಸಲಹೆ ಮೇರೆಗೆ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿದರು. ಫಿರೋಜ್ ಮತ್ತು ಚಾಂದ್ ಬಾಷಾ ತಮ್ಮ ತಂದೆ ಅಜೀದ್ ಬಾಷಾ ಅವರು ತಮ್ಮ ಅಜ್ಜನ ಪೂಜೆಯ ಫಲವೆಂದು ಹೇಳುತ್ತಾರೆ. ಹಾಗಾಗಿ ತಂದೆಯ ಮಹತ್ವಾಕಾಂಕ್ಷೆಯಂತೆ ಈ ದೇವಾಲಯವನ್ನು ನಿರ್ಮಿಸುತ್ತಿರುವುದಾಗಿ ತಿಳಿಸಿದರು.

ಮತ್ತಷ್ಟು ಓದಿ: ಒಂದೇ ವಾರದಲ್ಲಿ 2ನೇ ಬಾರಿ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ಬಾಗಿಲು ಓಪನ್; ಕಾರಣ ಇಲ್ಲಿದೆ

ದೇವಾಲಯದಲ್ಲಿ ಏಳು ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಕಾಮಗಾರಿ ಆರಂಭವಾಗಿದೆ ಎಂದು ಫಿರೋಜ್ ತಿಳಿಸಿದರು. 2010ರಲ್ಲಿ ಈ ದೇವಸ್ಥಾನದ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಈ ದೇವಸ್ಥಾನಕ್ಕೆ ಮೇಸ್ತ್ರಿ ಹಾಗೂ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದರು. ತಮ್ಮ ಶಕ್ತಿ ಮೀರಿ ಖರ್ಚು ಮಾಡಿ ಈ ದೇವಸ್ಥಾನ ಕಟ್ಟುತ್ತಿದ್ದಾರೆ.

ಆದರೆ, ಪ್ರತಿದಿನದ ಖರ್ಚಿನ ಬಗ್ಗೆ ಯೋಚಿಸುತ್ತಿರಲಿಲ್ಲ. ಪ್ರಸ್ತುತ ಈ ದೇವಾಲಯದ ಆವರಣದಲ್ಲಿ ಆಂಜನೇಯಸ್ವಾಮಿ, ವಿನಾಯಕ ಮತ್ತು ಸಾಯಿಬಾಬಾ ಮಂದಿರಗಳನ್ನು ನಿರ್ಮಿಸಲಾಗಿದೆ. ಆದರೆ, ದಾನಿಗಳು ನೆರವು ನೀಡಿದರೆ ಉಳಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಮಂದಿರ ನಿರ್ಮಾಣ ಪೂರ್ಣಗೊಳಿಸುತ್ತೇವೆ ಎನ್ನುತ್ತಾರೆ.

ಕೆ.ಕೊತ್ತಪೇಟ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಈ ದೇವಸ್ಥಾನದಲ್ಲಿ ಏಳು ದೇವರ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತದೆ, ಮೊದಲು ಆಂಜನೇಯಸ್ವಾಮಿ ಮಂದಿರ ನಿರ್ಮಾಣವಾಗಿದೆ. ನಂತರ ಅಕ್ಕಪಕ್ಕದಲ್ಲಿ ಗಣೇಶ ಮತ್ತು ಸಾಯಿಬಾಬಾರವರ ಗುಡಿಗಳನ್ನು ನಿರ್ಮಿಸಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಕಂಕಣ ಕಟ್ಟಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ ನೀಡಿದರು. ತಿರುಮಲ ಶ್ರೀವಾರಿ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಬರುವ ಅನೇಕ ಭಕ್ತರಿಗೆ ವಿಶ್ರಾಂತಿ ಪಡೆಯಲು ತಮ್ಮ ದೇವಸ್ಥಾನ ಲಭ್ಯವಾಗಲಿದೆ ಎನ್ನುತ್ತಾರೆ ಈ ಮುಸ್ಲಿಂ ಬಾಂಧವರು. ಅವರ ಈ ಕಾರ್ಯ ಉಳಿದವರಿಗೂ ಮಾದರಿಯಾಗಲಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ